ನಟ ಶರಣ್ 
ಸಿನಿಮಾ ಸುದ್ದಿ

'ನಾನುಂ ರೌಡಿ ಧಾನ್' ಕನ್ನಡ ರಿಮೇಕ್ ನಲ್ಲಿ ಶರಣ್?

ಸದ್ಯಕ್ಕೆ ಶಿವಕಾರ್ತಿಕೇಯನ್ ನಟನೆಯ 'ರಜನಿ ಮುರುಗನ್' ಸಿನೆಮಾದ ರಿಮೇಕ್ 'ರಾಜ್-ವಿಷ್ಣು' ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿರುವ ಶರಣ್ ಮತ್ತೊಂದು ತಮಿಳು ಸಿನೆಮಾ 'ನಾನುಂ ರೌಡಿ ಧಾನ್'

ಬೆಂಗಳೂರು: ಸದ್ಯಕ್ಕೆ ಶಿವಕಾರ್ತಿಕೇಯನ್ ನಟನೆಯ 'ರಜನಿ ಮುರುಗನ್' ಸಿನೆಮಾದ ರಿಮೇಕ್ 'ರಾಜ್-ವಿಷ್ಣು' ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿರುವ ಶರಣ್ ಮತ್ತೊಂದು ತಮಿಳು ಸಿನೆಮಾ 'ನಾನುಂ ರೌಡಿ ಧಾನ್' ರಿಮೇಕ್ ನಲ್ಲೂ ನಟಿಸಲಿದ್ದಾರೆ ಎಂಬ ಸುದ್ದಿ ಚಾಲ್ತಿಯಲ್ಲಿದೆ. 
ಈ ಸಿನೆಮಾದ ರಿಮೇಕ್ ಹಕ್ಕುಗಳನ್ನು ಕೊಂಡಿರುವ ನಿರ್ಮಾಣ ಸಂಸ್ಥೆ ಶರಣ್ ಅವರನ್ನು ಮುಖ್ಯಪಾತ್ರದಲ್ಲಿ ತೊಡಗಿಸಿಕೊಳ್ಳುವ ಆಸಕ್ತಿ ತೋರಿದೆ. ಅವರು ನಟನನ್ನು ಕೇಳಿಕೊಂಡಿದ್ದು ನಟ ಹಸಿರು ನಿಶಾನೆ ತೋರಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಈ ನಿರ್ಮಾಣ ಸಂಸ್ಥೆ ನಿರ್ದೇಶಕನ ಹುಡುಕಾಟದಲ್ಲಿದೆ. 
ಮೂಲ 'ನಾನುಂ ರೌಡಿ ಧಾನ್' ಸಿನೆಮಾದ ನಿರ್ದೇಶಕ ವಿಜ್ಞೇಶ್ ಶಿವಂ ಮತ್ತು ವಂಡರ್ಬಾರ್ ಬ್ಯಾನರ್ ಅಡಿ ಇದನ್ನು ನಟ-ನಿರ್ಮಾಪಕ ಧನುಶ್ ನಿರ್ಮಿಸಿದ್ದರು. ವಿಜಯ್ ಸೇತುಪತಿ ಮತ್ತು ನಯನತಾರಾ ನಟಿಸಿದ್ದ ಈ ಸಿನೆಮಾ ಅಕ್ಟೊಬರ್ 2015 ರಲ್ಲಿ ಬಿಡುಗಡೆಯಾಗಿತ್ತು.
ಇನ್ನು ಅಧಿಕೃತ ಘೋಷಣೆ ಆಗಬೇಕಿರುವುದರಿಂದ 'ರಾಜ್-ವಿಷ್ಣು' ನಂತರ ಶರಣ್ ಅವರ ಮುಂದಿನ ಚಿತ್ರ ಇದಾಗಲಿದೆಯೇ ಎಂಬುದನ್ನು ಕಾಡು ನೋಡಬೇಕಿದೆ. 
ಈಮಧ್ಯೆ ಶರಣ್ ಮತ್ತು ಮಯೂರಿ ನಟನೆಯ 'ನಟರಾಜ ಸರ್ವಿಸ್' ಸಿನೆಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ ನಟ. ಪುನೀತ್ ರಾಜಕುಮಾರ್ ಅರ್ಪಿಸಿ, ಎನ್ ಎಸ್ ರಾಜಕುಮಾರ್ ನಿರ್ಮಿಸಿರುವ ಈ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶಿಸಿದ್ದಾರೆ. ಸಿನೆಮಾ ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT