ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ರಾಷ್ಟ್ರ ಗೀತೆ ಪ್ರದರ್ಶನದ ನಂತರ ಚಲನಚಿತ್ರಮಂದಿರ ಪ್ರವೇಶಿಸಿ: ಸಿ ಪಿ ಎಂ ಮುಖಂಡ

ಕೇರಳ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎದ್ದಿರುವ ರಾಷ್ಟ್ರಗೀತೆ ವಿವಾದಕ್ಕೆ ಪ್ರತಿಕ್ರಿಯಿಸಿರುವ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ "ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುವವರು

ಕೊಟ್ಟಾಯಂ: ಕೇರಳ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎದ್ದಿರುವ ರಾಷ್ಟ್ರಗೀತೆ ವಿವಾದಕ್ಕೆ ಪ್ರತಿಕ್ರಿಯಿಸಿರುವ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ "ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುವವರು ಮಾತ್ರ ಚಲನಚಿತ್ರಮಂದಿರ ಪ್ರವೇಶಿಸಿ" ಎಂದಿದ್ದಾರೆ. 
ಇದಕ್ಕೂ ಮುಂಚಿತವಾಗಿ ರಾಷ್ಟ್ರಗೀತೆಗೆ ಎದ್ದು ನಿಂತಿಲ್ಲ ಎಂಬ ಆರೋಪದ ಮೇರೆಗೆ ಆರು ಜನರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ ಎಂಬ ವರದಿಗಳು ಮೂಡಿದ್ದವು. 
ಮಂಗಳವಾರ ಮಾಧ್ಯದವರೊಂದಿಗೆ ಸಂವಾದ ನಡೆಸಿದ ಬಾಲಕೃಷ್ಣ ಸುಪ್ರೀಂ ಕೋರ್ಟ್ ಆದೇಶವನ್ನು ಅನಷ್ಠಾನಗೊಳಿಸುವುದು ಸರ್ಕಾರದ ಕರ್ತವ್ಯ ಎಂದಿದ್ದಾರೆ. "ಚಲನಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವ ಮತ್ತು ಅದಕ್ಕೆ ಗೌರವಿಸುವ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕಿದೆ. ಈ ಆದೇಶವನ್ನು ಪಾಲಿಸಲು ಒಪ್ಪುವವರು ಮಾತ್ರ ಚಿತ್ರಮಂದಿರದ ಒಳಗೆ ಹೋಗಬಹುದು. ಅಥವಾ ರಾಷ್ಟ್ರಗೀತೆ ಮುಗಿದ ನಂತರ ಅವರು ಪ್ರವೇಶ ಪಡೆಯಬಹುದು" ಎಂದು ಕೂಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT