'ಹೆಬ್ಬುಲಿ' ಚಿತ್ರದಲ್ಲಿ ಸುದೀಪ್ 
ಸಿನಿಮಾ ಸುದ್ದಿ

ಪಾರ್ಟಿ ಹಾಡಿಗೆ ಹೆಜ್ಜೆ ಹಾಕಲಿರುವ 'ಹೆಬ್ಬುಲಿ' ಸಹೋದರರು

ಎಸ್ ಕೃಷ್ಣ ನಿರ್ದೇಶನದ 'ಹೆಬ್ಬುಲಿ'ಯಲ್ಲಿ ಸಹೋದರಾಗಿ ನಟಿಸಿರುವ ನಟ ರವಿಚಂದ್ರನ್ ಮತ್ತು ಸುದೀಪ್ ಅವರಿಗೆ ಇದು ಪಾರ್ಟಿ ಸಮಯ. ಅರ್ಜುನ್ ಜನ್ಯ ಸಂಗೀತದಲ್ಲಿ ಮತ್ತು ಹರ್ಷ ನೃತ್ಯ

ಬೆಂಗಳೂರು: ಎಸ್ ಕೃಷ್ಣ ನಿರ್ದೇಶನದ 'ಹೆಬ್ಬುಲಿ'ಯಲ್ಲಿ ಸಹೋದರಾಗಿ ನಟಿಸಿರುವ ನಟ ರವಿಚಂದ್ರನ್ ಮತ್ತು ಸುದೀಪ್ ಅವರಿಗೆ ಇದು ಪಾರ್ಟಿ ಸಮಯ. ಅರ್ಜುನ್ ಜನ್ಯ ಸಂಗೀತದಲ್ಲಿ ಮತ್ತು ಹರ್ಷ ನೃತ್ಯ ನಿರ್ದೇಶನದಲ್ಲಿ ಮೂಡಿ ಬಂದಿರುವ ಹಾಡಿಗೆ ಈ ಜೋಡಿ ಹೆಜ್ಜೆ ಹಾಕಲಿದ್ದಾರೆ. 
ಮುಂದಿನ ನಾಲ್ಕು ದಿನಗಳ ಕಾಲ ದೇವನಹಳ್ಳಿಯ ರೆಸಾರ್ಟ್ ಒಂದರಲ್ಲಿ ಚಿತ್ರೀಕರಣ ನಡೆಯಲಿದೆಯಂತೆ. ರವಿಚಂದ್ರನ್ ಮತ್ತು ಸುದೀಪ್ ನಡುವೆ ಕೆಲವು ವರ್ಷಗಳಿಂದ ಒಂದು ವಿಶೇಷ ಬಾಂಧವ್ಯ ಬೆಳೆದಿದ್ದು, ಇದು ಸಿನೆಮಾದ ಮುಖ್ಯಅಂಶಗಳಲ್ಲಿ ಒಂದು ಎನ್ನಲಾಗಿದೆ. 
ಈ ಹಿಂದೆ ಈ ಜೋಡಿ 'ಮಾಣಿಕ್ಯ' ಸಿನೆಮಾದಲ್ಲಿ ತಂದೆ ಮಗನಾಗಿ ನಟಿಸಿದ್ದರು. ಈಗ ಸುದೀಪ್ ಅವರ ಪರಿಚಯಾತ್ಮಕ ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆಯಂತೆ. 
ಚಿತ್ರೀಕರಣದ ನಂತರದ ಕೆಲಸಗಳು ಕೂಡ ಭರದಿಂದ ಸಾಗಿದ್ದು, ಡಿಸೆಂಬರ್ ೧೫ ಕ್ಕೆ ಅದ್ದೂರಿ ಆಡಿಯೋ ಬಿಡುಗಡೆಗೆ ಚಿತ್ರತಂಡ ಸಜ್ಜಾಗುತ್ತಿದೆ. ದಾವಣಗೆರೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಸಂಗೀತ ಕಾರ್ಯಕ್ರಮ ನಡೆಸಿಕೊಳ್ಳಲಿದ್ದಾರೆ. 
ಎಲ್ಲವು ನಿಗದಿಯಾದಂತೆ ನಡೆದರೆ, ಹೊಸವರ್ಷಕ್ಕೆ 'ಹೆಬ್ಬುಲಿ' ಸಿನೆಮಾ ಬಿಡುಗಡೆಯಾಗಲಿದೆ. ಜನವರಿ ಎರಡನೇ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿರುವ ಈ ಚಿತ್ರದಲ್ಲಿ ಅಮಲಾ ಪಾಲ್ ನಾಯಕನಟಿ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!