ನಿರ್ದೇಶಕ ಪವನ್ ಒಡೆಯರ್ 
ಸಿನಿಮಾ ಸುದ್ದಿ

'ಬಪ್ಪರ' ಅಥವಾ ದೀರ್ಘ ವಿರಾಮ: ಪವನ್ ಒಡೆಯರ್

'ನಟರಾಜ ಸರ್ವಿಸ್' ಸಿನೆಮಾದ ಚಿತ್ರೀಕರಣ ಮುಗಿಸಿರುವ ನಿರ್ದೇಶಕ ಪವನ್ ಒಡೆಯರ್ ಡಬ್ಬಿಂಗ್ ಮತ್ತಿತರ ಚಿತ್ರೀಕರಣ ನಂತರದ ಕಾರ್ಯಗಳಲ್ಲಿ ನಿರತರಾಗಿದ್ದಾರೆ.

ಬೆಂಗಳೂರು: 'ನಟರಾಜ ಸರ್ವಿಸ್' ಸಿನೆಮಾದ ಚಿತ್ರೀಕರಣ ಮುಗಿಸಿರುವ ನಿರ್ದೇಶಕ ಪವನ್ ಒಡೆಯರ್ ಡಬ್ಬಿಂಗ್ ಮತ್ತಿತರ ಚಿತ್ರೀಕರಣ ನಂತರದ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಶರಣ್ ಮತ್ತು ಮಯೂರಿ ನಟಿಸಿರುವ ಈ ಸಿನೆಮಾವನ್ನು ಜುಲೈನಲ್ಲಿ ಬಿಡುಗಡೆ ಮಾಡುವ ಇರಾದೆಯಲ್ಲಿರುವ ಪವನ್ "ಜೂನ್ ಅಂತ್ಯಕ್ಕೆ ವಿಶಿಷ್ಟವಾದ ಆಡಿಯೋ ಬಿಡುಗಡೆ ಹಮ್ಮಿಕೊಂಡು ಜುಲೈ ನಲ್ಲಿ ಸಿನೆಮಾ ಬಿಡುಗಡೆ ಮಾಡುವ ಯೋಜನೆಯಿದೆ" ಎನ್ನುತ್ತಾರೆ.

ಅಲ್ಲದೆ ರಮೇಶ್ ಅರವಿಂದ್ ಅವರ ೧೦೦ನೇ ಕನ್ನಡ ಚಿತ್ರ 'ಪುಷ್ಪಕ ವಿಮಾನ' ಸಿನೆಮಾಗೂ ಒಂದಷ್ಟು ಸಮಯವನ್ನು ಹೊಂದಿಸಿಕೊಳ್ಳಲಿರುವ ಪವನ್ "'ಪುಷ್ಪಕ ವಿಮಾನ' ನಿರ್ಮಾಣದಲ್ಲಿ ವಿಕ್ಯಾತ್ ಪಿಕ್ಚರ್ಸ್ ಜೊತೆಗೆ ಒಡೆಯರ್ ಫಿಲ್ಮ್ ಫ್ಯಾಕ್ಟರಿ ಕೂಡ ಭಾಗವಾಗಿದೆ. ಇದು ರಮೇಶ್ ಅವರ ೧೦೦ನೇ ಚಿತ್ರವಾಗಿರುವುದರಿಂದ ಈ ಚಿತ್ರದ ಪ್ರಚಾರ ಸರಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕಿದೆ" ಎನ್ನುತಾರೆ.

ಅವರ ಮುಂದಿನ ಯೋಜನೆ ಬಗ್ಗೆ ಹೇಳುವ ಪವನ್ "ಪುನೀತ್ ರಾಜಕುಮಾರ್ ಅವರ ಜೊತೆಗೆ 'ಬಪ್ಪರ' ಮಾಡುತ್ತೇನೆ ಅಥವಾ ದೀರ್ಘ ವಿರಾಮ ಎನ್ನುತ್ತಾರೆ. 'ಬಪ್ಪರ' ಸ್ಕ್ರಿಪ್ಟ್ ಮೇಲೆ ಕೆಲಸ ನಡೆಯುತ್ತಿದೆ. ಪುನೀತ್ ಅವರು ಸದ್ಯದ ಸಿನೆಮಾಗಳನ್ನು ಮುಗಿಸುವವರೆಗೂ ನಾನು ಕಾಯಬೇಕು. ಅವರು ಯಾವಾಗ ಪ್ರಾರಂಭಿಸಬೇಕು ಎಂಬುದನ್ನು ನಟನ ಜೊತೆ ಇನ್ನೂ ಚರ್ಚಿಸಬೇಕಿದೆ. ನನ್ನ ತಿಳುವಳಿಕೆ ಪ್ರಕಾರ ಅವರ 'ರಾಜಕುಮಾರ' ಸಿನೆಮಾದ ನಂತರ ಇದು ಸಾಧ್ಯ" ಎನ್ನುತ್ತಾರೆ.

"ಪುನೀತ್ ಜೊತೆಗೆ ನನ್ನ ಈ ಯೋಜನೆ ತಡವಾದರೆ ಅಲ್ಲಿಯವರೆಗೂ ಕಾಯುತ್ತೇನೆ. ನಾಲ್ಕು ವರ್ಷಗಳಲ್ಲಿ ೬ ಸಿನೆಮಾಗಳನ್ನು ಮಾಡಿದ್ದೇನೆ. ಈಗ ಏನು ಮಾಡಬೇಕೆಂಬ ಸ್ಪಷ್ಟತೆಯಿದೆ. ನಡುವ ಬೇರೆ ಯೋಜನೆ ಕೈಗೆತ್ತಿಕೊಳ್ಳುವ ಪ್ರಶ್ನೆಯೇ ಇಲ್ಲ" ಎನ್ನುತ್ತಾರೆ ನಿರ್ದೇಶಕ ಪವನ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ; 26 ತಿಂಗಳ ಅರಿಯರ್ಸ್; ವೇತನ ಪರಿಷ್ಕರಣೆಗೆ ಒಪ್ಪಿಗೆ; ರದ್ದಾಗುತ್ತಾ ಮುಷ್ಕರ?

T20 World Cup 2026: ನೆದರ್ಲೆಂಡ್ ವಿರುದ್ಧ 17 ರನ್ ಗಳಿಂದ ಗೆದ್ದು, ಟಿ-20 ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ!

ಬಾಂಗ್ಲಾ ಪ್ರಧಾನಿಯಾದ ಬೆನ್ನಲ್ಲೇ ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾದ Tarique Rahman; ಆಯ್ಕೆ ಮಾಡಿದ ಜನರಿಂದಲೇ ಅವಮಾನ, ಆರೋಪ?

ಪಂಜಾಬ್: ಬಟಿಂಡಾದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ, ಅಶ್ರುವಾಯು ಪ್ರಯೋಗ!

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Video

SCROLL FOR NEXT