ರಾಜ್ ಕುಮಾರ್ ಸಮಾಧಿ 
ಸಿನಿಮಾ ಸುದ್ದಿ

ಡಾ. ರಾಜ್ 10ನೇ ಪುಣ್ಯ ತಿಥಿ; ಕುಟುಂಬ, ಅಭಿಮಾನಿಗಳ ಸ್ಮರಣೆ

ಕನ್ನಡ ಚಿತ್ರರಂಗದ ಮೇರು ನಟ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಡಾ. ರಾಜ್ ಕುಮಾರ್ ನಮ್ಮನ್ನಗಲಿ ಇಂದಿಗೆ 10 ವರ್ಷಗಳೇ ಕಳೆದಿವೆ. ಆದರೂ ಅಭಿಮಾನಿಗಳಲ್ಲಿ ಅವರ...

ಕನ್ನಡ ಚಿತ್ರರಂಗದ ಮೇರು ನಟ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಡಾ. ರಾಜ್ ಕುಮಾರ್ ನಮ್ಮನ್ನಗಲಿ ಇಂದಿಗೆ 10 ವರ್ಷಗಳೇ ಕಳೆದಿವೆ. ಆದರೂ ಅಭಿಮಾನಿಗಳಲ್ಲಿ ಅವರ ಮೇಲಿನ ಅಭಿಮಾನ, ಪ್ರೀತಿ, ಗೌರವಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ.

ರಾಜಣ್ಣರ ಹತ್ತನೇ ಪುಣ್ಯಸ್ಮರಣೆ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿನ ಡಾ. ರಾಜ್ ಸ್ಮಾರಕಕ್ಕೆ ರಾಜ್ ಸಹೋದರಿ ನಾಗಮ್ಮ, ಪಾರ್ವತಮ್ಮ ರಾಜ್ ಕುಮಾರ್, ಮಕ್ಕಳಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರೂ ರಾಜ್ ಪುಣ್ಯ ಸ್ಮರಣೆಯಲ್ಲಿ ಭಾಗಿಯಾಗಿದ್ದರು.ಇನ್ನು ರಾಜ್ಯದ ಮೂಲೆ ಮೂಲೆಯಿಂದ ಅಭಿಮಾನಿಗಳು ಆಗಮಿಸಿ ದರ್ಶನ ಪಡೆದರು.

ಇದೇ ಅಲ್ಲದೆ ಚಲನಚಿತ್ರ ವಾಣಿಜ್ಯ ಮ೦ಡಳಿ ಅಧ್ಯಕ್ಷ ಸಾ.ರಾ. ಗೋವಿ೦ದು, ನಿದೇ೯ಶಕ ಬರಗೂರು ರಾಮಚ೦ದ್ರಪ್ಪ, ಹಿರಿಯ ನಟ ಹೊನ್ನವಳ್ಳಿ ಕೃಷ್ಣ, ನಿದೇ೯ಶಕಿ ವಿಜಯಲಕ್ಷ್ಮಿ ಸಿ೦ಗ್, ಶಾಸಕ ಗೋಪಾಲಯ್ಯ ಸೇರಿದ೦ತೆ ಕನ್ನಡ ಚಿತ್ರರ೦ಗದ ಗಣ್ಯರು ಡಾ. ರಾಜ್ ಸ್ಮಾರಕಕ್ಕೆ ಪೂಜೆ ಸಲ್ಲಿಸಿದರು.

ಇನ್ನು ಕಂಠೀರವ ಸ್ಟುಡಿಯೋಗೆ ಆಗಮಿಸಿದ ಅಭಿಮಾನಿಗಳಿಗಾಗಿ ರಾಜ್ ಕುಟುಂಬ ಊಟದ ವ್ಯವಸ್ಥೆಯನ್ನು ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ