ಆರ್ ಚಂದ್ರು 
ಸಿನಿಮಾ ಸುದ್ದಿ

ಜೈಪುರ್ ಫಿಲ್ಮಿ ಫೆಸ್ಟಿವಲ್‍ನಲ್ಲಿ ಚಂದ್ರು ಚಿತ್ರಕ್ಕೆ ಪ್ರಶಸ್ತಿ

ಕನ್ನಡದಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ 'ಚಾರ್‍ಮಿನಾರ್' ಚಿತ್ರ ತೆಲುಗಿಗೆ ರಿಮೇಕ್ ಆಗಿದ್ದು ಎಲ್ಲರಿಗೂ ಗೊತ್ತಿದೆ. ಈ ಚಿತ್ರವನ್ನು ತೆಲುಗಿನಲ್ಲೂ 'ಕೃಷ್ಣಮ್ಮ ಕಲಿಪಿಂದಿ ಇದ್ದರಿನಿ'...

ಕನ್ನಡದಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ 'ಚಾರ್‍ಮಿನಾರ್' ಚಿತ್ರ ತೆಲುಗಿಗೆ ರಿಮೇಕ್ ಆಗಿದ್ದು ಎಲ್ಲರಿಗೂ ಗೊತ್ತಿದೆ. ಈ ಚಿತ್ರವನ್ನು ತೆಲುಗಿನಲ್ಲೂ 'ಕೃಷ್ಣಮ್ಮ ಕಲಿಪಿಂದಿ ಇದ್ದರಿನಿ' ಹೆಸರಿನಲ್ಲಿ ಆರ್ ಚಂದ್ರು ಅವರೇ ನಿರ್ದೇಶಿಸಿದ್ದು, ಸುದೀಪ್ ಬಾಬು, ನಂದಿತಾ ಜೋಡಿಯಾಗಿ ಅಭಿನಯಿಸಿದ್ದರು. ಕಳೆದ ವರ್ಷ ತೆಲುಗಿನಲ್ಲಿ ಮ್ಯೂಸಿಕಲ್ ಹಿಟ್ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದ ಇದೇ ಸಿನಿಮಾ ಈಗ ಜೈಪುರ್ ಫಿಲ್ಮಿ ಫೆಸ್ಟಿವಲ್‍ನಲ್ಲಿ ಪ್ರಶಸ್ತಿಗೆ ಪಾತ್ರವಾಗಿದೆ. ಕಳೆದ ವರ್ಷ ನಡೆದ ಈ ಚಿತ್ರೋತ್ಸವದಲ್ಲಿ ನೂರಾರು ಸಿನಿಮಾಗಳು ಪ್ರದರ್ಶನಗೊಂಡಿದ್ದವು. ಮೂರು ವಿಭಾಗಗಳಲ್ಲಿ ನೂರಾರು ಚಿತ್ರಗಳು ಪಾಲ್ಗೊಂಡಿದ್ದವು. ಈ ಪೈಕಿ 'ಬೆಸ್ಟ್ ರೊಮ್ಯಾಂಟಿಕ್ ಫಿಲಂ' ವಿಭಾಗದಲ್ಲಿ 'ಕೃಷ್ಣಮ್ಮ ಕಲಿಪಿಂದಿ ಇದ್ದರಿನಿ' ಚಿತ್ರಕ್ಕೆ ಪ್ರಶಸ್ತಿ ಲಭಿಸಿದೆ. 'ನಾನು ಯಾವುದೇ ಪ್ರಶಸ್ತಿಯನ್ನು ನಿರೀಕ್ಷೆ ಮಾಡದೆ ಚಿತ್ರೋತ್ಸವಕ್ಕೆ ಚಿತ್ರವನ್ನು ಕಳುಹಿಸಿಕೊಟ್ಟೆ. ಆದರೆ, ಬೇರೆ ಬೇರೆ ದೇಶಗಳ ದೊಡ್ಡ ನಿರ್ದೇಶಕರ ಚಿತ್ರಗಳ ಸಾಲಿನಲ್ಲಿ ಕನ್ನಡದ ನಿರ್ದೇಶಕನ ಚಿತ್ರಕ್ಕೆ ಅವಾರ್ಡ್ ಬಂದಿರುವುದು ಕನ್ನಡಿಗನಾಗಿ ಹೆಮ್ಮೆ ಪಟ್ಟುಕೊಳ್ಳುತ್ತೇನೆ. ಈ ಪ್ರಶಸ್ತಿ ನನ್ನ ಚಿತ್ರಕ್ಕೆ ಬಂದಿರುವುದು ಮತ್ತಷ್ಟು ಒಳ್ಳೆಯ ಸಿನಿಮಾಗಳನ್ನು ಮಾಡುವುದಕ್ಕೆ ಸಾಧ್ಯವಾಗಿಸಿದೆ' ಎನ್ನುತ್ತಾರೆ ಚಂದ್ರು. ಸದ್ಯ ಪ್ರಶಸ್ತಿ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಚಿತ್ರತಂಡದ ಗೆಳೆಯರು ಆರ್ ಚಂದ್ರು ಅವರನ್ನು ಹೈದರಾಬಾದ್‍ಗೆ ಆಹ್ವಾನಿಸಿದ್ದಾರೆ. ತೆಲುಗು ಚಿತ್ರರಂಗದ ಹಲವು ಗಣ್ಯರ ಸಮ್ಮುಖದಲ್ಲಿ ಚಂದ್ರು ಅವರನ್ನು ಸನ್ಮಾನಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!