ನಟ ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಶಬರಿ ಮಲೆ ಅಯ್ಯಪ್ಪ ಮಾಲೆ ಧರಿಸಿದ ಶಿವಣ್ಣ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅವರು ಬುಧವಾರದಿಂದ ಅಯ್ಯಪ್ಪ ಮಾಲಾಧಾರಿಯಾಗಿದ್ದಾರೆ.

ಬೆಂಗಳೂರು:  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅವರು ಬುಧವಾರದಿಂದ ಅಯ್ಯಪ್ಪ ಮಾಲಾಧಾರಿಯಾಗಿದ್ದಾರೆ.

ಬೆಂಗಳೂರಿನ ದೇಗುಲವೊಂದರಲ್ಲಿ ಶಿವರಾಜ್ ಕುಮಾರ್ ಅವರು ಅಯ್ಯಪ್ಪ ಮಾಲೆ ಧರಿಸಿದ್ರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಜೊತೆಗಿದ್ರು. ಶಿವಣ್ಣ ಕಳೆದ ಕೆಲ ವರ್ಷಗಳಿಂದ ಶಬರಿಮಲೆಗೆ ಹೋಗುತ್ತಿದ್ದಾರೆ. ಪ್ರತಿ ಸಾರಿ ಶಿವಣ್ಣನಿಗೆ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರು ಸಾಥ್ ನೀಡುತ್ತಿದ್ದರು. ಆದರೆ ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯ ಸರಿಯಿಲ್ಲದ ಕಾರಣ ಅವರು ಈ ಬಾರಿ ಶಬರಿಮಲೆಗೆ ತೆರಳುತ್ತಿಲ್ಲವಂತೆ. ಪುನೀತ್ ರಾಜ್ ಕುಮಾರ್ ಚಕ್ರವ್ಯೂಹ ಸಿನಿಮಾದಲ್ಲಿ ಬ್ಯುಸಿ ಇರೋದರಿಂದ ಅವರೂ ಹೋಗುತ್ತಿಲ್ಲ.

ಶಿವಣ್ಣ ಕೆಲ ದಿನಗಳ ಹಿಂದೆಯೇ ಮಾಲೆ ಹಾಕಬೇಕಾಗಿತ್ತು. ಆದ್ರೆ ಇಫಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗಿಯಾಗಲು ಶಿವರಾಜ್ ಕುಮಾರ್ ಹೈದ್ರಾಬಾದ್ ಗೆ ತೆರಳಿದ್ದರಿಂದ ಅವರು ನಿನ್ನೆ ಮಾಲೆ ಧರಿಸಿದ್ದು, ಫೆಬ್ರವರಿ 11 ರವರೆಗೂ ವ್ರತದಲ್ಲಿರಲಿದ್ದಾರೆ. ಫೆಬ್ರವರಿ 12 ರಂದು ಶಿವರಾಜ್ ಕುಮಾರ್ ಶಬರಿಮಲೆಗೆ ಹೊರಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT