ಕೋಟಿಗೊಬ್ಬ-೨ ಚಿತ್ರೀಕರಣದ ವೇಳೆ ಸುದೀಪ್ ಜೊತೆಗೆ ಇಮ್ರಾನ್ ಸರ್ದಾರಿಯಾ 
ಸಿನಿಮಾ ಸುದ್ದಿ

'ಮೆಶಿನ್' ಮೂಲಕ ಬಾಲಿವುಡ್ ಪಾದಾರ್ಪಣೆ ಮಾಡಲಿರುವ ಇಮ್ರಾನ್ ಸರ್ದಾರಿಯಾ

ನೃತ್ಯ ನಿರ್ದೇಶಕ-ಚಲನಚಿತ್ರ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಈಗ ಬಾಲಿವುಡ್ ಗೂ ಹೆಜ್ಜೆ ಇಡಲಿದ್ದಾರೆ. ಅಬ್ಬಾಸ್-ಮುಸ್ತಾನ್ ನಿರ್ದೇಶನದ ರೊಮ್ಯಾಂಟಿಕ್ ಥ್ರಿಲ್ಲರ್ 'ಮೆಶಿನ್'ಗೆ ನೃತ್ಯ ನಿರ್ದೇಶನ ಮಾಡುವ

ಬೆಂಗಳೂರು: ನೃತ್ಯ ನಿರ್ದೇಶಕ-ಚಲನಚಿತ್ರ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಈಗ ಬಾಲಿವುಡ್ ಗೂ ಹೆಜ್ಜೆ ಇಡಲಿದ್ದಾರೆ. ಅಬ್ಬಾಸ್-ಮುಸ್ತಾನ್ ನಿರ್ದೇಶನದ ರೊಮ್ಯಾಂಟಿಕ್ ಥ್ರಿಲ್ಲರ್ 'ಮೆಶಿನ್'ಗೆ ನೃತ್ಯ ನಿರ್ದೇಶನ ಮಾಡುವ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಲಿದ್ದಾರೆ. ಇಲ್ಲಿನವರೇ ಆದ ರವಿವರ್ಮಾ ಆ ಸಿನೆಮಾಗೆ ಸ್ಟಂಟ್ ಮಾಸ್ಟರ್.

ತಮ್ಮ ಚೊಚ್ಚಲ ನಿರ್ದೇಶನದ 'ಎಂದೆಂದಿಗೂ' ಸಿನೆಮಾದಲ್ಲಿನ ಹಾಡುಗಳು ಗಮನ ಸೆಳೆದು ಈ ಸಿನೆಮಾಗೆ ಆಯ್ಕೆಯಾಗಿರುವುದಾಗಿ ತಿಳಿಸುವ ಇಮ್ರಾನ್ "ಅವರು 'ಮೈನಾ'ದ ಶೀರ್ಷಿಕೆ ಹಾಡು, 'ಜಾಕಿ'ಯಲ್ಲಿ ನಾನು ಒದಗಿಸಿದ ಪರಿಚಯ ಹಾಡು, 'ಮಾಣಿಕ್ಯದ 'ಜಿನ ಜಿನ' ಮತ್ತು 'ಮಾಸ್ಟರ್ ಪೀಸ್'ನ ಎರಡು ಹಾಡುಗಳು ಅವರಿಗೆ ಇಷ್ಟವಾದವು" ಎನ್ನುತ್ತಾರೆ.

ಬಾಲಿವುಡ್ ನಲ್ಲಿ ಸದಾ ಬದಲಾವಣೆಯನ್ನು ಎದುರು ನೋಡುವ ಈ ಜೋಡಿಯ ಅವಶ್ಯಕತೆಗೆ ತಕ್ಕಂತೆ ಕೆಲಸ ಮಾಡಿದ್ದೇನೆ ಎನ್ನುವ ಅವರು "ಹಾಡುಗಳಿಗೆ ನೃತನಿರ್ದೇಶಿಸಲು ೪೫ ದಿನ ತೆಗೆದುಕೊಂಡೆ, ಮೊದಲ ಎರಡು ಹಾಡುಗಳು ಬಥೂಮಿ ಮತ್ತು ಜಾರ್ಜಿಯಾದಲ್ಲಿ ಚಿತ್ರೀಕರಣಗೊಂಡಿವೆ. ಈ ತಿಂಗಳ ಕೊನೆಯಲ್ಲಿ ಇನ್ನೆರಡು ರೊಮ್ಯಾಂಟಿಕ್ ಹಾಡುಗಳ ಚಿತ್ರೀಕರಣ ನಡೆಯಲಿದೆ" ಎಂದು ಇಮ್ರಾನ್ ಹೇಳುತ್ತಾರೆ.

'ಕಿಲಾಡಿ' ದಿನಗಳಿಂದಲೂ ಈ ನಿರ್ದೇಶಕ ಜೋಡಿಯ ದೊಡ್ಡ ಅಭಿಮಾನಿ ಎಂದು ಹೇಳುವ ಇಮ್ರಾನ್ "ಅವರ ಕೆಲಸದ ಬಗ್ಗೆ ನನಗೆ ಎಂದೂ ಒಲವಿತ್ತು ಈಗ ಅವರೊಂದಿಗೆ ಕೆಲಸ ಮಾಡಲು ಸಿಕ್ಕಿರುವ ಅವಕಾಶ ಕನಸು ನನಸಾದಂತೆ" ಎನ್ನುತ್ತಾರೆ. ಈ ಸಿನೆಮಾದ ಮೂಲಕ ಅಬ್ಬಾಸ್ ಅವರು ತಮ್ಮ ಪುತ್ರ 'ಮುಸ್ತಫಾ' ಅವರನ್ನು ಪರಿಚಯಿಸುತ್ತಿದ್ದು, ಕೈರಾ ಅದ್ವಾನಿ ನಾಯಕ ನಟಿ.

ಬಾಲಿವುಡ್ ಪಾದಾರ್ಪಣೆ ತಮ್ಮ ವೃತ್ತಿಜೀವನದಲ್ಲಿ ಮಹತ್ವದ ತಿರುವು ನೀಡಲಿದೆ ಎಂದು ನಂಬುವ ಅವರು ಸುದೀಪ್ ಅವರ ದ್ವಿಭಾಷಾ ಚಲನಚಿತ್ರ 'ಕೋಟಿಗೊಬ್ಬ-೨' ಸಿನೆಮಾದ ಪರಿಚಯ ಹಾಡಿಗೂ ನೃತ್ಯ ನಿರ್ದೇಶನ ಮಾಡಿರುವುದಕ್ಕೆ ಉತ್ಸುಕರಾಗಿದ್ದಾರೆ. "ಈ ವರ್ಷ ನನಗೆ ಒಳ್ಳೆಯ ಯೋಜನೆಗಳು ಸಿಕ್ಕಿವೆ" ಎನ್ನುತ್ತಾರೆ.

ಜೊತೆಗೆ 'ಉಪ್ಪು ಹುಳಿ ಖಾರ' ಸಿನೆಮಾದ ನಿರ್ದೇಶನದಲ್ಲಿ ಎರಡನೆ ಹಂತದ ಚಿತ್ರೀಕರಣ ನಾಳೆಯಿಂದ ಪ್ರಾರಂಭಿಸಲಿದ್ದಾರಂತೆ. "ಮುಂದಿನ ೧೫ ದಿನಗಳಿಗೆ ನಟಿ ಮಾಲಾಶ್ರೀ ಅವರು ಸೆಟ್ ಸೇರಿಕೊಳ್ಳಲಿದ್ದಾರೆ. ರವಿವರ್ಮಾ ಅವರ ದಿನಾಂಕಗಳಿಗೆ ಕಾಯುತ್ತಿದ್ದೇವೆ" ಎನ್ನುತ್ತಾರೆ ಇಮ್ರಾನ್. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT