ರಜನಿಕಾಂತ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಕಲಾವಿದರ ಸಂಘ ಸಹಾಯಾರ್ಥ ಕಾರ್ಯಕ್ರಮದಲ್ಲಿ ರಜನಿ ಕಾಂತ್, ಸುದೀಪ್

ದಕ್ಷಿಣ ಭಾರತದ ಕಲಾವಿದರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ದಕ್ಷಿಣ ಭಾರತದ ನಟರು ಒಗ್ಗೂಡಿದ್ದಾರೆ.

ಚೆನ್ನೈ: ದಕ್ಷಿಣ ಭಾರತದ ಕಲಾವಿದರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ದಕ್ಷಿಣ ಭಾರತದ ನಟರು ಒಗ್ಗೂಡಿದ್ದಾರೆ.
ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಆಯೋಜಿಸಲಾಗಿದ್ದ ಒಂದು ದಿನದ ಸ್ಟಾರ್ಸ್ ಕ್ರಿಕೆಟ್ ಲೀಗ್  ನ್ನು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕಮಲ್ ಹಾಸನ್ ಉದ್ಘಾಟನೆ ಮಾಡಿದರು. ದಕ್ಷಿಣ ಭಾರತದ ನಟರೊಂದಿಗೆ ಕಲಾವಿದರ ಸಂಘದ (ಎಸ್ ಐಎಎ) ಪದಾಧಿಕಾರಿಗಳು, ಎಸ್ಐಎಎ ಅಧ್ಯಕ್ಷ ನಾಸಿರ್, ಪ್ರಧಾನ ಕಾರ್ಯದರ್ಶಿ ವಿಶಾಲ್ ರೆಡ್ಡಿ ಭಾಗವಹಿಸಿದ್ದರು.
ಎಂಎ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆದ ಪಂದ್ಯಾವಳಿಯಲ್ಲಿ ನಟ ಬಾಲಕೃಷ್ಣ, ವೆಂಕಟೇಶ್, ಸುದೀಪ್, ಅಂಬರೀಶ್, ಮಮ್ಮೂಟಿ ಸೇರಿದಂತೆ ತಮಿಳು, ತೆಲುಗು, ಮಲಯಾಳಂ ಚಿತ್ರರಂಗದ ಅನೇಕ ನಟರು ಭಾಗವಹಿಸಿದ್ದರು. ಲೀಗ್ ಪಂದ್ಯ ನಡೆದ ಬಳಿಕ ನಟ ಸೂರ್ಯ ನೇತೃತ್ವದ ಚೆನ್ನೈ ಸಿಂಗಮ್ಸ್ ತಂಡ ಹಾಗೂ ಜೀವಾ ನೇತೃತ್ವದ ತಂಜಾವೂರ್ ತಂಡದ ನಡುವೆ ಫೈನಲ್ ಪಂದ್ಯ ನಡೆದು ಸೂರ್ಯ ನೇತೃತ್ವದ ತಂಡ ಜಯಗಳಿಸಿತು. ಚೆನ್ನೈ ನ ಟಿ.ನಗರ್ ನಲ್ಲಿ ದಕ್ಷಿಣ ಭಾರತದ ಕಲಾವಿದರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT