ರನ್ ಆಂಟನಿ ಚಿತ್ರದ ಹಾಡಿನ ದೃಶ್ಯ 
ಸಿನಿಮಾ ಸುದ್ದಿ

ರನ್ ಆಂಟನಿಗೆ ಪುನೀತ್ ಧ್ವನಿ

ಇತ್ತೀಚೆಗೆ ತಮ್ಮ ಸಹೋದರ ಶಿವರಾಜ್ ಕುಮಾರ್ ಅವರ ಚಿತ್ರಕ್ಕೆ ಹಾಡಿದ್ದ ಪುನೀತ್ ರಾಜ್ ಕುಮಾರ್ ಇದೀಗ ತಮ್ಮ ಮತ್ತೊಬ್ಬ...

ಇತ್ತೀಚೆಗೆ ತಮ್ಮ ಸಹೋದರ ಶಿವರಾಜ್ ಕುಮಾರ್ ಅವರ ಚಿತ್ರಕ್ಕೆ ಹಾಡಿದ್ದ ಪುನೀತ್ ರಾಜ್ ಕುಮಾರ್ ಇದೀಗ ತಮ್ಮ ಮತ್ತೊಬ್ಬ ಅಣ್ಣನ ಮಗ ವಿನಯ್ ರಾಜ್ ಕುಮಾರ್ ಅಭಿನಯದ ಚಿತ್ರ ರನ್ ಆಂಟನಿಯಲ್ಲಿ ಹಾಡಲಿದ್ದಾರೆ.

ಚಿತ್ರದಲ್ಲಿನ ಜನಕು..ಜನಕು..ಮಂಡೋಲೆ ಹಾಡಿನ ಚಿತ್ರೀಕರಣ ಕಳೆದ ವಾರ ನಡೆದಿತ್ತು. ಇದು ಚಿತ್ರದ ಮೊದಲ ಹಾಡಾಗಿದೆ. ಯುವಕರ ನಡುವಿನ ಸಂಬಂಧದ ಕುರಿತಾಗಿ ಈ ಹಾಡಿನಲ್ಲಿ ವರ್ಣಿಸಲಾಗಿದೆ. ಚಿತ್ರದಲ್ಲಿ ವಿನಯ್ ಅವರದ್ದು ಕ್ಯಾಥೊಲಿಕ್ ಪಾತ್ರವಾಗಿದ್ದು, ವರ್ಣಚಿತ್ರ ಹಾಡನ್ನು ಚರ್ಚ್ ಪಕ್ಕದಲ್ಲಿ ಚಿತ್ರೀಕರಣ ಮಾಡಲಾಗಿದೆ. ಮುರಳಿ ಮಾಸ್ಟರ್ ಇದಕ್ಕೆ ಕೊರಿಯೋಗ್ರಫಿ ಮಾಡಿದ್ದು, ನಾಗೇಂದ್ರ ಅರಸ್ ರವರು ಸಾಹಿತ್ಯ ಬರೆದಿದ್ದಾರೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ರಘು ಶಾಸ್ತ್ರಿ.

ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದ್ದು, ವಿದೇಶದಲ್ಲಿ ಚಿತ್ರೀಕರಣದ ಬಗ್ಗೆ ನಿರ್ದೇಶಕರು ಇನ್ನೂ ನಿರ್ಧರಿಸಿಲ್ಲವಂತೆ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಅವುಗಳನ್ನು ನಗರದಲ್ಲಿಯೇ ಚಿತ್ರೀಕರಣ ಮಾಡಲಿದ್ದೇವೆ. 5ನೇ ಹಾಡಿಗೆ ವಿದೇಶಕ್ಕೆ ಹೋಗಬೇಕೆ, ಬೇಡವೇ ಎಂಬ ಬಗ್ಗೆ ತೀರ್ಮಾನಿಸುತ್ತೇವೆ. ಚಿತ್ರದ ಕಥೆ ಬೆಂಗಳೂರಿನಲ್ಲಿ ನಡೆಯುತ್ತದೆ. ಹಾಗಾಗಿ ವಿದೇಶಿ ಸ್ಥಳಗಳ ಅಗತ್ಯವಿಲ್ಲ ಎಂದು ನಿರ್ದೇಶಕರು ಹೇಳುತ್ತಾರೆ.

ಚಿತ್ರದ ಮೊದಲ ಹಂತದ ಚಿತ್ರೀಕರಣ ಜನವರಿ 18ಕ್ಕೆ ಮುಗಿಯುತ್ತದೆ.ಎರಡನೇ ಹಂತ ಫೆಬ್ರುವರಿಗೆ ಮುಗಿಸುವ ಯೋಜನೆ ನಮ್ಮದು. ಇದುವರೆಗೆ ಎಲ್ಲಾ ನಾವಂದುಕೊಂಡಂತೆ ನಡೆಯುತ್ತಿದೆ. ನಿಜವಾಗಿ ಹೇಳಬೇಕೆಂದರೆ ನಾವು ಹೆಚ್ಚಿನ ಶಾಟ್ ತೆಗೆಯುತ್ತಿದ್ದೇವೆ. ಈಗ ಚಿತ್ರದ ನಾಯಕ-ನಾಯಕಿಯರಾದ ವಿನಯ್ ಮತ್ತು ಸುಷ್ಮಾರ ನಟನೆಯ ಚಿತ್ರೀಕರಣ ಮಾಡುತ್ತಿದ್ದೇವೆ. ಮತ್ತೊಬ್ಬ ನಾಯಕಿ ರುಕ್ಸಾರ್ ಸದ್ಯದಲ್ಲಿಯೇ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT