ಛಾಯಾಗ್ರಹಕ ಹೆಚ್ ಸಿ ವೇಣು 
ಸಿನಿಮಾ ಸುದ್ದಿ

ಬಾಲಿವುಡ್ ನಲ್ಲಿ ಸ್ಯಾಂಡಲ್ ವುಡ್ ಛಾಯಾಗ್ರಹಕ ಹೆಚ್ ಸಿ ವೇಣು ಕೈಚಳಕ!

ಸ್ಯಾಂಡಲ್ ವುಡ್ ನ ಖ್ಯಾತ ಛಾಯಾಗ್ರಹಕ ಹೆಚ್ ಸಿ ವೇಣು ಶೀಘ್ರವೇ ಬಾಲಿವುಡ್ ನಲ್ಲೂ ತಮ್ಮ ಕೈಚಳಕ ತೋರಲಿದ್ದಾರೆ.

ಸ್ಯಾಂಡಲ್ ವುಡ್ ನ ಖ್ಯಾತ ಛಾಯಾಗ್ರಹಕ ಹೆಚ್ ಸಿ ವೇಣು ಶೀಘ್ರವೇ ಬಾಲಿವುಡ್ ನಲ್ಲೂ ತಮ್ಮ ಕೈಚಳಕ ತೋರಲಿದ್ದಾರೆ. 

ಸ್ಪರ್ಷ, ಆ ದಿನಗಳು, ಜಗ್ಗುದಾದ, ಮಮ್ಮಿ ಸೇವ್ ಮಿ ಚಿತ್ರಗಳು ಸೇರಿದಂತೆ 40ಕ್ಕೂ ಹೆಚ್ಚು ಚಿತ್ರಗಳಲ್ಲಿ ಛಾಯಾಗ್ರಹಣ ಮಾಡಿರುವ ಹೆಚ್ ಸಿ ವೇಣು,  ಪ್ರಭುದೇವ ನಿರ್ದೇಶನದ ಅಭಿಷೇಕ್ ಬಚ್ಚನ್ ಅವರ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿದ್ದಾರೆ. ಚಿತ್ರಕ್ಕೆ ಲೆಫ್ಟಿ (ಎಡಗೈ ಬಳಕೆ ಮಾಡುವವರು) ಎಂಬ ಶೀರ್ಷಿಕೆ ನೀಡಲಾಗುತ್ತದೆ ಎಂಬ ವದಂತಿಗಳಿದ್ದು, ಈ ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಸಿಗಬೇಕಿದೆ. 

ಲೆಫ್ಟಿ ಚಿತ್ರದ ನಾಯಕನಾಗಲಿರುವ ಅಭಿಷೇಕ್ ಬಚ್ಚನ್ ನಿಜ ಜೀವನದಲ್ಲೂ ಬರವಣಿಗೆಗೆ ಎಡಗೈ ಬಳಸುತ್ತಾರೆ ಎಂಬುದು ವಿಶೇಷವಾಗಿದ್ದು 2017 ರ ಮಾರ್ಚ್ ನಿಂದ ಸಿನಿಮಾ ಚಿತ್ರೀಕರಣ ನಡೆಯಲಿದೆ. ಬಾಲಿವುಡ್ ಗೆ ಪ್ರವೇಶಿಸುತ್ತಿರುವುದರ ಬಗ್ಗೆ ಸಿಟಿ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯೆ ನೀಡಿರುವ ವೇಣು, ಪ್ರಭುದೇವಾ ಹಾಗೂ ಅಭಿಷೇಕ್ ಬಚ್ಚನ್ ಅವರೊಂದಿಗೆ ಕೆಲಸ ಮಾಡುವುದು ಕನಸಿನ ಯೋಜನೆಯಾಗಿತ್ತು ಈಗ ಆ ಅವಕಾಶ ಬಂದಿದೆ, ವಾಸ್ತವದಲ್ಲಿ ಬಾಲಿವುಡ್ ಗೆ ಪ್ರವೇಶಿಸುವುದು ನನ್ನ ಕನಸಾಗಿರಲಿಲ್ಲ. 15 ವರ್ಷಗಳಿಂದ ಸ್ನೇಹಿತರಾಗಿರುವ ಪ್ರಭುದೇವಾ ಕಾರಣದಿಂದಾಗಿ ಬಾಲಿವುಡ್ ಗೆ ಹೋಗುತ್ತಿದ್ದೇನೆ ಎಂದಿದ್ದಾರೆ. 

ಹೆಚ್ ಸಿ ವೇಣು ಪ್ರಸ್ತುತ ಅರ್ಜುನ್ ಸರ್ಜಾ ನಿರ್ದೇಶನದ, ಪ್ರೇಮ ಬರಹ ಚಿತ್ರಕ್ಕಾಗಿ ಛಾಯಾಗ್ರಹಣ ಮಾಡುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT