ದಂಡುಪಾಳ್ಯ-೨ ಸಿನೆಮಾದಲ್ಲಿ ಪೂಜಾ ಗಾಂಧಿಯವರ ಭೀಕರ ಆಕ್ಷನ್ 
ಸಿನಿಮಾ ಸುದ್ದಿ

'ದಂಡುಪಾಳ್ಯ-2' ನಿರ್ದೇಶಕ, ನಿರ್ಮಾಪಕರಿಗೆ ಕೋರ್ಟ್ ನೋಟಿಸ್

ಮಳೆ ಹುಡುಗಿ ಪೂಜಾ ಗಾಂಧಿ ಅಭಿನಯದ ದಂಡುಪಾಳ್ಯ-2 ಚಿತ್ರದ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಬುಧವಾರ ಸಿಟಿ ಸಿವಿಲ್ ಕೋರ್ಟ್ ತುರ್ತು...

ಬೆಂಗಳೂರು: ಮಳೆ ಹುಡುಗಿ ಪೂಜಾ ಗಾಂಧಿ ಅಭಿನಯದ ದಂಡುಪಾಳ್ಯ-2 ಚಿತ್ರದ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಬುಧವಾರ ಸಿಟಿ ಸಿವಿಲ್ ಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ
ದಂಡುಪಾಳ್ಯ-2 ಚಿತ್ರದ ಬಿಡುಗಡೆಗೆ ತಡೆಕೋರಿ ಜೈಲಿನಲ್ಲಿರುವ 6 ಕೈದಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ನಿರ್ದೇಶಕ ಶ್ರೀನಿವಾಸ ರಾಜು ಹಾಗೂ ನಿರ್ಮಾಪಕರಾದ ಪ್ರಶಾಂತ್ ಜಿ.ಆರ್ ಹಾಗೂ ಗಿರೀಶ್ ಅವರಿಗೆ ನೋಟಿಸ್ ನೀಡಿದೆ.
ನಮ್ಮ ಮೇಲಿರುವ ಪ್ರಕರಣಗಳ ಕುರಿತು ವಿಚಾರಣೆ ಇನ್ನೂ ಕೋರ್ಟ್ ನಲ್ಲಿ ಬಾಕಿಯಿದೆ, ಅಲ್ಲದೇ ತಮ್ಮ ಬದುಕಿನ ಘಟನೆ ಕುರಿತು ತಮ್ಮಿಂದ ಯಾವುದೇ ಹೇಳಿಕೆ ಪಡೆಯದೇ ಚಿತ್ರ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೈದಿಗಳು ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಂಡ ಬಳಿಕ ನಮ್ಮ ಅನುಮತಿ ಪಡೆದು ಚಿತ್ರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಕೈದಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
2012ರಲ್ಲಿ ಸ್ಯಾಂಡಲ್ ವುಡ್ ಸಿನಿರಸಿಕರನ್ನು ಬೆಚ್ಚಿಬೀಳಿಸಿದ 'ದಂಡು ಪಾಳ್ಯ' ಚಿತ್ರದ ಮುಂದುವರಿದ ಭಾಗಕ್ಕೆ ಕಳೆದ ತಿಂಗಳು ಚಾಲನೆ ದೊರೆತಿದೆ. ಮತ್ತೊಮ್ಮೆ ಕುಖ್ಯಾತ ನರಹಂತಕ ಪಾತಕಿಗಳನ್ನ ಕೌರ್ಯವನ್ನ ತೆರೆ ಮೇಲೆ ತರಲು ನಿರ್ದೇಶಕ ಶ್ರೀನಿವಾಸ ರಾಜು ರೆಡಿಯಾಗಿದ್ದರೆ, ಇತ್ತ ಚಿತ್ರದ ನಿರ್ಮಾಪಕ ನಿರ್ದೇಶಕರಿಗೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!