ಸಾಯಿಕುಮಾರ್ ಮತ್ತು ಪುತ್ರ ಆದಿ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನತ್ತ ಮುಖ ಮಾಡಿದ ಸಾಯಿಕುಮಾರ್ ಪುತ್ರ 'ಆದಿ'

ಡೈಲಾಗ್ ಕಿಂಗ್ ಸಾಯಿಕುಮಾರ್ ತಮ್ಮ ಪುತ್ರ ಆದಿಯನ್ನು ಕನ್ನಡ ಸಿನಿಮಾ ಇಂಡಸ್ಟ್ರಿಗೆ ಪರಿಚಯಿಸಲು ಸಿದ್ಧತೆ ನಡೆಸಿದ್ದಾರೆ....

ಬೆಂಗಳೂರು: ಡೈಲಾಗ್ ಕಿಂಗ್ ಸಾಯಿಕುಮಾರ್ ತಮ್ಮ ಪುತ್ರ ಆದಿಯನ್ನು ಕನ್ನಡ ಸಿನಿಮಾ ಇಂಡಸ್ಟ್ರಿಗೆ ಪರಿಚಯಿಸಲು ಸಿದ್ಧತೆ ನಡೆಸಿದ್ದಾರೆ.

ತೆಲುಗಿನ ಸೂಪರ್ ಹಿಟ್ ಕಾರ್ತಿಕೇಯ ಚಿತ್ರವನ್ನು ಕನ್ನಡಕ್ಕೆ ರಿಮೇಕ್ ಮಾಡುತ್ತಿದ್ದು, ಸಾಯಿಪುತ್ರ ಆದಿಯನ್ನು ಈ ಚಿತ್ರದ ಮೂಲಕ ಕನ್ನ ಸಿನಿಮಾ ರಂಗಕ್ಕೆ ಪರಿಚಯಿಸಲು ಸಾಯಿರುಮಾರ್ ವೇದಿಕೆ ಸಿದ್ಧಪಡಿಸಿದ್ದಾರೆ.

ಆದಿ ಅಭಿನಯದ ಚೊಚ್ಚಲ ಚಿತ್ರ ‘ಪ್ರೇಮ ಕಾವಾಲಿ’ಯಲ್ಲಿನ ನಟನೆಗೆ ಪ್ರಶಸ್ತಿ ಬಂದಿತ್ತು. ಆನಂತರ ಯಶಸ್ವಿ ಚಿತ್ರಗಳ ಮೂಲಕ ಬೇಡಿಕೆ ಸೃಷ್ಟಿಸಿಕೊಂಡಿದ್ದರು. ಪುತ್ರನನ್ನು ಕನ್ನಡಕ್ಕೆ ಪರಿಚಯಿಸುತ್ತೇವೆ ಎಂದು ಸಾಯಿಕುಮಾರ್ ಅನೇಕ ಬಾರಿ ಹೇಳಿಕೊಂಡಿದ್ದರು. ಇದೀಗ ಅದು ನಿಜವಾಗುತ್ತಿದೆ.

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದ್ದು, ತೆಲುಗಿನಲ್ಲಿ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಿದ್ದರು. ಈಗ ಕನ್ನಡದಲ್ಲಿ ಆದಿ ನಾಯಕನಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಆದಿ ನಟಿಸಿದ್ದ ‘ಗರಮ್ ಇತ್ತೀಚಗಷ್ಟೇ ತೆರೆಗೆ ಬಂದಿತ್ತು.

ಸಾಯಿಕುಮಾರ್ ಮತ್ತು ಸಹೋದರರಾದ ರವಿಶಂಕರ್ ಹಾಗೂ ಮತ್ತೊಬ್ಬ ಸಹೋದರ ಅಯ್ಯಪ್ಪ ಕನ್ನಡ ಸಿನಿಮಾ ರಂಗದಲ್ಲಿ ಬೇರೂರಿದ್ದಾರೆ. ತಮ್ಮ ತಾಯಿ ಕೃಷ್ಣ ಜ್ಯೋತಿ ಕೂಡ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಹೀಗಾಗಿ ಆದಿ ಕೂಡ ಕನ್ನಡ ಸಿನಿಮಾದಲ್ಲಿ ನಟಿಸಬೇಕೆಂಬುದು ತಮ್ಮ ಬಯಕೆಯಾಗಿದೆ ಎಂದು ಸಾಯಿಕುಮಾರ್ ತಿಳಿಸಿದ್ದಾರೆ.

ಇದೇ ಮೊದಲ ಬಾರಿ ತಂದೆ ಸಾಯಿಕುಮಾರ್ ಜತೆಗೆ ತೆರೆ ಹಂಚಿಕೊಂಡಿರುವ ಅವರ ‘ಚುಟ್ಟಲಾಬ್ಬಾಯಿ’ ಚಿತ್ರ ಕೂಡ ರಿಲೀಸ್​ಗೆ ರೆಡಿಯಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT