'ಟೈಗರ್' ಚಿತ್ರೀಕರಣದಲ್ಲಿ ನಿರ್ದೇಶಕ ನಂದಕಿಶೋರ್ ಜೊತೆ ನಟ ಓಂ ಪುರಿ ಚರ್ಚೆ 
ಸಿನಿಮಾ ಸುದ್ದಿ

'ಟೈಗರ್' ಮೂಲಕ ಕನ್ನಡ ಚಿತ್ರೋದ್ಯಮಕ್ಕೆ ಹಿಂದಿರುಗಿದ ಓಂ ಪುರಿ

ತಮ್ಮ ೬೫ ನೆಯ ವಯಸ್ಸಿನಲ್ಲಿಯೂ ಸಿನೆಮಾವನ್ನೇ ಉಸಿರಾಗಿಸಿಕೊಂಡಿರುವ ಓಂ ಪುರಿ ಕನ್ನಡ ಚಿತ್ರೋದ್ಯಮಕ್ಕೆ ಹಿಂದಿರುಗಿದ್ದಾರೆ. ನಿರ್ದೇಶಕ ನಂದಕಿಶೋರ್ ಅವರ 'ಟೈಗರ್'

ಬೆಂಗಳೂರು: ತಮ್ಮ ೬೫ ನೆಯ ವಯಸ್ಸಿನಲ್ಲಿಯೂ ಸಿನೆಮಾವನ್ನೇ ಉಸಿರಾಗಿಸಿಕೊಂಡಿರುವ ಓಂ ಪುರಿ ಕನ್ನಡ ಚಿತ್ರೋದ್ಯಮಕ್ಕೆ ಹಿಂದಿರುಗಿದ್ದಾರೆ. ನಿರ್ದೇಶಕ ನಂದಕಿಶೋರ್ ಅವರ 'ಟೈಗರ್' ಚಿತ್ರಕಥೆ ಕೇಳಿ ಚಿತ್ರದ ಭಾಗವಾಗಲು ಓಂ ಪುರಿ ಒಪ್ಪಿಗೆ ನೀಡಿದ್ದಾರೆ.

ಓಂ ಪುರಿ ಅವರು ಕಳೆದ ಬಾರಿ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಂಡಿದ್ದು ೧೯೯೯ರ ಎಕೆ-೪೭ ಚಿತ್ರದಲ್ಲಿ. ಓಂಪ್ರಕಾಶ್ ರಾವ್ ನಿರ್ದೇಶನದ ಈ ಚಿತ್ರದಲ್ಲಿ ಓಂ ಪುರಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರು. ಈಗ ಪ್ರದೀಪ್ ನಟನೆಯ 'ಟೈಗರ್' ನಲ್ಲೂ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರು ಚಿತ್ರತಂಡ ಸೇರಿದ್ದು, ಮುಂಬೈನಲ್ಲಿ ಚಿತ್ರೀಕರಣ ನಡೆಸುತ್ತಿದ್ದಾರೆ.

ಪ್ರದೀಪ್ ಜೊತೆ ಮಧುರಿಮಾ ಬ್ಯಾನರ್ಜಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು ಮತ್ತು ರವಿಶಂಕರ್ ಕೂಡ ನಟಿಸುತ್ತಿರುವುದು ವಿಶೇಷ.

ಅರ್ಜುನ್ ಜನ್ಯ ಸಂಗಿತ ನಿರ್ದೇಶಿಸುತ್ತಿದ್ದು, ಸುಧಾಕರ್ ಅವರ ಸಿನೆಮ್ಯಾಟೋಗ್ರಫಿ, ಯೋಗಾನಂದ್ ಮುದ್ದನ್ ಅವರ ಸಂಭಾಷಣೆ ಮತ್ತು ಕೆ ಎಂ ಪ್ರಕಾಶ್ ಅವರ ಸಂಕಲನ ಚಿತ್ರಕ್ಕಿದೆ.

ಪ್ರದೀಪ್ ಅವರ ಮಾವ ನಿವೃತ್ತ ಐ ಎ ಎಸ್ ಅಧಿಕಾರಿ ಶಿವರಾಂ ಚಿತ್ರದ ನಿರ್ಮಾಣದಲ್ಲಿ ಹೂಡಿಕೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ