ಗುರುನಂದನ್ 
ಸಿನಿಮಾ ಸುದ್ದಿ

ಫಸ್ಟ್ ರ್ಯಾಂಕ್ ರಾಜು ತಂಡದೊಂದಿಗೆ ಶಿವಲಿಂಗ ನಿರ್ಮಾಪಕರಿಂದ ಚಿತ್ರ ನಿರ್ಮಾಣ

ಸೆಂಚೂರಿ ಸ್ಟಾರ್ ಶಿವರಾಜ್ ಕುಮಾರ್ ಅಭಿಯದ ಸೂಪರ್ ಹಿಟ್ ಚಿತ್ರ ಶಿವಲಿಂಗದ ನಿರ್ಮಾಪಕರು ಇದೀಗ ಫಸ್ಟ್ ರ್ಯಾಂಕ್ ರಾಜು ಚಿತ್ರತಂಡದೊಂದಿಗೆ ಹೊಸ ಪ್ರಾಜೆಕ್ಟ್

ಸೆಂಚೂರಿ ಸ್ಟಾರ್ ಶಿವರಾಜ್ ಕುಮಾರ್ ಅಭಿಯದ ಸೂಪರ್ ಹಿಟ್ ಚಿತ್ರ ಶಿವಲಿಂಗದ ನಿರ್ಮಾಪಕರು ಇದೀಗ ಫಸ್ಟ್ ರ್ಯಾಂಕ್ ರಾಜು ಚಿತ್ರತಂಡದೊಂದಿಗೆ ಹೊಸ ಪ್ರಾಜೆಕ್ಟ್ ಕೈಹಾಕಿದ್ದಾರೆ.

ಫಸ್ಟ್ ರ್ಯಾಂಕ್ ರಾಜು ನಂತ ಸೂಪರ್ ಹಿಟ್ ಚಿತ್ರ ನೀಡಿದ ನಿರ್ದೇಶಕ ನರೇಶ್ ಕುಮಾರ್ ತಂಡದೊಂದಿಗೆ ಸುರೇಶ್ ಆರ್ಟ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಪಕ ಕೆಎಸ್ ಸುರೇಶ್ ಹೊಸ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದನ್ನು ಸ್ವತ ನರೇಶ್ ಕುಮಾರ್ ಅವರೇ ಹೇಳಿದ್ದಾರೆ.

ಗೋವಿಂದಾಯನಮಃ, ಶ್ರಾವಣಿ ಸುಬ್ರಮಣ್ಯ ಹಾಗೂ ಇತ್ತೀಚಿನ ಬ್ಲಾಕ್ ಬಸ್ಟರ್ ಚಿತ್ರ ಶಿವಲಿಂಗ ಚಿತ್ರ ನಿರ್ಮಾಪಕರೊಂದಿಗೆ ಕೆಲಸ ಮಾಡುತ್ತಿದ್ದೇನೆ. ಚಿತ್ರಕ್ಕೆ ಗುರುನಂದನ್ ಅವರೇ ನಾಯಕನಾಗಿ ನಟಿಸುವುದಕ್ಕೆ ಸುರೇಶ್ ಅವರು ಓಕೆ ಎಂದಿದ್ದಾರೆ. ಇನ್ನು ಸ್ಮೈಲ್ ಪ್ಲೀಸ್ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸ್ಮೈಲ್ ಪ್ಲೀಸ್ ನಂತರ ನರೇಶ್ ಕುಮಾರ್ ಚಿತ್ರದಲ್ಲಿ ಗುರುನಂದನ್ ನಟಿಸಲಿದ್ದು ಜತೆಗಾರ್ತಿಯ ಹುಡುಕಾಟದಲ್ಲಿ ಚಿತ್ರ ತಂಡವಿದೆ.

ಫಸ್ಟ್ ರ್ಯಾಂಕ್ ರಾಜು ಚಿತ್ರದ ಛಾಯಾಗ್ರಾಹಕ, ನಟಿ ಹಾಗೂ ನಿರ್ಮಾಪಕರ ಹೊರತು ಉಳಿದ ತಂತ್ರಜ್ಞರೇ ಈ ಚಿತ್ರಕ್ಕೂ ಕೆಲಸ ಮಾಡಲಿದೆ ಎಂದು ನರೇಶ್ ಕುಮಾರ್ ಹೇಳಿದ್ದಾರೆ.

ಫಸ್ಟ್ ರ್ಯಾಂಕ್ ರಾಜು ಚಿತ್ರ ನಮ್ಮ ಶಿಕ್ಷಣ ಕುರಿತಾಗಿತ್ತು. ಇದೀಗ ನರೇಶ್ ಅವರು ಜೀವನ ಕುರಿತಾದ ಚಿತ್ರ ನಿರ್ದೇಶನ ಮಾಡಲಿದ್ದು, ಹ್ಯಾಸದೊಂದಿಗೆ ಜೀನವ ಪಾಠ ಹೇಳಲಿದ್ದಾರೆ ನಿರ್ದೇಶಕರು. ಚಿತ್ರದ ಬಹುತೇಕ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದ್ದು, ಮಡಿಕೇರಿ ಹಾಗೂ ವಿದೇಶದಲ್ಲಿ ಚಿತ್ರೀಕರಣ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT