'ನಟರಾಜ ಸರ್ವಿಸ್'ಗೆ ಹಾಡಿನ ಚಿತ್ರೀಕರಣ 
ಸಿನಿಮಾ ಸುದ್ದಿ

'ನಟರಾಜ ಸರ್ವಿಸ್'ಗೆ ಹಾಡಿನ ಚಿತ್ರೀಕರಣ

ಪವನ್ ಒಡೆಯರ್ ನಿರ್ದೇಶನದ 'ನಟರಾಜ ಸರ್ವಿಸ್' ಸಿನೆಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಪುನೀತ್ ರಾಜಕುಮಾರ್ ಅರ್ಪಿಸುತ್ತಿರುವ ಈ ಸಿನೆಮಾದಲ್ಲಿ

ಬೆಂಗಳೂರು: ಪವನ್ ಒಡೆಯರ್ ನಿರ್ದೇಶನದ 'ನಟರಾಜ ಸರ್ವಿಸ್' ಸಿನೆಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಪುನೀತ್ ರಾಜಕುಮಾರ್ ಅರ್ಪಿಸುತ್ತಿರುವ ಈ ಸಿನೆಮಾದಲ್ಲಿ ಶರಣ್ ನಾಯಕನಟನಾಗಿ ಅಭಿನಯಿಸುತ್ತಿದ್ದು, ಮಯೂರಿ ನಾಯಕ ನಟಿ. ಎನ್ ಎಸ್ ರಾಜಕುಮಾರ್ ನಿರ್ಮಿಸುತ್ತಿರುವ ಈ ಸಿನೆಮಾದ ಹಾಡೊಂದರ ಚಿತ್ರೀಕರಣ ಬೆಂಗಳೂರಿನಲ್ಲಿ ಸಂಪೂರ್ಣಗೊಂಡಿದೆ.

ಚಲನಚಿತ್ರದ ಮೊದಲ ನೋಟವನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಕಥೆಯ ಬಗ್ಗೆ ಕುತೂಹಲ ಹುಟ್ಟಿಸಿದೆ. "ಚಿತ್ರತಂಡದಲ್ಲಿ ಸ್ವಲ್ಪ ಆಸಕ್ತಿ ಕೆರಳಿಸಲು ಹಾಡಿನ ಚಿತ್ರೀಕರಣದಿಂದ ಪ್ರಾರಂಭಿಸಿದೆವು. ಇದು ಟಪಾಂಗುಚ್ಚಿ ಹಾಡು. ಇದನ್ನು ನಾನೆ ಬರೆದಿದ್ದೇನೆ" ಎಂದು ವಿವರಿಸುತ್ತಾರೆ ನಿರ್ದೇಶಕ ಪವನ್.

ನಟರಾಜ ಪೆನ್ಸಿಲ್ ನಲ್ಲಿ ಸ್ಕ್ರಿಪ್ಟ್ ಬರೆಯುತ್ತಿದ್ದ ಪವನ್ ಅವರಿಗೆ 'ನಟರಾಜ ಸರ್ವಿಸ್' ಶೀರ್ಷಿಕೆ ಹೊಳೆಯಿತಂತೆ. "ಹಿರೋ ಹೆಸರು ನಟರಾಜ, ಹೀಗೇ ಯೋಚನೆ ಮಾಡುವಾಗ ನಾನು ಬರೆಯುತ್ತಿದ್ದ ಪೆನ್ಸಿಲ್ ಹೆಸರು ಕೂಡ ನಟರಾಜ, ಆದುದರಿಂದ ಈ ಶೀರ್ಷಿಕೆ ಹೊಳೆಯಿತು" ಎಂದು ಪವನ್ ತಿಳಿಸುತ್ತಾರೆ.

ಮುರಳಿ ನೃತ್ಯ ನಿರ್ದೇಶಕ. ಅನೂಪ್ ಸೀಳಿನ್ ಸಂಗೀತ ಮತ್ತು ಅರುಳ್ ಕೆ ಸೋಮಸುಂದರಂ ಛಾಯಾಗ್ರಹಣ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ