ಮಾಲಾಶ್ರೀ 
ಸಿನಿಮಾ ಸುದ್ದಿ

'ಉಪ್ಪು, ಹುಳಿ, ಖಾರ' ಸಂಬಂಧ ಮಾಲಾಶ್ರೀ ಕಣ್ಣೀರು

ಇಮ್ರಾನ್ ಸರ್ದಾರಿಯಾ ನಿರ್ದೇಶನದ 'ಉಪ್ಪು, ಹುಳಿ, ಖಾರ' ಚಿತ್ರದಿಂದ ಕೈಬಿಟ್ಟಿದ್ದಕ್ಕೆ ಹಿರಿಯ ನಟಿ ಮಾಲಾಶ್ರೀ ಅವರು ಕಣ್ಣೀರಿಟ್ಟ ಘಟನೆ...

ಬೆಂಗಳೂರು: ಇಮ್ರಾನ್ ಸರ್ದಾರಿಯಾ ನಿರ್ದೇಶನದ 'ಉಪ್ಪು, ಹುಳಿ, ಖಾರ' ಚಿತ್ರದಿಂದ ಕೈಬಿಟ್ಟಿದ್ದಕ್ಕೆ ಹಿರಿಯ ನಟಿ ಮಾಲಾಶ್ರೀ ಅವರು ಕಣ್ಣೀರಿಟ್ಟ ಘಟನೆ ಗುರುವಾರ ನಡೆಯಿತು.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಲಾಶ್ರೀ, ಚಿತ್ರದ ನಿರ್ಮಾಪಕ ಕೆ.ಮಂಜು ಅವರು ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಲು ಅವಕಾಶ ನೀಡಿದ್ದರು. ಅಲ್ಲದೆ ಎರಡು ದಿನ ನಾನು ಶೂಟಿಂಗ್ ನಲ್ಲೂ ಭಾಗವಹಿಸಿದ್ದೆ. ಆದರೆ ನಂತರ ದಿಢೀರ್ ಅಂತ ಚಿತ್ರದಿಂದ ನನ್ನನ್ನು ಕೈಬಿಡಲಾಗಿದ್ದು, ಇದರಿಂದ ತಮಗೆ ತುಂಬಾ ನೋವಾಗಿದೆ ಎಂದರು.
ಎರಡು ದಿನದ ಶೂಟಿಂಗ್ ನಂತರ ನನ್ನ ಅಭಿನಯ ಚೆನ್ನಾಗಿಲ್ಲ ಎಂದು ಹೇಳಿದರು. ಇದನ್ನು ಕೇಳಿ ನಿಜಕ್ಕೂ ನನಗೆ ಆಘಾತವಾಯಿತು. ನನ್ನನ್ನು ಕರೆದು ಅವಮಾನ ಮಾಡಿರುವುದು ತುಂಬಾ ನೋವಾಗಿದೆ. ನನ್ನ 25 ವರ್ಷದ ಅನುಭವದಲ್ಲಿ ಎಂದಿಗೂ ಹೀಗೆ ಆಗಿಲ್ಲ ಎಂದು ಮಾಲಾಶ್ರೀ ಕಣ್ಣೀರಿಟ್ಟರು. 
ಇದು ಕೆ.ಮಂಜು ನಿರ್ಮಾಣದ ಸಿನಿಮಾ ಅಂತ ನನಗೆ ಹೇಳಿದ್ದರು. ಆದರೆ ಪೋಸ್ಟರ್ ನಲ್ಲಿ ಕೆ.ಮಂಜು ಹೆಸರೇ ಇರಲಿಲ್ಲ ಎಂದರು. ಅಲ್ಲದೆ ನಿರ್ದೇಶಕ ಇಮ್ರಾನ್ ಸರ್ದಾರಿಯಾ ವಿರುದ್ಧವೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನಟಿ, ಹಣದ ವಿಚಾರವಾಗಿ ನಾನು ಎಂದೂ ತಲೆಕೆಡಿಸಿಕೊಂಡಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT