ರಜನಿಕಾಂತ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

2.0 ಚಿತ್ರದ ಚಿತ್ರೀಕರಣ ವೇಳೆ ಗಾಯಗೊಂಡ ಸೂಪರ್ ಸ್ಟಾರ್ ರಜನಿಕಾಂತ್

ರಜನಿಕಾಂತ್ ಅವರ ಮುಂದಿನ ಬಹು ನಿರೀಕ್ಷಿತ ತಮಿಳು ವೈಜ್ಞಾನಿಕ ರೋಮಾಂಚಕ-ಸಾಹಸ ಚಿತ್ರ 2.0ನ...

ರಜನಿಕಾಂತ್ ಅವರ ಮುಂದಿನ ಬಹು ನಿರೀಕ್ಷಿತ ತಮಿಳು ವೈಜ್ಞಾನಿಕ ರೋಮಾಂಚಕ-ಸಾಹಸ ಚಿತ್ರ 2.0ನ ಚಿತ್ರೀಕರಣ ಚೆನ್ನೈಯಲ್ಲಿ ನಡೆಯುತ್ತಿದ್ದ ವೇಳೆ ಅವರ ಮೊಳಕಾಲಿಗೆ ಗಾಯವಾಗಿದೆ.ನಿನ್ನೆ ಸಂಜೆ ಘ ಘಟನೆ ನಡೆದಿದೆ.
ಚಿತ್ರದ ಪ್ರಮುಖ ದೃಶ್ಯದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ರಜನಿಕಾಂತ್ ಅವರ ಮೊಣಕಾಲಿಗೆ ಪೆಟ್ಟಾಗಿದೆ. ಅವರನ್ನು ಚೆಟ್ಟಿನಾಡ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಯಿತು. ನಂತರ ಅವರು ಮನೆಗೆ ಹೋದರು ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.
ಇದೀಗ ರಜನಿಕಾಂತ್ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಜನಿಕಾಂತ್ ಅವರ ಮ್ಯಾನೆಜರ್ ರಿಯಾಜ್ ಕೆ ಬಿಡುಗಡೆ ಮಾಡಿರುವ ವಿಡಿಯೊದಲ್ಲಿ ರಜನಿಕಾಂತ್ ಅವರು ಕೆರವಾನ್ ನಿಂದ ಹೊರಬಂದು ಜನರೆಡೆಗೆ ಕೈಬೀಸಿ ನಂತರ ಕಾರನ್ನು ಹತ್ತುವುದನ್ನು ಕಾಣಬಹುದು.
ಶಂಕರ್ ನಿರ್ದೇಶಿಸುತ್ತಿರುವ 400 ಕೋಟಿ ರೂಪಾಯಿ ಬಜೆಟ್ ನ ಚಿತ್ರ 2.0 ಆಗಿದ್ದು ಇದರಲ್ಲಿ ಅಕ್ಷಯ್ ಕುಮಾರ್, ಆಮಿ ಜಾಕ್ಸನ್, ಸುಧಾಂಶು ಪಾಂಡೆ ಮತ್ತು ಆದಿಲ್ ಹುಸೇನ್ ಮುಖ್ಯ ಪಾತ್ರದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT