ನಟಿ ಹರಿಪ್ರಿಯ 
ಸಿನಿಮಾ ಸುದ್ದಿ

ರಮ್ಯ ಜಾಗಕ್ಕೆ ಹರಿಪ್ರಿಯ; ಮತ್ತೆ ಹೆಂಚಿನ ಮೇಲೆ ನೀರ್ ದೋಸೆ

ಕೆಲವು ವಿವಾದಗಳಿಗೆ ಕೊನೆಯೇ ಇರುವುದಿಲ್ಲ. ಅಂತಹ ಒಂದು ಯೋಜನೆ ನೀರ್ ದೋಸೆ. ಈಗಾಗಲೇ ಹಲವಾರು ಬಾರಿ ನಿರ್ಮಾಪಕರು ಕೈಚೆಲ್ಲಿ ತಡವಾಗಿದ್ದ

ಬೆಂಗಳೂರು: ಕೆಲವು ವಿವಾದಗಳಿಗೆ ಕೊನೆಯೇ ಇರುವುದಿಲ್ಲ. ಅಂತಹ ಒಂದು ಯೋಜನೆ ನೀರ್ ದೋಸೆ. ಈಗಾಗಲೇ ಹಲವಾರು ಬಾರಿ ನಿರ್ಮಾಪಕರು ಕೈಚೆಲ್ಲಿ ತಡವಾಗಿದ್ದ ಯೋಜನೆ ಮತ್ತೆ ಪ್ರಾರಂಭವಾಗುವ ಶುಭ ಸೂಚನೆ ದೊರೆತಿದೆ. ಈ ಯೋಜನೆಯನ್ನು ನಟಿ ರಮ್ಯ ತೊರೆದಿದ್ದರಿಂದ ಸಿನೆಮಾಗೆ ಎಳ್ಳು ನೀರು ಬಿಡಲಾಗಿದೆ ಎನ್ನಲಾಗಿತ್ತು. ಆದರೆ ಈಗ ರಮ್ಯ ಅವರ ಜಾಗಕ್ಕೆ ಹರಿಪ್ರಿಯ ಅವರು ಬಂದಿದ್ದಾರೆ ಎನ್ನಲಾಗಿದ್ದು, ಸಿದ್ಲಿಂಗು ಖ್ಯಾತಿಯ ವಿಜಯ್ ಪ್ರಸಾದ್ ಸಿನೆಮಾ ಮುಂದುವರೆಸುವ ಸೂಚನೆ ನೀಡಿದ್ದಾರೆ.

ಸ್ಕಂದ ಎಂಟರ್ಟೈನ್ಮೆಂಟ್ ಪ್ರೈ ಲಿ ಈ ಯೋಜನೆಯನ್ನು ಅಧಿಕೃತವಾಗಿ ಮುಂದುವರಿಸಲಿದೆ. ನಟ ಜಗ್ಗೇಶ್ ಮತ್ತು ದತ್ತಣ್ಣ ಸಮ್ಮುಖದಲ್ಲಿ ಮತ್ತೆ ಪೂಜೆಯನ್ನು ನೆರವೇರಿಸಲಾಗಿದ್ದು ಚಿತ್ರೀಕರಣ ಸೆಪ್ಟಂಬರ್ ೯ ಅಥವಾ ೧೦ ರಂದು ಪ್ರಾರಂಭವಾಗಲಿದೆ.

ಒಂದು ವಾರದವೆರೆಗೆ ಮೊದಲ ಹಂತದ ಚಿತ್ರೀಕರಣ ನಡೆಯಲಿದ್ದು, ಅಕ್ಟೋಬರ್ ನಲ್ಲಿ ಉಳಿದ ಭಾಗದ ಚಿತ್ರೀಕರಣ ನಡೆಯಲಿದೆ. ರಮ್ಯ ಜೊತೆ ಸುಮಾರು ೪೦% ಚಿತ್ರೀಕರಣ ಈಗಾಗಲೇ ಮುಗಿದಿತ್ತು, ಆದರೆ ಅದನ್ನು ಈಗ ಕೈಬಿಟ್ಟು ಅದನ್ನೆಲ್ಲಾ ಮರುಚಿತ್ರೀಕರಣ ಮಾಡಬೇಕಿದೆ.

ಬಲ್ಲ ಮೂಲಗಳ ಪ್ರಕಾರ ನೀರ್ ದೋಸೆಯಲ್ಲಿ ಹರಿಪ್ರಿಯ ಲೈಂಗಿಕ ಕಾರ್ಯಕರ್ತೆಯ ಪಾತ್ರ ನಿರ್ವಹಿಸಲಿದ್ದು, ಸುಮನ್ ರಂಗನಾಥ್, ದತ್ತಣ್ಣ ಮತ್ತು ಜಗ್ಗೇಶ್ ಮುಖ್ಯ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Israel-Gaza ಯುದ್ಧ ಕೊನೆಗೂ ಅಂತ್ಯ: ಶಾಂತಿ ಒಪ್ಪಂದದ ಮೊದಲ ಹಂತಕ್ಕೆ ಇಸ್ರೇಲ್–ಹಮಾಸ್ ಒಪ್ಪಿಗೆ, ಶೀಘ್ರದಲ್ಲೇ ಒತ್ತೆಯಾಳುಗಳ ಬಿಡುಗಡೆ

ಕುರುಬರಿಗೆ ಎಸ್‌ಟಿ ಮೀಸಲಾತಿ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ?

'Bigg boss' ಮನೆ ರೀ ಓಪನ್: ರೆಸಾರ್ಟ್​​ನಿಂದ 'ಜಾಲಿವುಡ್'ಗೆ ಮರಳಿದ ಸ್ಪರ್ಧಿಗಳು, ಆಟ ಮತ್ತೆ ಶುರು

20 ಕ್ಕೂ ಹೆಚ್ಚು ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್‌: ಫಾರ್ಮಾ ಕಂಪನಿಯ ಮಾಲೀಕ ಅರೆಸ್ಟ್

OCs, CCs ಇಲ್ಲದ ಕಟ್ಟಡಗಳಿಗೆ ವಿದ್ಯುತ್-ನೀರು ಸಂಪರ್ಕ: ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ; ಡಿಕೆ.ಶಿವಕುಮಾರ್

SCROLL FOR NEXT