'ಸುಂದರಾಂಗ ಜಾಣ' ಸಿನೆಮಾದಲ್ಲಿ ಶಾನ್ವಿ ಶ್ರೀವಾಸ್ತವ ಮತ್ತು ಗಣೇಶ್ 
ಸಿನಿಮಾ ಸುದ್ದಿ

ಕನ್ನಡ ಚಿತ್ರರಂಗದಲ್ಲಿ ಕ್ರಿಸ್ಮಸ್ ಸಂಭ್ರಮದ ವಾತಾವರಣ

ನೋಟು ಹಿಂಪಡೆತ ನಿರ್ಧಾರದಿಂದ ಕನ್ನಡ ಚಿತ್ರರಂಗ ಕಷ್ಟದ ದಿನಗಳನ್ನು ಕಾಣುತ್ತಿದ್ದರು, ಕೆಲವು ನಿರ್ಮಾಪಕರು ಕ್ರಿಸ್ಮಸ್ ರಜೆಯ ಸದುಪಯೋಗ ಪಡೆಯಲು ಮುಂದಾಗಿದ್ದಾರೆ.

ಬೆಂಗಳೂರು: ನೋಟು ಹಿಂಪಡೆತ ನಿರ್ಧಾರದಿಂದ ಕನ್ನಡ ಚಿತ್ರರಂಗ ಕಷ್ಟದ ದಿನಗಳನ್ನು ಕಾಣುತ್ತಿದ್ದರು, ಕೆಲವು ನಿರ್ಮಾಪಕರು ಕ್ರಿಸ್ಮಸ್ ರಜೆಯ ಸದುಪಯೋಗ ಪಡೆಯಲು ಮುಂದಾಗಿದ್ದಾರೆ. 
ರಮೇಶ್ ಅರವಿಂದ್ ನಿರ್ದೇಶನದ 'ಸುಂದರಾಂಗ ಜಾಣ',  ಪ್ರೀತಮ್ ಗುಬ್ಬಿ ಅವರ 'ನಾನು ಮತ್ತು ವರಲಕ್ಷ್ಮಿ' ಮತ್ತು ಅಪೂರ್ವ ಕಾಸರವಳ್ಳಿ ಅವರ 'ನಿರುತ್ತರ' ಡಿಸೆಂಬರ್ 23 ರಂದು ಬಿಡುಗಡೆಗೆ ಸಜ್ಜಾಗಿದ್ದು, ಅಮೀರ್ ಖಾನ್ ನಟನೆಯ ಬಾಲಿವುಡ್ ಸಿನೆಮಾ 'ದಂಗಾಲ್'ನೊಂದಿಗೆ ಸೆಣಸಲಿವೆ. 
ರಮೇಶ್ ಅರವಿಂದ್ ತಿಳಿಸುವಂತೆ 'ಸುಂದರಾಂಗ ಜಾಣ' ಮೊದಲೇ ನಿಗದಿಯಾದಂತೆ ಡಿಸೆಂಬರ್ ೯ ಕ್ಕೆ ಬಿಡುಗಡೆಯಾಗಬೇಕಿತ್ತಂತೆ, ಆದರೆ ನೋಟು ಹಿಂಪಡೆತ ನಿರ್ಧಾರದಿಂದ ಆಗಿರುವ ನಗದು ಬಿಕ್ಕಟ್ಟಿನಿಂದ ಮುಂದೂಡಲಾಯಿತಂತೆ. "ಬ್ಯಾಂಕ್ ಗಳಲ್ಲಿ ದೊಡ್ಡ ದೊಡ್ಡ ಸರತಿ ಸಾಲುಗಳಲ್ಲಿ ನಿಂತು ಹಣ ಪಡೆಯಲು ಕಷ್ಟ ಪಡುತ್ತಿದ್ದರು. ಆದುದರಿಂದ ಬಿಡುಗಡೆ ಮುಂದೂಡಲು ನಿರ್ಧರಿಸಿದೆವು. ಕ್ರಿಸ್ಮಸ್ ರಜಕ್ಕೆ ಜನ ವಿರಾಮದಲ್ಲಿ ನೋಡಲೆಂದು ಈ ದಿನಾಂಕ ಆರಿಸಿಕೊಂಡೆವು" ಎನ್ನುವ ಅವರು "ಈಗ ಕಾರ್ಮೋಡ ಕರಗಿದ್ದು, ಜನ ಥಿಯೇಟರ್ ಗಳ ಮುಂದೆ ಸಾಲುಗಟ್ಟಿ ನಿಲ್ಲಲಿದ್ದಾರೆ ಎಂದು ನಂಬಿದ್ದೇವೆ" ಎಂದಿದ್ದಾರೆ. 
ತೆಲುಗು ಸಿನೆಮಾ 'ಭಲೇ ಭಲೇ ಮಾಗಾಡಿವೋಯ್' ನ ರಿಮೇಕ್ ಇದಾಗಿದ್ದು, ಗಣೇಶ್ ಮತ್ತು ಶಾನ್ವಿ ಶ್ರೀವಾಸ್ತವ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. 
'ನಾನು ಮತ್ತು ...' ಸಿನೆಮಾ ಬಿಡುಗಡೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪ್ರೀತಮ್ " ಈ ಸಿನೆಮಾ ನನ್ನ ಅತ್ಯುತ್ತಮ ಗೆಳೆಯ ಗಣೇಶ್ ಸಿನೆಮಾದೊಂದಿಗೆ ಬಿಡುಗಡೆಯಾಗುತ್ತಿದೆ ಹಾಗು 'ನಿರುತ್ತರ'ದಲ್ಲಿ ಕಿರಣ್ ಇದ್ದಾರೆ. ಅವರನ್ನು ನನ್ನ ನಿರ್ದೇಶನದ ಸಿನೆಮಾದಲ್ಲಿಯೇ ಪರಿಚಯಿಸಿದ್ದೆ. ಎಲ್ಲ ಸಿನೆಮಾಗಳು ವಿಭಿನ್ನವಾಗಿರುವುದರಿಂದ ಇಲ್ಲಿ ಸ್ಪರ್ಧೆಯೇನು ಇಲ್ಲ. 'ನಾನು ಮತ್ತು ವರಲಕ್ಷ್ಮಿ' ಪ್ರೀತಿಯ ಬಗ್ಗೆ ಆಗಿದ್ದು, ಇದು ಕ್ರಿಸ್ಮಸ್ ಹಬ್ಬಕ್ಕೆ ಪ್ರೇಕ್ಷಕರಿಗೆ ಉಡುಗೊರೆ" ಎನ್ನುತ್ತಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT