ಅನನ್ಯ ಮತ್ತು ಗಿರೀಶ್ ಕಾಸರವಳ್ಳಿ 
ಸಿನಿಮಾ ಸುದ್ದಿ

ಅನನ್ಯಾ ಕಾಸರವಳ್ಳಿಯವರ 'ಹರಿಕಥಾ ಪ್ರಸಂಗ'

ಖ್ಯಾತ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಪುತ್ರಿ ಅನನ್ಯ ಕಾಸರವಳ್ಳಿ ನಿರ್ದೇಶನಕ್ಕೆ ಇಳಿದಿದ್ದಾರೆ. ಯಕ್ಷಗಾನ ಸ್ತ್ರೀ ಪಾತ್ರಧಾರಿ ಕಥಾ ಹಂದರವುಳ್ಳ 'ಹರಿಕಥಾ ಪ್ರಸಂಗ'

ಬೆಂಗಳೂರು: ಖ್ಯಾತ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಪುತ್ರಿ ಅನನ್ಯ ಕಾಸರವಳ್ಳಿ ನಿರ್ದೇಶನಕ್ಕೆ ಇಳಿದಿದ್ದಾರೆ. ಯಕ್ಷಗಾನ ಸ್ತ್ರೀ ಪಾತ್ರಧಾರಿ ಕಥಾ ಹಂದರವುಳ್ಳ 'ಹರಿಕಥಾ ಪ್ರಸಂಗ' ತನ್ನ ವ್ಯಕ್ತಿತ್ವ ಮತ್ತು ಸ್ವೀಕೃತಿಯನ್ನು ಹುಡುಕುವ ಕಥೆಯಂತೆ.

"ಸಿನೆಮಾ ನಿರ್ದೇಶನ ಧಿಡೀರ್ ನಿರ್ಧಾರ. ನನ್ನ ತಂದೆ ಮತ್ತು ಸಹೋದರ, ಸ್ಕ್ರಿಪ್ಟ್ ಲೇಖಕ ಗೋಪಾಲಕೃಷ್ಣ ಪೈ ಅವರೊಂದಿಗೆ ಮಾತುಕತೆ ನಡೆಸಿದ್ದರು. ನಾನು ಕೂಡ ಜೊತೆಗೆ ಸೇರಿಕೊಂಡೆ. ಎಲ್ಲರೂ ಕಥೆ ಇಷ್ಟ ಪಟ್ಟರು ಆಗ ಈ ಯೋಜನೆಯನ್ನು ಯಾರು ನಿರ್ದೇಶಿಸಬೇಕು ಎಂಬ ಸ್ಪರ್ಧೆ ಬಂತು. ಅಂಕಲ್ ಪೈ ನನಗೆ ಆಶೀರ್ವಾದ ಮಾಡಿದರು" ಎಂದು ವಿವರಿಸುತ್ತಾರೆ ಅನನ್ಯ.

ಅವರ ತಂದೆಯ ಮತ್ತು ಸಹೋದರನ ಸಿನೆಮಾಗಳಿಂದ ಸ್ಫೂರ್ತಿ ಪಡೆದಿದ್ದೇನೆ ಎನ್ನುವ ಅನನ್ಯ ಅವರ ಹೆಸರನ್ನು ಹೊತ್ತಿರುವುದರ ಬಗ್ಗೆ ಎಚ್ಚರಿಕೆ ಇದೆ ಎಂದು ಕೂಡ ತಿಳಿಸುತ್ತಾರೆ.

ಅನನ್ಯ ಈ ಹಿಂದೆ ಕೆಲವು ಸಿನೆಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ತಂದೆಯ ಸಿನೆಮಾಗಳಿಗೆ ವಸ್ತ್ರ ವಿನ್ಯಾಸಕಿಯಾಗಿ ಕೆಲಸ ಮಾಡಿರುವುದಲ್ಲದೆ ಶಾರ್ಟ್ ಸಿನೆಮಾಗಳನ್ನು ನಿರ್ದೇಶಿಸಿದ್ದಾರೆ.

ಬಸಂತ್ ಕುಮಾರ್ ಪಾಟಿಲ್ ಈ ಸಿನೆಮಾದ ನಿರ್ಮಾಪಕರಾಗಿದ್ದು, ಬೈಂದೂರು, ಕುಂದಾಪುರ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ. ಚಂಪಾ ಶೆಟ್ಟಿ, ಕೆ ಜಿ ಕೃಷ್ಣಮೂರ್ತಿ ಮುಖ್ಯ ಭೂಮಿಕೆಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT