ಸುದೀಪ್ ಮತ್ತು ಉಪೇಂದ್ರ 
ಸಿನಿಮಾ ಸುದ್ದಿ

'ಮುಕುಂದ ಮುರಾರಿ' ಉಪೇಂದ್ರ-ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಕಾತರ!

ನಿರ್ದೇಶಕ ನಂದಕಿಶೋರ್ ತಮ್ಮ ಮುಂದಿನ ಚಿತ್ರ 'ಮುಕುಂದ ಮುರಾರಿ'ಯೊಂದಿಗೆ ಹಲವು ವಿಶೇಷತೆಗಳನ್ನು ಪ್ರೇಕ್ಷಕರಿಗೆ ಉಣಬಡಿಸಲಿದ್ದಾರೆ. ಈ ಸಿನೆಮಾದಲ್ಲಿ ಉಪೇಂದ್ರ ಮತ್ತು ಸುದೀಪ್

ಬೆಂಗಳೂರು: ನಿರ್ದೇಶಕ ನಂದಕಿಶೋರ್ ತಮ್ಮ ಮುಂದಿನ ಚಿತ್ರ 'ಮುಕುಂದ ಮುರಾರಿ'ಯೊಂದಿಗೆ ಹಲವು ವಿಶೇಷತೆಗಳನ್ನು ಪ್ರೇಕ್ಷಕರಿಗೆ ಉಣಬಡಿಸಲಿದ್ದಾರೆ. ಈ ಸಿನೆಮಾದಲ್ಲಿ ಉಪೇಂದ್ರ ಮತ್ತು ಸುದೀಪ್ ಒಟ್ಟಿಗೆ ನಟಿಸಿದ್ದಾರೆ. 
ಗಾಂಧಿನಗರದ್ಲಲಿ ಹರಿದಾಡುತ್ತಿರುವ ಇತ್ತೀಚಿನ ಸುದ್ದಿಯಂತೆ, ಸಿನೆಮಾದ ಆಡಿಯೋ ಮತ್ತು ಟೀಸರ್ ಸುದೀಪ್ ಅವರ ಹುಟ್ಟುಹಬ್ಬದ ದಿನವಾದ ಸೆಪ್ಟೆಂಬರ್ 2 ರಂದು ಬಿಡುಗಡೆಯಾಗಲಿದೆ ಹಾಗೂ ಉಪೇಂದ್ರ ಹುಟ್ಟುಹಬ್ಬವಾದ್ದ ಸೆಪ್ಟೆಂಬರ್ 18 ರ ಆಸುಪಾಸಿನಲ್ಲಿ ಸಿನೆಮಾ ಬಿಡುಗಡೆಯಾಗುವ ಮುನ್ಸೂಚನೆ ದೊರೆತಿದೆ.
ಆಡಿಯೋ ಮತ್ತು ಟೀಸರ್ ಬಿಡುಗಡೆ ಸಾರ್ವಜನಿಕ ಕಾರ್ಯಕ್ರಮವಾಗಲಿದ್ದು, ಮಧ್ಯರಾತ್ರಿಯಲ್ಲಿ  ಈ ಸ್ಟಾರ್ ಗಳ ಅಭಿಮಾನಿಗಳ ನಡುವೆ ಪಾದಾರ್ಪಣೆಗೊಳ್ಳಲಿವೆ ಎಂದು ತಿಳಿದುಬಂದಿದೆ. 
ಈ ಇಬ್ಬರು ಒಟ್ಟಿಗೆ ನಟಿಸಿರುವುದು ಮತ್ತು ಅವರ ಹುಟ್ಟುಹಬ್ಬ ಒಂದೇ ತಿಂಗಳಲ್ಲಿ ಬಿದ್ದಿರುವುದು ಈ ನಟರ ಅಭಿಮಾನಿಯುಗಳಿಗೆ ಡಬಲ್ ಧಮಾಕ. ಸಿನೆಮಾದ ಚಿತ್ರೀಕರಣ ಬಹುತೇಕ ಸಂಪೂರ್ಣಗೊಂಡಿದ್ದು, ಡಬ್ಬಿಂಗ್ ಪ್ರಕ್ರಿಯೆ ಕೂಡ ಕೊನೆಯ ಹಂತದಲ್ಲಿದೆ ಎಂದು ತಿಳಿಸಿಯುತ್ತವೆ ಮೂಲಗಳು. 
ಇದು ಹಿಂದಿ ಸಿನೆಮಾ 'ಓ ಮೈ ಗಾಡ್' ನ ರಿಮೇಕ್. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಸುಧಾಕರ್ ರಾಜ್ ಅವರ ಸಿನೆಮ್ಯಾಟೋಗ್ರಾಫಿ ಚಿತ್ರಕ್ಕಿದೆ. ನಿಖಿತಾ ತುಕ್ರಾಲ್ ನಾಯಕನಟಿಯಾಗಿದ್ದು, ರವಿಶಂಕರ್ ಮತ್ತು ಅವಿನಾಶ್ ಕೂಡ ನಟಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT