ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ 
ಸಿನಿಮಾ ಸುದ್ದಿ

ನಾನೊಬ್ಬ ಕ್ರಿಕೆಟಿಗನಾಗಬೇಕೆಂಬುದು ನನ್ನ ತಂದೆಯ ಆಸೆಯಾಗಿತ್ತು: ಸಲ್ಮಾನ್ ಖಾನ್

ದೇಶಕ್ಕಾಗಿ ನಾನು ಕ್ರಿಕೆಟ್ ಆಡಬೇಕೆಂದು ನನ್ನ ತಂದೆ ಆಸೆ ಪಟ್ಟಿದ್ದರೆಂದು ಬಾಲಿವುಡ್ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರು ಹೇಳಿದ್ದಾರೆ...

ಮುಂಬೈ: ದೇಶಕ್ಕಾಗಿ ನಾನು ಕ್ರಿಕೆಟ್ ಆಡಬೇಕೆಂದು ನನ್ನ ತಂದೆ ಆಸೆ ಪಟ್ಟಿದ್ದರೆಂದು ಬಾಲಿವುಡ್ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರು ಹೇಳಿದ್ದಾರೆ.

ಟೆನಿಸ್ ಆಟಗಾರ್ತಿ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಆತ್ಮಕಥನ 'Ace Against Odds' ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿರುವ ಅವರು, ನನ್ನ ತಂದೆ ಸಲೀಂ ಖಾನ್ ಅವರಿಗೆ ನಾನೊಬ್ಬ ಕ್ರಿಕೆಟಿಗನಾಗಬೇಕು. ದೇಶಕ್ಕಾಗಿ ಕ್ರಿಕೆಟ್ ಆಡಬೇಕೆಂಬ ಆಸೆಯಿತ್ತು. ಅದಕ್ಕಾಗಿ ಭಾರತದ ಮಾಜಿ ಕ್ರಿಕೆಟಿಗ ಸಲೀಮ್ ದುರಾನಿ ಅವರನ್ನು ನನಗೆ ತರಬೇತುದಾರನಾಗಿ ನೇಮಕ ಮಾಡಿದ್ದರು ಎಂದು ಹೇಳಿದ್ದಾರೆ.

ಮೊದಲ ದಿನ ಕ್ರಿಕೆಟ್ ಆಡಿದ್ದನ್ನು ನೋಡಿದ್ದ ಸಲೀಮ್ ದುರಾನಿಯವರು ನೋಡಿದ್ದರು. ತುಂಬಾ ಚೆನ್ನಾಗಿ ಆಟವಾಡಿದ್ದೆ. ಎರಡನೇ ದಿನವೂ ಆಟವನ್ನು ಗಮನಿಸಿದ್ದರು. ನಂತರ ತಂದೆ ಬಳಿ ಮಾತನಾಡಿ ಕ್ರಿಕೆಟ್ ನಲ್ಲಿ ಮುಂದೆ ನನಗೆ ದೊಡ್ಡ ಭವಿಷ್ಯವಿದೆ ಎಂದು ಹೇಳಿದ್ದರು. ಮೂರನೇ ಬಾರಿ ಆಡುವಾಗ ತಂದೆ ಆಟವನ್ನು ನೋಡಲು ಬರುತ್ತಿದ್ದಾರೆಂಬುದು ನನಗೆ ತಿಳಿದಿತ್ತು. ಹೀಗಾಗಿ ಬೇಕಂತಲೇ ಕೆಟ್ಟದಾಗಿ ಆಟವಾಡಿದ್ದೆ.

ಶಾಲೆಗೆ ಹೋಗುತ್ತಿದ್ದ ವೇಳೆ ಕ್ರಿಕೆಟ್ ಅಭ್ಯಾಸಕ್ಕೆ ಬೆಳ್ಳಂಬೆಳ್ಳಗ್ಗೆ ಏಳಬೇಕಿತ್ತು. ಕಠಿಣ ಅಭ್ಯಾಸ ಮಾಡಬೇಕಿತ್ತು. ಶಾಲೆಯಲ್ಲಿ ಬೆಳಿಗ್ಗೆ 9 ಗಂಟೆಗೆ ಇರಬೇಕಿತ್ತು. ಹೀಗಾಗಿ ಬೆಳಗ್ಗೆ 8.30ರ ಸುಮಾರಿಗೆ ಏಳುತ್ತಿದ್ದೆ. ಕಷ್ಟಪಟ್ಟು ಸಮಯಕ್ಕೆ ಸರಿಯಾಗಿ ಶಾಲೆಗೆ ಹೋಗುತ್ತಿದ್ದೆ. ಇದು ನನಗೆ ತುಂಬಾ ಕಷ್ಟ ಎನಿಸತೊಡಗಿತ್ತು. ಹೀಗಾಗಿ ಕ್ರಿಕೆಟ್ ಬಗ್ಗೆ ನನಗೆ ಆಸಕ್ತಿ ಇರಲಿಲ್ಲ. ನಿಜ ಹೇಳಬೇಕೆಂದರೆ ನಾನು ನಿರ್ದೇಶಕನಾಗಬೇಕೆಂಬ ಆಸೆ ನನಗಿತ್ತು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT