ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರಹಮಾನ್ 
ಸಿನಿಮಾ ಸುದ್ದಿ

ಎ ಆರ್ ರಹಮಾನ್ ಗೆ ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ

ಭಾರತೀಯ ಸಂಗೀತ ಲೋಕವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರಹಮಾನ್ ಅವರಿಗೆ ಅಕ್ಟೋಬರ್ ೨೬ ರಂದು

ಮುಂಬೈ: ಭಾರತೀಯ ಸಂಗೀತ ಲೋಕವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರಹಮಾನ್ ಅವರಿಗೆ ಅಕ್ಟೋಬರ್ ೨೬ ರಂದು ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಪಂಡಿತ್ ಹೃದಯನಾಥ್ ಮಂಗೇಶ್ಕರ್ ಅವರ ಜನ್ಮ ದಿನದಂದು ಐದನೇ ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ ಯನ್ನು ರಹಮಾನ್ ಅವರಿಗೆ ಖ್ಯಾತ ಬಾಲಿವುಡ್ ನಿರ್ದೇಶಕ ಸುಭಾಶ್ ಗಯ್ ಅವರು ಪ್ರಧಾನ ಮಾಡಲಿದ್ದಾರೆ. ಹೃದಯನಾಥ್ ಮಂಗೇಶ್ಕರ್ ಅವರು ಖ್ಯಾತ ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಆಶಾ ಭೋಂಸ್ಲೆ ಅವರ ಸಹೋದರ.

ಮುಂಬೈನ ದೀನನಾಥ್ ಮಂಗೇಶ್ಕರ್ ಹಾಲಿನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಏರ್ಪಡಿಸಲಾಗಿದೆ.

ಈ ಹಿಂದೆ ಲತಾ ಮಂಗೇಶ್ಕರ್, ಆಶಾ ಭೋಂಸ್ಲೆ, ಅಮಿತಾಬ್ ಬಚ್ಚನ್ ಮತ್ತು ಸುಲೋಚನ ಥೈ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT