ಹುಚ್ಚ ವೆಂಕಟ್ 
ಸಿನಿಮಾ ಸುದ್ದಿ

'ಡಿಕ್ಟೇಟರ್' ಚಿತ್ರದಿಂದ ಹುಚ್ಚ ವೆಂಕಟ್ ಔಟ್, ನಿರ್ದೇಶಕರ ವಿರುದ್ಧ 'ಫೈರಿಂಗ್'

ಸದಾ ಒಂದಲ್ಲ ಒಂದು ವಿವಾದಗಳಿಂದಲೇ ಖ್ಯಾತಿ ಪಡೆದಿರುವ ಸ್ಯಾಂಡಲ್ ವುಡ್ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ಎಸ್. ನಾರಾಯಣ ನಿರ್ದೇಶನದ...

ಬೆಂಗಳೂರು: ಸದಾ ಒಂದಲ್ಲ ಒಂದು ವಿವಾದಗಳಿಂದಲೇ ಖ್ಯಾತಿ ಪಡೆದಿರುವ ಸ್ಯಾಂಡಲ್ ವುಡ್ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ಎಸ್. ನಾರಾಯಣ್ ನಿರ್ದೇಶನದ 'ಡಿಕ್ಟೇಟರ್' ಚಿತ್ರದಿಂದ ಹೊರ ನಡೆದು ಮತ್ತೆ ಸುದ್ದಿಯಲ್ಲಿದ್ದಾರೆ.
ಚಿತ್ರದಿಂದ ಹೊರಬಂದ ನಂತರ ನಿರ್ದೇಶಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವೆಂಕಟ್, ನಾನು ಸಾಹಸಸಿಂಹ ವಿಷ್ಣುವರ್ಧನ್ ಸಾರ್ ಬಿಟ್ಟರೆ ಹ್ಯಾಟ್ರಿಕ್ ಹೀರೋ ಶಿವಣ್ಣನ ಕಟ್ಟಾ ಅಭಿಮಾನಿಯಾಗಿದ್ದು, ನಾರಾಯಣ್ ಗೆಲ್ಲಾ 'ಕೇರ್ ಮಾಡಲ್ಲ ಎಂದಿದ್ದಾರೆ. ಅಲ್ಲದೆ ನಾರಾಯಣ್ ಅವರ ತಮ್ಮ ಜನಪ್ರಿಯತೆಯನ್ನು ಚಿತ್ರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನು ಯಾರಿಗೂ ತಲೆ ತಗ್ಗಿಸಿ ನಡೆಯೋನಲ್ಲ, ನಾನು ನನ್ನಿಷ್ಟದಂತೆ ನನ್ನ ಬ್ಯಾನರಿನಲ್ಲೇ ಅಭಿನಯಿಸಿ ನನ್ನ ಅಭಿಮಾನಿಗಳನ್ನ ಖುಷಿಪಡಿಸುತ್ತೇನೆ ಎಂದು ಹೇಳಿದ್ದಾರೆ.
'ಡಿಕ್ಟೇಟರ್' ಚಿತ್ರತಂಡ ತಮ್ಮ ಕಾಲ್‌ಶೀಟ್ ಪಡೆದು ತಮ್ಮ ಸಮಯವನ್ನು ಹಾಳು ಮಾಡಿದ್ದು, ಅದಕ್ಕಾಗಿ ನಾನು ಚಿತ್ರದಿಂದ ಹೊರಬಂದಿದ್ದೇನೆ. ನಾನು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ನನ್ನ ಅಭಿಮಾನಿಗಳು ಖುಷಿಪಟ್ಟಿದ್ದರು. ನನ್ನಿಂದಲೇ 'ಡಿಕ್ಟೇಟರ್' ಚಿತ್ರಕ್ಕೆ ಪ್ರಚಾರ ಸಿಕ್ಕಿದ್ದು ಎಂದು ವೆಂಕಟ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT