ಸಾಹಸಸಿಂಹ ವಿಷ್ಣು ವರ್ಧನ್ ಸ್ಮಾರಕ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ವಿಷ್ಣು ಸಮಾಧಿ ನಿರ್ಮಾಣಕ್ಕೆ ನಟ ಬಾಲಕೃಷ್ಣ ಕುಟುಂಬ ಅಡ್ಡಿ..!

ಖ್ಯಾತ ನಟ, ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದ್ದು, ಸಮಾಧಿ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ದಿ. ಬಾಲಕೃಷ್ಣ ಕುಟುಂಬಸ್ಥರು ಮತ್ತೆ ತಕರಾರು ತೆಗೆದಿದ್ದಾರೆ ಎಂದು ತಿಳಿದುಬಂದಿದೆ...

ಬೆಂಗಳೂರು: ಖ್ಯಾತ ನಟ, ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದ್ದು, ಸಮಾಧಿ  ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ದಿ.  ಬಾಲಕೃಷ್ಣ ಕುಟುಂಬಸ್ಥರು ಮತ್ತೆ ತಕರಾರು ತೆಗೆದಿದ್ದಾರೆ ಎಂದು ತಿಳಿದುಬಂದಿದೆ.

ಅಭಿಮಾನ್ ಸ್ಟುಡಿಯೋಗೆ ಸೇರಿದ 10 ಎಕರೆ ಜಾಗದಲ್ಲಿ 2 ಎಕರೆ ಜಾಗವನ್ನು ವಿಷ್ಣುವರ್ಧನ್ ಸಮಾಧಿ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರಕ್ಕೆ ಹಾಗೂ ವಿಷ್ಣು ಪ್ರತಿಷ್ಠಾನ ಟ್ರಸ್ಟ್‌ಗೆ ನೀಡಲು ನಟ  ಬಾಲಣ್ಣನ ಕುಟುಂಬ ವರ್ಗ ಸಮ್ಮತಿಸಿತ್ತಾದರೂ, ಇಂದು ಆ 2 ಎಕರೆ ಜಾಗದಲ್ಲಿ ತಂತಿಬೇಲಿ ನಿರ್ಮಿಸಲು ತೆರಳಿದ್ದ ಸಿಬ್ಬಂದಿ ಕಾರ್ಯಕ್ಕೆ ಬಾಲಣ್ಣನ ಮಕ್ಕಳು ಹಾಗೂ ಮೊಮ್ಮಗ ಅಡ್ಡಿಪಡಿಸಿದ್ದಾರೆ  ಎಂದು ತಿಳಿದುಬಂದಿದೆ.

ಅಭಿಮಾನ್ ಸ್ಟುಡಿಯೋಗೆ ಸೇರಿದ 10 ಎಕರೆ ಜಾಗದಲ್ಲಿ 2 ಎಕರೆ ಜಾಗವನ್ನು ವಿಷ್ಣುವರ್ಧನ್ ಸಮಾಧಿ ಸ್ಮಾರಕ ನಿರ್ಮಿಸಲು ಸರಕಾರಕ್ಕೆ ಹಾಗೂ ವಿಷ್ಣು ಪ್ರತಿಷ್ಠಾನ ಟ್ರಸ್ಟ್‌ಗೆ ನೀಡಲು ನಟ  ಬಾಲಣ್ಣನ ಕುಟುಂಬ ವರ್ಗ ಸಮ್ಮತಿಸಿತ್ತು. ಈ ಸಂಬಂಧ ಖುದ್ದು ಸರ್ಕಾರಕ್ಕೆ ಮುಚ್ಚಳಿಕೆ ಕೂಡ ಪತ್ರ ಬರೆದುಕೊಟ್ಟಿದ್ದರು. ಪತ್ರದಲ್ಲಿ 2 ಎಕರೆ ಜಾಗವನ್ನು ವಿಷ್ಣು ಪ್ರತಿಷ್ಠಾನಕ್ಕೆ ನೀಡುತ್ತಿದ್ದು, ಈ  ಜಾಗದ ಮೇಲೆ ಬಾಲಣ್ಣನ ಕುಟುಂಬದವರಿಗೆ ಯಾವುದೇ ಹಕ್ಕಿರುವುದಿಲ್ಲ. ಜತೆಗೆ ಯಾವುದೇ ಕೋರ್ಟಿನಲ್ಲೂ ಈ ಬಗ್ಗೆ ತಾವು ಪ್ರಶ್ನಿಸುವುದಿಲ್ಲ. ಒಂದು ವೇಳೆ ಮಾತು ತಪ್ಪಿದರೆ ಸರ್ಕಾರ ಸೂಕ್ತ  ಶಿಸ್ತು ಕ್ರಮ ಜರುಗಿಸಲಿ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರು. ಈ ಪತ್ರಕ್ಕೆ ನಟ ಬಾಲಕೃಷ್ಣ ಅವರ ಮಗಳಾದ ಗೀತಾಬಾಲಿ, ಮಗ ಬಿ. ಗಣೇಶ್ ಹಾಗೂ ಮೊಮ್ಮಗ ಕಾರ್ತಿಕ್ ಸಹಿ ಮಾಡಿದ್ದರು.

ಆದರೆ ಈ ಜಾಗದಲ್ಲಿ ಇಂದು ಬೆಳಿಗ್ಗೆ ವಿಷ್ಣು ಪ್ರತಿಷ್ಠಾನದ ಸಿಬ್ಬಂದಿ ತಂತಿಬೇಲಿ ನಿರ್ಮಿಸಲು ಮುಂದಾಗಿದ್ದ  ವೇಳೆ ಬಾಲಕೃಷ್ಣ ಕುಟುಂಬ ಅಡ್ಡಿಪಡಿಸಿತು. ಯಾವುದೇ ಕಾರಣಕ್ಕೂ ಜಾಗ  ಬಿಟ್ಟುಕೊಡುವುದಿಲ್ಲ ಎಂದು ತಕರಾರು ತೆಗೆದಿದ್ದಾರೆ. ನಟ ಬಾಲಣ್ಣನ ಕುಟುಂಬದವರ ಈ ಕ್ರಮಕ್ಕೆ ವಿಷ್ಣು ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಘಟನೆಗೆ ಸಂಬಂಧಿಸಿದಂತೆ  ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಹ ನೀಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

ರಾಜ್ಯಾದ್ಯಂತ ಮಳೆ ಆರ್ಭಟ: ಬೆಂಗಳೂರು ಹೈರಾಣ, ಇನ್ನೂ 3 ದಿನ ಮಳೆ ಸಾಧ್ಯತೆ!

'ಭಾರತ ಆಪ್ತ ಸ್ನೆಹಿತ', 'ಪಾಕಿಸ್ತಾನಕ್ಕೆ ತುಂಬಾ ಕೆಟ್ಟದಾಗಿರುತ್ತದೆ': ಆಫ್ಘನ್ ಕ್ರಿಕೆಟಿಗ Allah Ghazanfar ಎಚ್ಚರಿಕೆ

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

SCROLL FOR NEXT