'ಉಪ್ಪು ಹುಳಿ ಖಾರ' ಸಿನೆಮಾಗೆ ಕ್ಲ್ಯಾಪ್ ಮಾಡಿದ ಲೇಖಕಿ ಸುಧಾ ಮೂರ್ತಿ 
ಸಿನಿಮಾ ಸುದ್ದಿ

'ಉಪ್ಪು ಹುಳಿ ಖಾರ' ದಲ್ಲಿ ಮೂರು 'ಶ್ರೀ'ಗಳನ್ನು ನಿರ್ದೇಶಿಸಲಿರುವ ಇಮ್ರಾನ್

ನೃತ್ಯ ನಿರ್ದೇಶಕನಿಂದ ನಿರ್ದೇಶಕನಾಗಿ ಭಡ್ತಿ ಪಡೆದು 'ಎಂದೆಂದಿಗೂ' ನಿರ್ದೇಶಿಸಿದ್ದ ಇಮ್ರಾನ್ ಸರ್ದಾರಿಯಾ ಈಗ ತಮ್ಮ ಎರಡನೆ ಚಿತ್ರ 'ಉಪ್ಪು ಹುಳಿ ಖಾರ'ಕ್ಕೆ ಅಣಿಯಾಗಿದ್ದಾರೆ.

ಬೆಂಗಳೂರು: ನೃತ್ಯ ನಿರ್ದೇಶಕನಿಂದ ನಿರ್ದೇಶಕನಾಗಿ ಭಡ್ತಿ ಪಡೆದು 'ಎಂದೆಂದಿಗೂ' ನಿರ್ದೇಶಿಸಿದ್ದ ಇಮ್ರಾನ್ ಸರ್ದಾರಿಯಾ ಈಗ ತಮ್ಮ ಎರಡನೆ ಚಿತ್ರ 'ಉಪ್ಪು ಹುಳಿ ಖಾರ'ಕ್ಕೆ ಅಣಿಯಾಗಿದ್ದಾರೆ. ಭಾನುವಾರ ಇದಕ್ಕೆ ಮುಹೂರ್ತ ನೆರವೇರಿದ್ದು ಇಂದಿನಿಂದ ಚಿತ್ರೀಕರಣ ಪ್ರಾಂಭವಾಗಲಿದೆ. ಎಂ ರಮೇಶ್ ರೆಡ್ಡಿ ಸಿನೆಮಾದ ನಿರ್ಮಾಪಕ.

ಸಿನೆಮಾಗೆ ಲೇಖಕಿ ಸುಧಾ ಮೂರ್ತಿ ಕ್ಲ್ಯಾಪ್ ಮಾಡಿದ್ದು, ಇಡಿ ಚಿತ್ರತಂಡ ಬನಶಂಕರಿ ದೇವಸ್ಥಾನದಲ್ಲಿ ನೆರೆದಿತ್ತು. "ಮೂರು 'ಶ್ರೀ'ಗಳು ಸಿನೆಮಾದಲ್ಲಿರುವುದು ನನಗೆ ಖುಷಿ ತಂದಿದೆ - ಮಾಲಾಶ್ರೀ, ಅನುಶ್ರೀ ಮತ್ತು ಜಯಶ್ರೀ" ಎನ್ನುತ್ತಾರೆ ನಿರ್ದೇಶಕ ಇಮ್ರಾನ್.

ಈ ಹಿಂದೆ ಹಾಸ್ಯ-ಹಾರರ್ ಮಿಶ್ರಣದ ಚಿತ್ರ ನೀಡಿದ್ದ ನಿರ್ದೇಶಕ ಇದು ಕೂಡ ಕಾಮಿಡಿ ಚಿತ್ರವಾಗಿರಲಿದೆ ಎನ್ನುತ್ತಾರೆ "ನಾನು ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಗಿಸಬೇಕೆಂದಿದ್ದೆ, ಆದರೆ ವಿಭಿನ್ನವಾದ ಡಾರ್ಕ್ ಕಾಮಿಡಿ ಮಾಡಿದೆ. ಈಗ ನಾನು ಸಮಾಜದಲ್ಲಿ ನೋಡಿರುವ ನಿಜ ಜೀವನದ ಪಾತ್ರಗಳನ್ನು ತೆರೆಗೆ ತರಲಿದ್ದೇನೆ. ಹಾಗೆ ಯುವಕರು ಸಿನೆಮಾವನ್ನು ಆಸ್ವಾದಿಸಬಹುದು" ಎನ್ನುತ್ತಾರೆ.

ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ಸಂಪುಟ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್, ಖಾತೆ ಹಂಚಿಕೆಯಲ್ಲಿ ಭಿನ್ನಮತ ಸ್ಫೋಟ..!

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನಮ್ಮ ನೋವನ್ನು ಆನಂದಿಸುತ್ತೀರಾ: ನನಗೆ ವಯಸ್ಸಾಗಿದೆ, ಆದರೆ ಹೋರಾಡೋದು ಮರೆತಿಲ್ಲ; ಸಲ್ಮಾನ್ ಖಾನ್ ಎಚ್ಚರಿಕೆ!

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ರೈತರು, KRS ತೀವ್ರ ವಿರೋಧ!

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

SCROLL FOR NEXT