ನಟ ಶರಣ್ 
ಸಿನಿಮಾ ಸುದ್ದಿ

'ನಾನುಂ ರೌಡಿ ಧಾನ್' ಕನ್ನಡ ರಿಮೇಕ್ ನಲ್ಲಿ ಶರಣ್?

ಸದ್ಯಕ್ಕೆ ಶಿವಕಾರ್ತಿಕೇಯನ್ ನಟನೆಯ 'ರಜನಿ ಮುರುಗನ್' ಸಿನೆಮಾದ ರಿಮೇಕ್ 'ರಾಜ್-ವಿಷ್ಣು' ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿರುವ ಶರಣ್ ಮತ್ತೊಂದು ತಮಿಳು ಸಿನೆಮಾ 'ನಾನುಂ ರೌಡಿ ಧಾನ್'

ಬೆಂಗಳೂರು: ಸದ್ಯಕ್ಕೆ ಶಿವಕಾರ್ತಿಕೇಯನ್ ನಟನೆಯ 'ರಜನಿ ಮುರುಗನ್' ಸಿನೆಮಾದ ರಿಮೇಕ್ 'ರಾಜ್-ವಿಷ್ಣು' ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿರುವ ಶರಣ್ ಮತ್ತೊಂದು ತಮಿಳು ಸಿನೆಮಾ 'ನಾನುಂ ರೌಡಿ ಧಾನ್' ರಿಮೇಕ್ ನಲ್ಲೂ ನಟಿಸಲಿದ್ದಾರೆ ಎಂಬ ಸುದ್ದಿ ಚಾಲ್ತಿಯಲ್ಲಿದೆ. 
ಈ ಸಿನೆಮಾದ ರಿಮೇಕ್ ಹಕ್ಕುಗಳನ್ನು ಕೊಂಡಿರುವ ನಿರ್ಮಾಣ ಸಂಸ್ಥೆ ಶರಣ್ ಅವರನ್ನು ಮುಖ್ಯಪಾತ್ರದಲ್ಲಿ ತೊಡಗಿಸಿಕೊಳ್ಳುವ ಆಸಕ್ತಿ ತೋರಿದೆ. ಅವರು ನಟನನ್ನು ಕೇಳಿಕೊಂಡಿದ್ದು ನಟ ಹಸಿರು ನಿಶಾನೆ ತೋರಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಈ ನಿರ್ಮಾಣ ಸಂಸ್ಥೆ ನಿರ್ದೇಶಕನ ಹುಡುಕಾಟದಲ್ಲಿದೆ. 
ಮೂಲ 'ನಾನುಂ ರೌಡಿ ಧಾನ್' ಸಿನೆಮಾದ ನಿರ್ದೇಶಕ ವಿಜ್ಞೇಶ್ ಶಿವಂ ಮತ್ತು ವಂಡರ್ಬಾರ್ ಬ್ಯಾನರ್ ಅಡಿ ಇದನ್ನು ನಟ-ನಿರ್ಮಾಪಕ ಧನುಶ್ ನಿರ್ಮಿಸಿದ್ದರು. ವಿಜಯ್ ಸೇತುಪತಿ ಮತ್ತು ನಯನತಾರಾ ನಟಿಸಿದ್ದ ಈ ಸಿನೆಮಾ ಅಕ್ಟೊಬರ್ 2015 ರಲ್ಲಿ ಬಿಡುಗಡೆಯಾಗಿತ್ತು.
ಇನ್ನು ಅಧಿಕೃತ ಘೋಷಣೆ ಆಗಬೇಕಿರುವುದರಿಂದ 'ರಾಜ್-ವಿಷ್ಣು' ನಂತರ ಶರಣ್ ಅವರ ಮುಂದಿನ ಚಿತ್ರ ಇದಾಗಲಿದೆಯೇ ಎಂಬುದನ್ನು ಕಾಡು ನೋಡಬೇಕಿದೆ. 
ಈಮಧ್ಯೆ ಶರಣ್ ಮತ್ತು ಮಯೂರಿ ನಟನೆಯ 'ನಟರಾಜ ಸರ್ವಿಸ್' ಸಿನೆಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ ನಟ. ಪುನೀತ್ ರಾಜಕುಮಾರ್ ಅರ್ಪಿಸಿ, ಎನ್ ಎಸ್ ರಾಜಕುಮಾರ್ ನಿರ್ಮಿಸಿರುವ ಈ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶಿಸಿದ್ದಾರೆ. ಸಿನೆಮಾ ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT