ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ರಾಷ್ಟ್ರ ಗೀತೆ ಪ್ರದರ್ಶನದ ನಂತರ ಚಲನಚಿತ್ರಮಂದಿರ ಪ್ರವೇಶಿಸಿ: ಸಿ ಪಿ ಎಂ ಮುಖಂಡ

ಕೇರಳ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎದ್ದಿರುವ ರಾಷ್ಟ್ರಗೀತೆ ವಿವಾದಕ್ಕೆ ಪ್ರತಿಕ್ರಿಯಿಸಿರುವ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ "ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುವವರು

ಕೊಟ್ಟಾಯಂ: ಕೇರಳ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎದ್ದಿರುವ ರಾಷ್ಟ್ರಗೀತೆ ವಿವಾದಕ್ಕೆ ಪ್ರತಿಕ್ರಿಯಿಸಿರುವ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ "ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುವವರು ಮಾತ್ರ ಚಲನಚಿತ್ರಮಂದಿರ ಪ್ರವೇಶಿಸಿ" ಎಂದಿದ್ದಾರೆ. 
ಇದಕ್ಕೂ ಮುಂಚಿತವಾಗಿ ರಾಷ್ಟ್ರಗೀತೆಗೆ ಎದ್ದು ನಿಂತಿಲ್ಲ ಎಂಬ ಆರೋಪದ ಮೇರೆಗೆ ಆರು ಜನರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ ಎಂಬ ವರದಿಗಳು ಮೂಡಿದ್ದವು. 
ಮಂಗಳವಾರ ಮಾಧ್ಯದವರೊಂದಿಗೆ ಸಂವಾದ ನಡೆಸಿದ ಬಾಲಕೃಷ್ಣ ಸುಪ್ರೀಂ ಕೋರ್ಟ್ ಆದೇಶವನ್ನು ಅನಷ್ಠಾನಗೊಳಿಸುವುದು ಸರ್ಕಾರದ ಕರ್ತವ್ಯ ಎಂದಿದ್ದಾರೆ. "ಚಲನಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವ ಮತ್ತು ಅದಕ್ಕೆ ಗೌರವಿಸುವ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕಿದೆ. ಈ ಆದೇಶವನ್ನು ಪಾಲಿಸಲು ಒಪ್ಪುವವರು ಮಾತ್ರ ಚಿತ್ರಮಂದಿರದ ಒಳಗೆ ಹೋಗಬಹುದು. ಅಥವಾ ರಾಷ್ಟ್ರಗೀತೆ ಮುಗಿದ ನಂತರ ಅವರು ಪ್ರವೇಶ ಪಡೆಯಬಹುದು" ಎಂದು ಕೂಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT