ವೈಭವಿ ಶಾಂಡಿಲ್ಯ 
ಸಿನಿಮಾ ಸುದ್ದಿ

ರಾಜ್-ವಿಷ್ಣು ಚಿತ್ರಕ್ಕೆ ರಮ್ಯಾ ನಂಬೀಶನ್ ಬದಲು ವೈಭವಿ ಶಾಂಡಿಲ್ಯ

ರಮ್ಯಾ ನಂಬೀಶನ್ ಬದಲು ವೈಭವಿ ಶಾಂಡಿಲ್ಯ ನಾಯಕಿಯಾಗಿ ಅಭಿನಯಿಸಲಿದ್ದಾರೆ ಎಂದು ಚಿತ್ರ ತಂಡ ಹೇಳಿದೆ....

ಬೆಂಗಳೂರು: ಹಾಸ್ಯ ಮಹಾರಾಜ್ ಶರಣ್ ಅಭಿನಯಿಸುತ್ತಿರುವ ರಾಜ್-ವಿಷ್ಣು ಸಿನಿಮಾದಲ್ಲಿ ರಮ್ಯಾ ನಾಂಬೀಶನ್ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇತ್ತೀಚಿನ ಕೆಲ ಬದಲಾವಣೆಗಳಿಂದ ರಮ್ಯಾ ನಂಬೀಶನ್ ಬದಲು ವೈಭವಿ ಶಾಂಡಿಲ್ಯ ನಾಯಕಿಯಾಗಿ ಅಭಿನಯಿಸಲಿದ್ದಾರೆ ಎಂದು ಚಿತ್ರ ತಂಡ ಹೇಳಿದೆ.

ರಾಮು ನಿರ್ಮಿಸುತ್ತಿರುವ ಚಿತ್ರವನ್ನು ಕೆ. ಮಾದೇಶ್ ನಿರ್ದೇಶನ ಮಾಡುತ್ತಿದ್ದಾರೆ, ಏಪ್ರಿಲ್ 22 ರಿಂದ ವೈಭವಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಿರ್ಮಾಪಕ ರಾಮು ತಿಳಿಸಿದ್ದಾರೆ.

ಮರಾಠಿ ಚಿತ್ರರಂಗದಲ್ಲಿ ಹೆಸರುವಾಸಿಯಾಗಿರುವ ವೈಭವಿ ರಂಗಭೂಮಿ ಕಲಾವಿದೆಯಾಗಿದ್ದಾರೆ. ಭರತ ನಾಟ್ಯ ಹಾಗೂ ಕಥಕ್ ನೃತ್ಯ ಪ್ರವೀಣೆಯಾಗಿದ್ದಾರೆ. ಜೊತೆಗೆ ಹಲವು ತಮಿಳು ಚಿತ್ರಗಳಲ್ಲೂ ಕೂಡ ಅಭಿನಯಿಸಿದ್ದಾರೆ.

ತಮಿಳಿನ ರಜನಿ ಮುರುಗನ್ ಚಿತ್ರವನ್ನು  ರಾಜ್-ವಿಷ್ಣು ಹೆಸರಿನಲ್ಲಿ ಕನ್ನಡಕ್ಕೆ ರಿಮೇಕ್ ಮಾಡಲಾಗುತ್ತಿದೆ. ರೆಬೆಲ್ ಸ್ಟಾರ್ ಅಂಬರೀಷ್, ಚಿಕ್ಕಣ್ಣ, ರವಿಶಂಕರ್, ಸಾಧು ಕೋಕಿಲ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT