ಕಬಾಲಿ 
ಸಿನಿಮಾ ಸುದ್ದಿ

ದಲಿತ ಚಿತ್ರ ನಿರ್ದೇಶಕ ಎಂದು ಗುರುತಿಸಿಕೊಳ್ಳಲು ಇಷ್ಟಪಡುವುದಿಲ್ಲ: ಕಬಾಲಿ ನಿರ್ದೇಶಕ

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಬಾಲಿ ಚಿತ್ರ ನಿರ್ದೇಶಕ ಪಿಎ ರಂಜಿತ್, ದಲಿತ ಚಿತ್ರ ನಿರ್ದೇಶಕ ಎಂದು ಗುರುತಿಸಿಕೊಳ್ಳಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಬಾಲಿ ಚಿತ್ರ ನಿರ್ದೇಶಕ ಪಿಎ ರಂಜಿತ್, ದಲಿತ ಚಿತ್ರ ನಿರ್ದೇಶಕ ಎಂದು ಗುರುತಿಸಿಕೊಳ್ಳಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.

ತಾವು ಸಹ ಜಾತಿ ಪದ್ಧತಿಯಿಂದ ನೊಂದಿರುವ ಕಾರಣ ತಮ್ಮ ಚಿತ್ರಗಳಲ್ಲಿ ಜಾತಿ ಪದ್ಧತಿಯ ಸಮಸ್ಯೆಗಳನ್ನು ತೋರಿಸುತ್ತೇನೆ ಎಂದು ಆದರೆ ನಾನು ದಲಿತ ಚಿತ್ರ ನಿರ್ದೇಶಕ ಎಂದು ಬ್ರಾಂಡ್ ಆಗುವುದಕ್ಕೆ ಇಚ್ಛಿಸುವುದಿಲ್ಲ ಎಂದು ಪಿಎ ರಂಜಿತ್ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ನಾನು ದಲಿತ ಸಮುದಾಯಕ್ಕೆ ಸೇರಿದೆ ಇದಿದ್ದರೂ ಸಹ ಚಿತ್ರಗಳಲ್ಲಿ ಜಾತಿ ಪದ್ಧತಿಯ ಸಮಸ್ಯೆಗಳನ್ನು ತೋರಿಸುವುದನ್ನು ಮುಂದುವರೆಸುತ್ತಿದ್ದೆ ಎಂದು ರಂಜಿತ್ ತಿಳಿಸಿದ್ದಾರೆ.

ಕಬಾಲಿ ಚಿತ್ರದಲ್ಲಿ ರಜನಿಕಾಂತ್ ನಿರ್ವಹಿಸಿರುವ ಪಾತ್ರದ ವ್ಯಕ್ತಿ ತೆಲಂಗಾಣದ ದಲಿತರ ಸಮಸ್ಯೆಗಳನ್ನು ತೆರೆದಿಟ್ಟಿರುವ ಸತ್ಯನಾರಾಯಣ ಅವರ ಮೈ ಫಾದರ್ ಬಾಲಯ್ಯ ಎಂಬ ಪುಸ್ತಕವನ್ನು ಓದಿರುತ್ತಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಂಜಿತ್  ಪ್ರತಿಯೊಬ್ಬ ಸಿನಿಮಾ ನಿರ್ದೇಶಕನೂ ಸಮಾಜದ ಅಸಮಾನತೆ ಬಗ್ಗೆ ಮಾತನಾಡಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT