ನಟ-ನಿರ್ದೇಶಕ ರಮೇಶ್ ಅರವಿಂದ್ 
ಸಿನಿಮಾ ಸುದ್ದಿ

ರಮೇಶ್ ಅರವಿಂದ್ 'ಧನ್ಯವಾದ ವಿಶ್ವಪರ್ಯಟನೆ'; ಲಂಡನ್ ನಲ್ಲಿ ಮೊದಲ ಸ್ಟಾಪ್

ತಮ್ಮ ನಿರ್ದೇಶನದ 'ಸುಂದರಾಂಗ ಜಾಣ' ಬಿಡುಗಡೆಯ ಮೂಲಕ ಈ ವರ್ಷಕ್ಕೆ ಅಂತ್ಯ ಹಾಡಲಿರುವ ನಟ-ನಿರ್ದೇಶಕ ರಮೇಶ್ ಅರವಿಂದ್ ಮುಂದಿನ ವರ್ಷ ತಮ್ಮ ೧೦೦ನೆ ಚಿತ್ರ 'ಪುಷ್ಪಕ ವಿಮಾನ'ದ

ಬೆಂಗಳೂರು: ತಮ್ಮ ನಿರ್ದೇಶನದ 'ಸುಂದರಾಂಗ ಜಾಣ' ಬಿಡುಗಡೆಯ ಮೂಲಕ ಈ ವರ್ಷಕ್ಕೆ ಅಂತ್ಯ ಹಾಡಲಿರುವ ನಟ-ನಿರ್ದೇಶಕ ರಮೇಶ್ ಅರವಿಂದ್ ಮುಂದಿನ ವರ್ಷ ತಮ್ಮ ೧೦೦ನೆ ಚಿತ್ರ 'ಪುಷ್ಪಕ ವಿಮಾನ'ದ ಬಿಡುಗಡೆಯಿಂದ ಆರಂಭಿಸಲಿದ್ದಾರೆ. ಡಿಸೆಂಬರ್ ೨೩ ಕ್ಕೆ 'ಸುಂದರಾಂಗ ಜಾಣ' ಬಿಡುಗಡೆಯಾಗಲಿದೆ ಮತ್ತು ಜನವರಿ ೬ ೨೦೧೭ ಕ್ಕೆ 'ಪುಷ್ಪಕ ವಿಮಾನ' ಬಿಡುಗಡೆಯಾಗಲಿದೆ. 
ಈಮಧ್ಯೆ ರಮೇಶ್ ಅರವಿಂದ್ ಲೈವ್ ಕಾರ್ಯಕ್ರಮ ನಡೆಸಿಕೊಡಲು ವಿಶ್ವಪರ್ಯಟನೆ ನಡೆಸಿದ್ದಾರೆ. ಇದರ ಮೊದಲ ಕಂತು ಲಂಡನ್ನಿನಲ್ಲಿ ನವೆಂಬರ್ ೨೭ ಮತ್ತು ೨೯ ರ ನಡುವೆ ನಡೆದಿದೆ. 
ಈ ಧನ್ಯವಾದ ತಿಳಿಸುವ ಕಾರ್ಯಕ್ರಮ ಬಹಳ ಅದ್ಭುತವಾಗಿ ಮೂಡಿ ಬಂದಿತು ಎಂದು ತಿಳಿಸುವ ಅವರು, "೨೫ ವರ್ಷದ ರಮೇಶ್ ಅರವಿಂದ್ ವೇದಿಕೆಯ ಮೇಲಿದ್ದ ೫೦ ವರ್ಷದ ರಮೇಶ್ ಅರವಿಂದ್ ಅವರೊಂದಿಗೆ ಮಾತುಕತೆ ನಡೆಸಿದರು. ಇದು ದ್ವಿಪಾತ್ರ ಅಭಿನಯದ ರೀತಿಯಲ್ಲಿತ್ತು ಮತ್ತು ಪ್ರೇಕ್ಷಕರಿಗೆ ಇಷ್ಟವಾಯಿತು. ನನ್ನ ಜೀವನದ ಖುಷಿಯ ಕ್ಷಣಗಳನ್ನು ಆನಿಮೇಷನ್ ಟೀಸರ್ ಗಳ ಮೂಲಕ ತೆರೆದಿಟ್ಟು, ಅವುಗಳನ್ನು ಕಥೆಯ ರೂಪದಲ್ಲಿ ವಿವರಿಸಿದೆ" ಎನ್ನುತ್ತಾರೆ ರಮೇಶ್. 
ಪ್ರೇಕ್ಷಕರ ಜೊತೆಗೆ ನಡೆದ ಸಂವಾದದಲ್ಲಿ ಘಟನೆಯೊಂದನ್ನು ನೆನಪಿಸಿಕೊಂಡ ರಮೇಶ್ "ತೀರ್ಥಹಳ್ಳಿಯ ಬಳಿ ೨೦ ವರ್ಷದ ಹಿಂದೆ 'ಮುಂಗಾರಿನ ಮಿಂಚಿ' ಸಿನೆಮಾದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾಗ, ಹುಡುಗಿಯೊಬ್ಬಳು ಓಡಿ ಬಂದು ನನ್ನ ಗಲ್ಲಕ್ಕೆ ಮುತ್ತಿಟ್ಟಳು. ನಾನು ಅವಳ ಗೆಳತಿಯನ್ನು ಈ ಕಾರ್ಯಕ್ರಮದಲ್ಲಿ ಭೇಟಿ ಮಾಡಿದೆ. ಆ ಘಟನೆ ಒಂದು ಸವಾಲಾಗಿತ್ತು ಮತ್ತು ಅವಳ ಗೆಳತಿ ಸವಾಲಿನಲ್ಲಿ ಗೆದ್ದಿದ್ದಳು ಎಂದು ನನಗೆ ಇಲ್ಲಿ ತಿಳಿಯಿತು. ಈಗ ಚುಂಬಿಸಬಹುದೇ ಎಂದು ಅವರು ನನ್ನನ್ನು ಕೇಳಿದರು, ನಾನು ನಿರಾಕರಿಸಲು ಸಾಧ್ಯವಾಗಲಿಲ್ಲ ಆದರೆ ತಬ್ಬಿಕೊಳ್ಳುವುದಕ್ಕೆ ಒಪ್ಪಿದೆ" ಎನ್ನುತ್ತಾರೆ. 
ಅವರ ಮುಂದಿನ ನಿಲ್ದಾಣ ಅಮೆರಿಕಾ ಅಂತೆ. ಇದು ನನ್ನ ಸಿನೆಮಾಗಳ ಮತ್ತು ಪೂರ್ವ ಕೆಲಸಗಳ ಮೇಲೆ ನಿರ್ಧಾರವಾಗುತ್ತದೆ. "ಈ ಬಾರಿ ನನ್ನ ಸಿನೆಮಾ 'ಪುಷ್ಪಕ ವಿಮಾನ'ದ ಜೊತೆ ವಿದೇಶಿ ಪ್ರಯಾಣ ಬೆಳೆಸಲಿದ್ದೇನೆ" ಎನ್ನತ್ತಾರೆ ರಮೇಶ್.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT