ಎಸ್ ಶರತ್ 
ಸಿನಿಮಾ ಸುದ್ದಿ

ಹೊಸ ಹೀರೋ ಬಂದ ದಾರಿ ಬಿಡಿ; ಇಮ್ರಾನ್ ನಿರ್ದೇಶನದಲ್ಲಿ ಶರತ್

ಹೊಸ ಪ್ರತಿಭೆಗಳನ್ನು ಹುಡುಕಿ ರೂಪಿಸುವುದು ನೃತ್ಯ ನಿರ್ದೇಶಕ- ನಿರ್ದೇಶಕ ಇಮ್ರಾನ್ ಸರ್ದಾರಿಯಾ ಅವರಿಗೆ ನೆಚ್ಚಿನ ಕೆಲಸ. ಅವರ ನೃತ್ಯ ತಂಡದಲ್ಲಿದ್ದ ಕಿರಿಯ ಕಲಾವಿದೆ ಶೃತಿ ಹರಿಹರನ್

ಬೆಂಗಳೂರು: ಹೊಸ ಪ್ರತಿಭೆಗಳನ್ನು ಹುಡುಕಿ ರೂಪಿಸುವುದು ನೃತ್ಯ ನಿರ್ದೇಶಕ- ನಿರ್ದೇಶಕ ಇಮ್ರಾನ್ ಸರ್ದಾರಿಯಾ ಅವರಿಗೆ ನೆಚ್ಚಿನ ಕೆಲಸ. ಅವರ ನೃತ್ಯ ತಂಡದಲ್ಲಿದ್ದ ಕಿರಿಯ ಕಲಾವಿದೆ ಶೃತಿ ಹರಿಹರನ್ ಇಂದು ಜನಪ್ರಿಯ ನಟಿ. ಈಗ ಅವರದ್ದೇ ನೃತ್ಯ ತಂಡದ ಎಸ್ ಶರತ್ ಅವರ ಸರದಿ. 
ಎಂಟು ವರ್ಷಗಳಿಂದ ನೃತ್ಯ ತರಬೇತುದಾರನಾಗಿರುವ 26 ವರ್ಷದ ನಟ ಶರತ್ ಈಗ ಇಮ್ರಾನ್ ಅವರ ಎರಡನೇ ಚಿತ್ರ 'ಉಪ್ಪು ಹುಳಿ ಖಾರ' ಸಿನೆಮಾದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಲಿದ್ದಾರೆ. ಇವರು ಸಿನೆಮಾದಲ್ಲಿ ಅನುಶ್ರೀ ಎದುರು ನಟಿಸಲಿದ್ದು, ಧನು ಮತ್ತು ಶಶಿ ಜೊತೆಗೆ ಪ್ರಧಾನ ಪಾತ್ರದಲ್ಲಿರಲಿದ್ದಾರೆ. ಈ ಚಿತ್ರದಲ್ಲಿ ಹಿರಿಯ ನಟಿ ಮಾಲಾಶ್ರೀ ಕೂಡ ನಟಿಸುತ್ತಿರುವುದು ವಿಶೇಷ. 
ಈ ಹಿಂದೆ ಶರತ್ ರಿಯಾಲಿಟಿ ಕಾರ್ಯಕ್ರಮ 'ಲೈಫು ಸೂಪರ್ ಗುರು'ವಿನಲ್ಲಿ ವಿಜೇತರಾಗಿದ್ದರು. ಹಾಗೆಯೇ ಒಂದು ರಿಯಾಲಿಟಿ ಕಾರ್ಯಕ್ರಮದ ನಿರೂಪಕರಾಗಿಯೂ ಅನುಭವ ಪಡೆದಿದ್ದರು. "ನನಗೆ ಧಾರಾವಾಹಿಗಳ ಮತ್ತು ಸಿನೆಮಾಗಳ ಅವಕಾಶ ಬಂದಿದ್ದರು, ಈಗ ಮಾಸ್ಟರ್ (ಇಮ್ರಾನ್) ಅವರ ಸಿನೆಮಾದಲ್ಲಿ ನಟಿಸಲು ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ" ಎಂದಿದ್ದಾರೆ ಶರತ್. 
ನಿಮ್ಮನ್ನು ಆಯ್ಕೆ ಮಾಡಲು ಕಾರಣವೇನು ಎಂಬ ಪ್ರಶ್ನೆಗೆ "ನನ್ನ ಶ್ರಮ ಮತ್ತು ಶಿಸ್ತನ್ನು ಅವರು ನೋಡಿದ್ದಾರೆ. ನಟನಾಗುವ ಆಸೆಯಿರುವವರಿಗೆ ಯಾವತ್ತೂ 'ಶಾಂತಿಯಿಂದ ಕಾಯುವುದೇ' ಮಂತ್ರ ಎಂದು ಮಾಸ್ಟರ್ ನನಗೆ ಹೇಳಿದ್ದರು. ಅವರ ಸೂಚನೆಗಳನ್ನು ಶಿರಸಾವಹಿಸಿ ಪಾಲಿಸಿದ್ದೇನೆ. ಈಗ ನನ್ನ ಶ್ರಮ ಫಲ ನೀಡಿದ್ದು ಮಾಸ್ಟರ್ ಅವರೇ ಅವರ ಸಿನೆಮಾದಲ್ಲಿ ನನಗೆ ಸ್ಥಾನ ನೀಡಿದ್ದಾರೆ" ಎನ್ನುತ್ತಾರೆ. 
ನೃತ್ಯದ ಬಗ್ಗೆ ತಮಗಿರುವ ತೀವ್ರಾಸಕ್ತಿ ಹಾಗೆಯೇ ಉಳಿಯುವುದಾಗಿ ತಿಳಿಸುವ ಶರತ್ "ನನ್ನ ನೃತ್ಯ ಕೌಶಲ್ಯದಿಂದಲೇ ನಾನು ನಟನಾಗಿರುವುದು. ನಾನು ನೃತ್ಯ ತರಬೇತಿ ನೀಡುವುದನ್ನು ಮುಂದುವರೆಸುತ್ತೇನೆ. ನನ್ನ ಕೌಶಲ್ಯ ಪ್ರದರ್ಶಿಸಲು ನಟನೆ ಮತ್ತೊಂದು ಅವಕಾಶ" ಎನ್ನುತ್ತಾರಷ್ಟೇ ಶರತ್. 
ನಟ ಪ್ರೇಮ್, ನಟಿ ಮಾನ್ವಿತಾ ಹರೀಶ್ ಅವರಿಗೆ ವೈಯಕ್ತಿಕವಾಗಿ ನೃತ್ಯ ತರಬೇತಿ ನೀಡಿರುವ ಶರತ್ "ಸದ್ಯಕ್ಕೆ ನನ್ನ ಚೊಚ್ಚಲ ಚಿತ್ರದಲ್ಲಿ 200% ಅರ್ಪಿಸಿಕೊಳ್ಳಲಿದ್ದೇನೆ. ಉಪ್ಪು ಹುಳಿ ಖಾರದ ಬಗ್ಗೆ ಅಷ್ಟೇ ಹೇಳಲು ಇರುವುದು" ಎನ್ನುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT