ಎರಡು ಹೊಸ ಚಿತ್ರಗಳಿಗೆ ಕ್ಲಾಪ್ ಮಾಡಿದ ನಟರಾದ ವಿ.ರವಿಚಂದ್ರನ್ ಮತ್ತು ಯಶ್ 
ಸಿನಿಮಾ ಸುದ್ದಿ

ಸಂಕ್ರಾಂತಿಗೆ ಎರಡು ಮೆಗಾ ಸಿನಿಮಾಗಳ ಮುಹೂರ್ತ

ಸಂಕ್ರಾಂತಿಯ ಶುಭ ಮುಹೂರ್ತಕ್ಕೆ ನಿರ್ಮಾಪಕರಾದ ಜಯಣ್ಣ ಮತ್ತು ಬೋಗೇಂದ್ರ ನಿರ್ಮಾಣದ ಎರಡು ಚಿತ್ರಗಳು ಮುಹೂರ್ತ ಕಂಡಿವೆ. ಬೆಂಗಳೂರಿನ...

ಸಂಕ್ರಾಂತಿಯ ಶುಭ ಮುಹೂರ್ತಕ್ಕೆ ನಿರ್ಮಾಪಕರಾದ ಜಯಣ್ಣ ಮತ್ತು ಬೋಗೇಂದ್ರ ನಿರ್ಮಾಣದ ಎರಡು ಚಿತ್ರಗಳು ಮುಹೂರ್ತ ಕಂಡಿವೆ. ಬೆಂಗಳೂರಿನ ದೇವಾಲಯವೊಂದರಲ್ಲಿ ಚಿತ್ರಗಳಿಗೆ ನಟರಾದ ರವಿಚಂದ್ರನ್ ಮತ್ತು ಯಶ್ ಕ್ಲಾಪ್ ಹೊಡೆದರು. ಅದರಲ್ಲಿ ಒಂದು ಚಿತ್ರ ಯೋಗಿ ಬಿ.ರಾಜ್ ನಿರ್ದೇಶನದ ಶಿವರಾಜ್ ಕುಮಾರ್ ಅಭಿನಯದ ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಮತ್ತು ಇನ್ನೊಂದು ರವಿಚಂದ್ರನ್ ಪುತ್ರ ಮನೋರಂಜನ್ ನ ಮೊದಲ ಚಿತ್ರ. ಅದಕ್ಕೆ ಸಾಹೇಬ ಎನ್ನುವ ಶೀರ್ಷಿಕೆಯಿಡುವ ಯೋಜನೆ ನಿರ್ದೇಶಕರದ್ದು. ಈ ಚಿತ್ರವನ್ನು ನಿರ್ದೇಶಿಸುತ್ತಿರುವವರು ಕಂಠಿ ಚಿತ್ರದ ಖ್ಯಾತಿಯ ಭರತ್.

ಚಿತ್ರದ ಬಗ್ಗೆ ಸಂತೋಷದಿಂದ ಮಾತನಾಡಿದ ನಿರ್ಮಾಪಕ ಜಯಣ್ಣ, ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಬ್ಬರು ಪ್ರಮುಖ ನಟರಿಂದ ಎರಡು ಚಿತ್ರಗಳು ಒಟ್ಟಿಗೆ ಮುಹೂರ್ತ ಕಾಣುತ್ತಿವೆ. ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಹಾಗೂ ರವಿಚಂದ್ರನ್ ಪತ್ನಿ ಆರ್. ಸುಮತಿ ಕ್ಯಾಮರಾಗೆ ಚಾಲನೆ ನೀಡಿದರು.ಕ್ಯಾಮರಾಮೆನ್ ಸೀತಾರಾಮ್ ಗಳಿಗೆಯನ್ನು ಸೆರೆಹಿಡಿದರು.

ಮನೋರಂಜನ್ ಅಭಿನಯದ ಚಿತ್ರದ ಚಿತ್ರೀಕರಣ ನಾಡಿದ್ದು 18ರಿಂದ ಆರಂಭವಾಗಲಿದೆ. ಯೋಗಿಯವರ ಚಿತ್ರ ಫೆಬ್ರವರಿ ಕೊನೆ ವೇಳೆಗೆ ಶುರುವಾಗಲಿದೆ. ಚಿತ್ರಗಳಿಗೆ ಹೀರೋಯಿನ್ ಮತ್ತು ಪೋಷಕ ನಟರ ಆಯ್ಕೆ ಸದ್ಯದಲ್ಲಿಯೇ ನಡೆಯಲಿದೆಯಂತೆ.

ತನ್ನ ಮೊದಲ ಚಿತ್ರದ ಬಗ್ಗೆ ಕಾತರದಿಂದ ಮಾತನಾಡುವ ಮನೋರಂಜನ್, ಇದು ನನ್ನ ಜೀವನದಲ್ಲಿ ಹೊಸ ಪಯಣ. ನನ್ನ ಭವಿಷ್ಯ ಚೆನ್ನಾಗಿರುತ್ತದೆ ಎಂದು ಭಾವಿಸುತ್ತೇನೆ. ಇದುವರೆಗೆ ನನ್ನನ್ನು ಎಲ್ಲರೂ ಹರಸಿ ಹಾರೈಸಿದ್ದಾರೆ. ಚೆನ್ನಾಗಿ ಮಾಡು ಎಂದು ಹೇಳುವ ನನ್ನ ತಂದೆಯ ಮಾತುಗಳು ನನಗೆ ಪ್ರೇರಣೆ ನೀಡುತ್ತವೆ ಎನ್ನುತ್ತಾರೆ.

ವಿ.ಹರಿಕೃಷ್ಣನ್ ಎರಡೂ ಚಿತ್ರಗಳಿಗೆ ಸಂಗೀತ ನೀಡಿದರೆ ಸಾಹಸ ನಿರ್ದೇಶನ ರವಿ ವರ್ಮ ಅವರದ್ದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT