'ಹಾಫ್ ಮೆಂಟ್ಲು' ಚಿತ್ರ ನಿರ್ಮಾಪಕ ಶಶಿಕುಮಾರ್ ಆತ್ಮಹತ್ಯೆಗೆ ಯತ್ನ 
ಸಿನಿಮಾ ಸುದ್ದಿ

'ಹಾಫ್ ಮೆಂಟ್ಲು' ಚಿತ್ರ ನಿರ್ಮಾಪಕ ಶಶಿಕುಮಾರ್ ಆತ್ಮಹತ್ಯೆಗೆ ಯತ್ನ

ಚಿತ್ರ ಬಿಡುಗಡೆಗೆ ಸಹಕಾರ ಸಿಗಲಿಲ್ಲ ಎಂಬ ಕಾರಣಕ್ಕೆ ಹಾಫ್ ಮೆಂಟ್ಲು ಚಿತ್ರದ ನಿರ್ಮಾ ಶಶಿಕುಮಾರ್ ಅವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ...

ಬೆಂಗಳೂರು: ಚಿತ್ರ ಬಿಡುಗಡೆಗೆ ಸಹಕಾರ ಸಿಗಲಿಲ್ಲ ಎಂಬ ಕಾರಣಕ್ಕೆ ಹಾಫ್ ಮೆಂಟ್ಲು ಚಿತ್ರದ ನಿರ್ಮಾಪಕ ಶಶಿಕುಮಾರ್ ಅವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ. 
ನಗರದ ಕಾಮಾಕ್ಷಿಪಾಳ್ಯದಲ್ಲಿರುವ ತಮ್ಮ ನಿವಾಸದಲ್ಲಿ ನಿರ್ಮಾಪಕ ಶಶಿಕುಮಾರ್ ಅವರು ವಿಷ ಸೇವನೆ ಮಾಡಿದ್ದು, ಕೂಡಲೇ ಅವರನ್ನು ಸುಂಕದಕಟ್ಟೆಯಲ್ಲಿರುವ ಲಕ್ಷ್ಮಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಶಶಿಕುಮಾರ್ ಅವರು ನವನಟ ಸಂದೀಪ್ ಅಭಿನಯದ 'ಹಾಫ್ ಮೆಂಟಲ್' ಚಿತ್ರದ ನಿರ್ಮಾಪಕರಾಗಿದ್ದು, ಚಿತ್ರದ ಚಿತ್ರೀಕರಣ ಮುಗಿದು ವರ್ಷಗಳೇ ಕಳೆದರೂ, ಕಳೆದೆರಡು ವರ್ಷಗಳಿಂದಲೂ ಚಿತ್ರ ಬಿಡುಗಡೆಗೆ ಪ್ರಯತ್ನ ನಡೆಸುತ್ತಿದ್ದರು. ಆದರೆ, ಚಿತ್ರ ಬಿಡುಗಡೆಗೆ ಯಾವುದೇ ಸಹಕಾರ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದರು. ಚಿತ್ರ ನಿರ್ಮಾಣಕ್ಕಾಗಿ ಶಶಿಕುಮಾರ್ ಅವರು ಹಲವು ಸಾಲಗಳನ್ನು ಮಾಡಿಕೊಂಡಿದ್ದು, ಹಲವು ದಿನಗಳಿಂದಲೂ ಮಾನಸಿಕೆ ಖಿನ್ನತೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಯತ್ನಿಸಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT