ಗುರುನಂದನ್ 
ಸಿನಿಮಾ ಸುದ್ದಿ

ರಘುರಾಮ್ ನಿರ್ದೇಶನದಲ್ಲಿ ಗುರುನಂದನ್ ಚಿತ್ರ

' ನಮಗಾಗಿ' ಸಿನಿಮಾದ ನಿರ್ದೇಶನ ಮಾಡುತ್ತಿರುವ ನಿರ್ದೇಶಕ ರಘುರಾಮ್ ತಮ್ಮ ಮುಂದಿನ ಚಿತ್ರಕ್ಕಾಗಿ ಗುರುನಂದನ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಫಸ್ಟ್ ರ್ಯಾಂಕ್ ರಾಜು ಖ್ಯಾತಿಯ ಗುರುನಂದನ್ ರಘುರಾಮ್ ನಿರ್ದೇಶನದಲ್ಲಿ ಅಭಿನಯಿಸಲಿದ್ದಾರೆ. 'ನಮಗಾಗಿ' ಸಿನಿಮಾದ ನಿರ್ದೇಶನ ಮಾಡುತ್ತಿರುವ ನಿರ್ದೇಶಕ ರಘುರಾಮ್ ತಮ್ಮ ಮುಂದಿನ ಚಿತ್ರಕ್ಕಾಗಿ ಗುರುನಂದನ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಚಿತ್ರ ಕತೆ ಕೇಳಿರುವ ಗುರುನಂದನ್ ಸಹ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರಂತೆ, ನಿರ್ಮಾಪಕರು ಯಾರೆಂಬುದು ಅಂತಿಮವಾದ ನಂತರ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದೇವೆ ಎಂದು ರಘುರಾಮ್ ತಿಳಿಸಿದ್ದಾರೆ. ಇನ್ನು ಗುರುನಂದನ್ ಸ್ಮೈಲ್ ಪ್ಲೀಸ್ ಸಿನಿಮಾ ಚಿತ್ರೀಕರಣಾದಲ್ಲಿದ್ದು, ಈ ಚಿತ್ರದ ನಂತರ ಫಸ್ಟ್ ರ್ಯಾಂಕ್ ರಾಜು ನಿರ್ದೇಶಕ ನರೇಶ್ ಕುಮಾರ್ ನಿರ್ದೇಶನದಲ್ಲಿ ಮತ್ತೊಂದು ಚಿತ್ರ ಮಾಡಲಿದ್ದಾರೆ. 
ರಘುರಾಮ್ ನಿರ್ದೇಶನದ ಚಿತ್ರ ತಾಯಿ-ಮಗನ ಸೆಂಟಿಮೆಂತ್ ನ ನೈಜ ಘಟನೆಯಾಧಾರಿತ ಚಿತ್ರವಾಗಿರಲಿದ್ದು, ಸ್ವಿಜರ್ಲ್ಯಾಂಡ್, ಬೆಂಗಳೂರು, ದಾವಣಗೆರೆ, ಚಿತ್ರದುರ್ಗ, ಹುಬ್ಬಳ್ಳಿಯಲ್ಲಿ ಚಿತ್ರೀಕರಣ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT