ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರಹಮಾನ್ 
ಸಿನಿಮಾ ಸುದ್ದಿ

ಎ ಆರ್ ರಹಮಾನ್ ಗೆ ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ

ಭಾರತೀಯ ಸಂಗೀತ ಲೋಕವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರಹಮಾನ್ ಅವರಿಗೆ ಅಕ್ಟೋಬರ್ ೨೬ ರಂದು

ಮುಂಬೈ: ಭಾರತೀಯ ಸಂಗೀತ ಲೋಕವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರಹಮಾನ್ ಅವರಿಗೆ ಅಕ್ಟೋಬರ್ ೨೬ ರಂದು ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಪಂಡಿತ್ ಹೃದಯನಾಥ್ ಮಂಗೇಶ್ಕರ್ ಅವರ ಜನ್ಮ ದಿನದಂದು ಐದನೇ ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ ಯನ್ನು ರಹಮಾನ್ ಅವರಿಗೆ ಖ್ಯಾತ ಬಾಲಿವುಡ್ ನಿರ್ದೇಶಕ ಸುಭಾಶ್ ಗಯ್ ಅವರು ಪ್ರಧಾನ ಮಾಡಲಿದ್ದಾರೆ. ಹೃದಯನಾಥ್ ಮಂಗೇಶ್ಕರ್ ಅವರು ಖ್ಯಾತ ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಆಶಾ ಭೋಂಸ್ಲೆ ಅವರ ಸಹೋದರ.

ಮುಂಬೈನ ದೀನನಾಥ್ ಮಂಗೇಶ್ಕರ್ ಹಾಲಿನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಏರ್ಪಡಿಸಲಾಗಿದೆ.

ಈ ಹಿಂದೆ ಲತಾ ಮಂಗೇಶ್ಕರ್, ಆಶಾ ಭೋಂಸ್ಲೆ, ಅಮಿತಾಬ್ ಬಚ್ಚನ್ ಮತ್ತು ಸುಲೋಚನ ಥೈ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT