ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಚಿಹ್ನೆ 
ಸಿನಿಮಾ ಸುದ್ದಿ

ಚಿತ್ರ ಪ್ರದರ್ಶನಕ್ಕೆ ಇಂದು ತೆರೆ

ಎಂಟನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಮಖ ಘಟ್ಟಕ್ಕೆ ತಲುಪಿದೆ. ಪ್ರದರ್ಶನಕ್ಕೆ ಆಯ್ಕೆಯಾಗಿದ್ದ ಚಿತ್ರಗಳಿಗೆ ಇಂದು ಕೊನೆಯ ಆಟ...

ಬೆಂಗಳೂರು: ಎಂಟನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಮಖ ಘಟ್ಟಕ್ಕೆ ತಲುಪಿದೆ. ಪ್ರದರ್ಶನಕ್ಕೆ ಆಯ್ಕೆಯಾಗಿದ್ದ ಚಿತ್ರಗಳಿಗೆ ಇಂದು ಕೊನೆಯ ಆಟ. ಬೆಂಗಳೂರಿನ ಒರಾಯನ್ ಮಾಲ್ ಮತ್ತು ಮೈಸೂರಿನ ಐನಾಕ್ಸ್ ನಲ್ಲಿ ನಡೆಯುತ್ತಿರುವ ಸಿನಿಮೋತ್ಸವದ ಚಿತ್ರ ಪ್ರದರ್ಶನಗಳು ಅಧಿಕೃತವಾಗಿ ಗುರುವಾರ ರಾತ್ರಿ 10 ಗಂಟೆಗೆ ಮುಕ್ತಾಯವಾಗಲಿದೆ.ಸಿನಿಮೋತ್ಸವದ ಸಮಾರೋಪ ಸಮಾರಂಭ ಅಧಿಕೃತವಾಗಿ ನಾಳೆ ಸಂಜೆ 5.30ಕ್ಕೆ ಮೈಸೂರಿನ ಅರಮನೆ ಆವರಣದಲ್ಲಿ ನಡೆಯಲಿದೆ.

ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಾರ್ತಾ ಸಚಿವ ರೋಷನ್ ಬೇಗ್ ಸೇರಿದಂತೆ ಚಿತ್ರರಂಗದ ಅನೇಕ ಮಂದಿ ಗಣ್ಯರು ಹಾಜರಿದ್ದು, ಸಿನಿಮೋತ್ಸವದಲ್ಲಿ ತೀರ್ಪುಗಾರರಿಂದ ಮೆಚ್ಚುಗೆ ಪಡೆದ ಚಿತ್ರಗಳಿಗೆ ಪ್ರಶಸ್ತಿ ವಿತರಿಸಲಿದ್ದಾರೆ. ಸಮಾರೋಪದಲ್ಲಿ ಪಾಲ್ಗೊಳ್ಳುವ ಸಲುವಾಗಿ ನಾಳೆ ಚಿತ್ರೋದ್ಯಮ ಸ್ವಯಂಘೋಷಿತವಾಗಿ ಬಂದ್ ಆಚರಿಸುತ್ತಿದೆ. ಈ ಮೂಲಕ ಸಮಾರಂಭದಲ್ಲಿ ಚಿತ್ರೋದ್ಯಮದ ಎಲ್ಲ ವಿಭಾಗಗಳ ಸಿಬ್ಬಂದಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ಸಿನಿಮೋತ್ಸವದ ಕೊನೆಯ ದಿನವಾದ ಇಂದು ಸೀತಾರಾಮ್ ಶಾಸ್ತ್ರಿ ನಿರ್ದೇಶನದ ಮಹಾಕವಿ ಕಾಳಿದಾಸ, ಎಸ್. ನಾರಾಯಣ್ ನಿರ್ದೇಶನದ ದಕ್ಷ ಹಾಗೂ ಮಹಾದೇವ್ ರಾವ್ ನಿರ್ದೇಶನದ ಚಿಗುರು ಕನ್ನಡ ಚಿತ್ರಗಳ ಜತೆಗೆ ವಿವಿಧ ಭಾಷೆಯ ಹಲವು ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಬೆಂಗಾಲಿಯ ಸಿನಿಮಾವಾಲಾ ಹಾಗೂ ಕೊಸೊವೊದ ದಿ ಹೀರೋ ಮರುಪ್ರದರ್ಶನದ ಜತೆಗೆ, ಕಝಕಿಸ್ತಾನದ ಸ್ಟ್ರೇಂಜರ್, ಡೆನ್ಮಾರ್ಕ್ ನ ಬರಬರ ಚಿತ್ರಗಳು ಕುತೂಹಲ ಮೂಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT