'ಹೆಬ್ಬುಲಿ' ಚಿತ್ರದಲ್ಲಿ ಸುದೀಪ್ 
ಸಿನಿಮಾ ಸುದ್ದಿ

ಪಾರ್ಟಿ ಹಾಡಿಗೆ ಹೆಜ್ಜೆ ಹಾಕಲಿರುವ 'ಹೆಬ್ಬುಲಿ' ಸಹೋದರರು

ಎಸ್ ಕೃಷ್ಣ ನಿರ್ದೇಶನದ 'ಹೆಬ್ಬುಲಿ'ಯಲ್ಲಿ ಸಹೋದರಾಗಿ ನಟಿಸಿರುವ ನಟ ರವಿಚಂದ್ರನ್ ಮತ್ತು ಸುದೀಪ್ ಅವರಿಗೆ ಇದು ಪಾರ್ಟಿ ಸಮಯ. ಅರ್ಜುನ್ ಜನ್ಯ ಸಂಗೀತದಲ್ಲಿ ಮತ್ತು ಹರ್ಷ ನೃತ್ಯ

ಬೆಂಗಳೂರು: ಎಸ್ ಕೃಷ್ಣ ನಿರ್ದೇಶನದ 'ಹೆಬ್ಬುಲಿ'ಯಲ್ಲಿ ಸಹೋದರಾಗಿ ನಟಿಸಿರುವ ನಟ ರವಿಚಂದ್ರನ್ ಮತ್ತು ಸುದೀಪ್ ಅವರಿಗೆ ಇದು ಪಾರ್ಟಿ ಸಮಯ. ಅರ್ಜುನ್ ಜನ್ಯ ಸಂಗೀತದಲ್ಲಿ ಮತ್ತು ಹರ್ಷ ನೃತ್ಯ ನಿರ್ದೇಶನದಲ್ಲಿ ಮೂಡಿ ಬಂದಿರುವ ಹಾಡಿಗೆ ಈ ಜೋಡಿ ಹೆಜ್ಜೆ ಹಾಕಲಿದ್ದಾರೆ. 
ಮುಂದಿನ ನಾಲ್ಕು ದಿನಗಳ ಕಾಲ ದೇವನಹಳ್ಳಿಯ ರೆಸಾರ್ಟ್ ಒಂದರಲ್ಲಿ ಚಿತ್ರೀಕರಣ ನಡೆಯಲಿದೆಯಂತೆ. ರವಿಚಂದ್ರನ್ ಮತ್ತು ಸುದೀಪ್ ನಡುವೆ ಕೆಲವು ವರ್ಷಗಳಿಂದ ಒಂದು ವಿಶೇಷ ಬಾಂಧವ್ಯ ಬೆಳೆದಿದ್ದು, ಇದು ಸಿನೆಮಾದ ಮುಖ್ಯಅಂಶಗಳಲ್ಲಿ ಒಂದು ಎನ್ನಲಾಗಿದೆ. 
ಈ ಹಿಂದೆ ಈ ಜೋಡಿ 'ಮಾಣಿಕ್ಯ' ಸಿನೆಮಾದಲ್ಲಿ ತಂದೆ ಮಗನಾಗಿ ನಟಿಸಿದ್ದರು. ಈಗ ಸುದೀಪ್ ಅವರ ಪರಿಚಯಾತ್ಮಕ ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆಯಂತೆ. 
ಚಿತ್ರೀಕರಣದ ನಂತರದ ಕೆಲಸಗಳು ಕೂಡ ಭರದಿಂದ ಸಾಗಿದ್ದು, ಡಿಸೆಂಬರ್ ೧೫ ಕ್ಕೆ ಅದ್ದೂರಿ ಆಡಿಯೋ ಬಿಡುಗಡೆಗೆ ಚಿತ್ರತಂಡ ಸಜ್ಜಾಗುತ್ತಿದೆ. ದಾವಣಗೆರೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಸಂಗೀತ ಕಾರ್ಯಕ್ರಮ ನಡೆಸಿಕೊಳ್ಳಲಿದ್ದಾರೆ. 
ಎಲ್ಲವು ನಿಗದಿಯಾದಂತೆ ನಡೆದರೆ, ಹೊಸವರ್ಷಕ್ಕೆ 'ಹೆಬ್ಬುಲಿ' ಸಿನೆಮಾ ಬಿಡುಗಡೆಯಾಗಲಿದೆ. ಜನವರಿ ಎರಡನೇ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿರುವ ಈ ಚಿತ್ರದಲ್ಲಿ ಅಮಲಾ ಪಾಲ್ ನಾಯಕನಟಿ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT