ಸುದೀಪ್ ಮತ್ತು ಉಪೇಂದ್ರ 
ಸಿನಿಮಾ ಸುದ್ದಿ

'ಮುಕುಂದ ಮುರಾರಿ' ಉಪೇಂದ್ರ-ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಕಾತರ!

ನಿರ್ದೇಶಕ ನಂದಕಿಶೋರ್ ತಮ್ಮ ಮುಂದಿನ ಚಿತ್ರ 'ಮುಕುಂದ ಮುರಾರಿ'ಯೊಂದಿಗೆ ಹಲವು ವಿಶೇಷತೆಗಳನ್ನು ಪ್ರೇಕ್ಷಕರಿಗೆ ಉಣಬಡಿಸಲಿದ್ದಾರೆ. ಈ ಸಿನೆಮಾದಲ್ಲಿ ಉಪೇಂದ್ರ ಮತ್ತು ಸುದೀಪ್

ಬೆಂಗಳೂರು: ನಿರ್ದೇಶಕ ನಂದಕಿಶೋರ್ ತಮ್ಮ ಮುಂದಿನ ಚಿತ್ರ 'ಮುಕುಂದ ಮುರಾರಿ'ಯೊಂದಿಗೆ ಹಲವು ವಿಶೇಷತೆಗಳನ್ನು ಪ್ರೇಕ್ಷಕರಿಗೆ ಉಣಬಡಿಸಲಿದ್ದಾರೆ. ಈ ಸಿನೆಮಾದಲ್ಲಿ ಉಪೇಂದ್ರ ಮತ್ತು ಸುದೀಪ್ ಒಟ್ಟಿಗೆ ನಟಿಸಿದ್ದಾರೆ. 
ಗಾಂಧಿನಗರದ್ಲಲಿ ಹರಿದಾಡುತ್ತಿರುವ ಇತ್ತೀಚಿನ ಸುದ್ದಿಯಂತೆ, ಸಿನೆಮಾದ ಆಡಿಯೋ ಮತ್ತು ಟೀಸರ್ ಸುದೀಪ್ ಅವರ ಹುಟ್ಟುಹಬ್ಬದ ದಿನವಾದ ಸೆಪ್ಟೆಂಬರ್ 2 ರಂದು ಬಿಡುಗಡೆಯಾಗಲಿದೆ ಹಾಗೂ ಉಪೇಂದ್ರ ಹುಟ್ಟುಹಬ್ಬವಾದ್ದ ಸೆಪ್ಟೆಂಬರ್ 18 ರ ಆಸುಪಾಸಿನಲ್ಲಿ ಸಿನೆಮಾ ಬಿಡುಗಡೆಯಾಗುವ ಮುನ್ಸೂಚನೆ ದೊರೆತಿದೆ.
ಆಡಿಯೋ ಮತ್ತು ಟೀಸರ್ ಬಿಡುಗಡೆ ಸಾರ್ವಜನಿಕ ಕಾರ್ಯಕ್ರಮವಾಗಲಿದ್ದು, ಮಧ್ಯರಾತ್ರಿಯಲ್ಲಿ  ಈ ಸ್ಟಾರ್ ಗಳ ಅಭಿಮಾನಿಗಳ ನಡುವೆ ಪಾದಾರ್ಪಣೆಗೊಳ್ಳಲಿವೆ ಎಂದು ತಿಳಿದುಬಂದಿದೆ. 
ಈ ಇಬ್ಬರು ಒಟ್ಟಿಗೆ ನಟಿಸಿರುವುದು ಮತ್ತು ಅವರ ಹುಟ್ಟುಹಬ್ಬ ಒಂದೇ ತಿಂಗಳಲ್ಲಿ ಬಿದ್ದಿರುವುದು ಈ ನಟರ ಅಭಿಮಾನಿಯುಗಳಿಗೆ ಡಬಲ್ ಧಮಾಕ. ಸಿನೆಮಾದ ಚಿತ್ರೀಕರಣ ಬಹುತೇಕ ಸಂಪೂರ್ಣಗೊಂಡಿದ್ದು, ಡಬ್ಬಿಂಗ್ ಪ್ರಕ್ರಿಯೆ ಕೂಡ ಕೊನೆಯ ಹಂತದಲ್ಲಿದೆ ಎಂದು ತಿಳಿಸಿಯುತ್ತವೆ ಮೂಲಗಳು. 
ಇದು ಹಿಂದಿ ಸಿನೆಮಾ 'ಓ ಮೈ ಗಾಡ್' ನ ರಿಮೇಕ್. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಸುಧಾಕರ್ ರಾಜ್ ಅವರ ಸಿನೆಮ್ಯಾಟೋಗ್ರಾಫಿ ಚಿತ್ರಕ್ಕಿದೆ. ನಿಖಿತಾ ತುಕ್ರಾಲ್ ನಾಯಕನಟಿಯಾಗಿದ್ದು, ರವಿಶಂಕರ್ ಮತ್ತು ಅವಿನಾಶ್ ಕೂಡ ನಟಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT