ಅಂಬರೀಷ್ ಮತ್ತು ಶರಣ್ 
ಸಿನಿಮಾ ಸುದ್ದಿ

ರಾಜ್-ವಿಷ್ಣು ಸಿನಿಮಾ ದಲ್ಲಿ ಅಂಬರೀಷ್ ಗೆ ಶರಣ್ ತಾತನ ಪಾತ್ರ

ತಮಿಳಿನ ರಜನಿ-ಮುರುಗನ್ ಚಿತ್ರವನ್ನು ಕನ್ನಡಕ್ಕೆ ರಿಮೇಕ್ ಮಾಡಲಾಗುತ್ತಿದೆ. ಕನ್ನಡದಲ್ಲಿ ರಾಜ್-ವಿಷ್ಣು ಎಂಬ ಟೈಟಲ್ ನಲ್ಲಿ ಸಿನಿಮಾ ನಿರ್ಮಾಪಕ ರಾಮು ಸಿನಿಮಾ ಮಾಡುತ್ತಿದ್ದಾರೆ....

ತಮಿಳಿನ ರಜನಿ-ಮುರುಗನ್ ಚಿತ್ರವನ್ನು ಕನ್ನಡಕ್ಕೆ ರಿಮೇಕ್ ಮಾಡಲಾಗುತ್ತಿದೆ. ಕನ್ನಡದಲ್ಲಿ ರಾಜ್-ವಿಷ್ಣು ಎಂಬ ಟೈಟಲ್ ನಲ್ಲಿ ಸಿನಿಮಾ ನಿರ್ಮಾಪಕ ರಾಮು ಸಿನಿಮಾ ಮಾಡುತ್ತಿದ್ದಾರೆ.

ಈಗಾಗಲೇ ತಮಿಳಿನ ರಜನಿ-ಮುರುಗನ್ ಸಿನಿಮಾ ಹಕ್ಕನ್ನು ಖರೀದಿಸಿರುವ ರಾಮು ಕನ್ನಡದ ನೇಟಿವಿಟಿಗೆ ಹೊಂದಿಕೊಳ್ಳುವಂತೆ ಚಿತ್ರ ತಯಾರಿಸುತ್ತಿದ್ದಾರೆ. ಸ್ಯಾಂಡಲ್ ವುಡ್ ಲೆಜೆಂಡ್ ಗಳಾದ ಡಾ. ರಾಜ್ ಕುಮಾರ್ ಹಾಗೂ ಡಾ. ವಿಷ್ಣುವರ್ಧನ್ ಅವರ ಹೆಸರನ್ನು ಚಿತ್ರಕ್ಕೆ ಇಡಲಾಗಿದೆ.

ಕಾಮಿಡಿ ಮನೋರಂಜನಾ ಚಿತ್ರವಾಗಿದೆ. ಅರಸು, ಆಕಾಶ್ ಹಾಗೂ ತೆಲುಗಿನ ಈಗ ಚಿತ್ರಕ್ಕೆ ಸಂಭಾಷಣೆ ಬರೆದಿದ್ದ   ಜನಾರ್ಧನ ಮಹರ್ಷಿ ರಾಜ್ -ವಿಷ್ಣು ಚಿತ್ರಕ್ಕೂ ಸಂಭಾಷಣೆ ಬರೆದಿದ್ದಾರೆ.  

ತಮಿಳಿನಲ್ಲಿ ರಜನಿಕಾಂತ್ ಅಭಿಮಾನಿ ಅಚ್ಯುತರಾವ್ ನಟಿಸಿದ್ದ ಪಾತ್ರದಲ್ಲಿ ಕನ್ನಡಲ್ಲಿ ಶರಣ್ ಅಭಿನಯಿಸುತ್ತಿದ್ದಾರೆ. ಇದರ ಮತ್ತೊಂದು ವಿಶೇಷತೆ ಎಂದರೆ ಶರಣ್ ತಾತನಾಗಿ ರೆಬೆಲ್ ಸ್ಟಾರ್ ಅಂಬರೀಷ್  ಗೌಡ್ರ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಚಿತಾ ರಾಮ್ ಡೇಟ್ ಹೊಂದಿಕೆಯಾದರೇ ಆಕೆಯೇ ಚಿತ್ರದ ನಾಯಕಿಯಾಗಿ ಅಭಿನಯಿಸಲಿದ್ದಾರೆ. ಇನ್ನು ಶರಣ್ ಜೊತೆ  ಚಿಕ್ಕಣ್ಣ ಸಾಧು ಕೋಕಿಲಾ ಹಾಗೂ ರವಿಶಂಕರ್ ಕೂಡಾ ಚಿತ್ರದಲ್ಲಿ ಅಭಿನಯಿಸಲಿದ್ದು, ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ ಎಂದು ರಾಮು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT