ಅಮೋಘ ವರ್ಷ 
ಸಿನಿಮಾ ಸುದ್ದಿ

ಕಾಳಿ ಸಾಕ್ಷ್ಯ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

ಕನ್ನಡದ ಖ್ಯಾತ ವನ್ಯ ಜೀವಿ ಚಿತ್ರ ನಿರ್ದೇಶಕ ಅಮೋಘ ವರ್ಷ ನಿರ್ಮಿಸಿರುವ ಕಾಳಿ ಸಾಕ್ಷ್ಯ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ...

ಬೆಂಗಳೂರು: ಕನ್ನಡದ ಖ್ಯಾತ ವನ್ಯ ಜೀವಿ ಚಿತ್ರ ನಿರ್ದೇಶಕ ಅಮೋಘ ವರ್ಷ ನಿರ್ಮಿಸಿರುವ ಕಾಳಿ ಸಾಕ್ಷ್ಯ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.ಸಾಮಾಜಿಕ ಬದಲಾವಣೆಗೆ ಕಾರಣವಾಗುವ ಸಾಕ್ಷ್ಯ ಚಿತ್ರಗಳನ್ನು ನಿರ್ಮಿಸುವವರಿಗೆಂದೇ ಇಂಪ್ಯಾಕ್ಟಡಾಕ್ಸ್ ಸಂಸ್ಥೆ ಪ್ರತಿ ವರ್ಷ ಜಾಗತಿಕ ಸ್ಪರ್ಧೆ ನಡೆಸುತ್ತದೆ.

ಈ ಸ್ಪರ್ಧೆಯಲ್ಲಿ ಕನ್ನಡಿಗ ಅಮೋಘವರ್ಷ ನಿರ್ದೇಶಿಸಿರುವ ಕಾಳಿ ಸಾಕ್ಷ್ಯ ಚಿತ್ರ ಕ್ಕೆ ಆವಾರ್ಡ್ ಆಫ್ ಮೆರಿಟ್ ವಿಭಾಗದಲ್ಲಿ ಪ್ರಶಸ್ತಿ ಬಂದಿದೆ. ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕರೂ ಸೇರಿ ಜಗತ್ತಿನ ಹೆಸರಾಂತ ನಿರ್ಮಾಪಕರು ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಉತ್ತರರ ಕನ್ನಡ ಜಿಲ್ಲೆಯಲ್ಲಿ ವನ ಸಂಪತ್ತಿನ ಸಂರಕ್ಷಣೆ, ಅಭಿವದ್ಧಿಗೆ ಕಾಳಿ ನದಿ ಹೇಗೆ ಕಾರಣವಾಗಿದೆ , ಅಲ್ಲದೇ ಹುಲಿ ಸಂರಕ್ಷಣೆಯಲ್ಲಿ ಈ ನದಿ ಎಷ್ಟು ಪ್ರಮುಖ ಪಾತ್ರ ವಹಿಸುತ್ತದೆ ಎನ್ನುವುದನ್ನು ಸಾಕ್ಷ್ಯ ಚಿತ್ರದಲ್ಲಿ ಬಿಂಬಿಸಲಾಗಿದೆ. ಕರ್ನಾಟಕ ಅರಣ್ಯ ಇಲಾಖೆ ಪ್ರಾಯೋಜಕತ್ವದಲ್ಲಿ ಈ ಸಾಕ್ಷ್ಯ ಚಿತ್ರ ನಿರ್ಮಾಣಗೊಂಡಿದೆ.

ಕಾಳಿ ಸಾಕ್ಷ್ಯ ಚಿತ್ರಕ್ಕೆ ಭಾರಿ ಜನಸ್ಪಂದನೆ ಸಿಕ್ಕ ನಂತರ ಸರ್ಕಾರ ಈಗ ದಾಂಡೇಲಿ ಹುಲಿ ಸಂರಕ್ಷಿತ ಪ್ರದೇಶವನ್ನು ಕಾಳಿ ಹುಲಿ ಸಂರಕ್ಷಿತ ಪ್ರದೇಶ ಎಂದು ಮರು ನಾಮಕರಣ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?: ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಆದೇಶ! ಆದ್ರೆ..

ವೈಶಾಕ್ ಆತ್ಮಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್​: ನಟಿ ಕೃಷಿ ತಾಪಂಡ ಜತೆ ಅಕ್ರಮ ಸಂಬಂಧ; ಪೊಲೀಸರಿಗೆ ಪತ್ನಿ ದೂರು

ಬಿಜೆಪಿಯ ಸಕ್ರಿಯ ಸದಸ್ಯತ್ವ ಪಡೆದ ರಾಜನಾಥ್ ಸಿಂಗ್ 2ನೇ ಪುತ್ರನಿಗೆ ಉಪಾಧ್ಯಕ್ಷ ಹುದ್ದೆ!

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!

Venezuela Earth quake: ನೆರವಿಗೆ ಧಾವಿಸಿದ ಅಮೆರಿಕ, ಟ್ರಂಪ್ ಆರ್ಥಿಕ ನೆರವು ಘೋಷಣೆ