ವಿನಯ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಸ್ವಚ್ಚ ಬೆಂಗಳೂರು ಅಭಿಯಾನಕ್ಕೆ ಕೈ ಜೋಡಿಸಿದ ರಾಜ್ ಕುಮಾರ್ ಕುಟುಂಬ

ಯೂಟರ್ನ್ ಚಿತ್ರ ತಂಡ ಮೇಲ್ಸೇತುವೆ ರಸ್ತೆ ರಿಪೇರಿ ಮಾಡಿದ ಬೆನ್ನಲ್ಲೇ ರನ್ ಆಂಟನಿ ತಂಡ ಬೆಂಗಳೂರಿನ ರಸ್ತೆಗಳ ಕಸ ವನ್ನು ಸ್ವಚ್ಚಗೊಳಿಸಲು ಮುಂದಾಗಿವೆ....

ಬೆಂಗಳೂರು: ಯೂಟರ್ನ್ ಚಿತ್ರ ತಂಡ ಮೇಲ್ಸೇತುವೆ ರಸ್ತೆ ರಿಪೇರಿ ಮಾಡಿದ ಬೆನ್ನಲ್ಲೇ ರನ್ ಆಂಟನಿ ತಂಡ ಬೆಂಗಳೂರಿನ ರಸ್ತೆಗಳ ಕಸ ವನ್ನು ಸ್ವಚ್ಚಗೊಳಿಸಲು ಮುಂದಾಗಿವೆ.

ಎನ್ ಜಿ ಒ ಸಂಸ್ಥೆ ಜೊತೆಗೂಡಿ, ರನ್ ಆಂಟನಿ ನಟ ಹಾಗೂ ಡಾ. ರಾಜ್ ಕುಮಾರ್ ಅವರ ಮೊಮ್ಮಗ ವಿನಯ್ ರಾಜ್ ಕುಮಾರ್ ಬೀ ಕ್ಲೀನ್ ಕೋ ಗ್ರೀನ್ ಎಂಬ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಏಪ್ರಿಲ್ 24 ರಂದು ಡಾ. ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಾಘವೇಂದ್ರ ರಾಜ್ ಕುಮಾರ್ ಮತ್ತೊಬ್ಬ ಪುತ್ರ ಗುರು ರಾಜ್ ಕುಮಾರ್ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ರಾಘವೇಂದ್ರ ರಾಜ್ ಕುಮಾರ್ ಮಂಗಳ ರಾಘವೇಂದ್ರ, ವಿನಯ್ ರಾಜ್ ಕುಮಾರ್,  ನಂದಿನಿ ಲೇಔಟ್ ನಲ್ಲಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರತಿ ವಾರಕ್ಕೊಮ್ಮೆ ಅಥವಾ 15 ದಿನಗಳಿಗೊಮ್ಮೆ ಸ್ವಚ್ಛತಾ ಕಾರ್ಯ ಕೈಗೊಳ್ಳುತ್ತೇವೆ ಎಂದು ನಟ ವಿನಯ್ ರಾಜ್ ಕುಮಾರ್ ತಿಳಿಸಿದ್ದಾರೆ. ಜೊತೆಗೆ ರಸ್ತೆಗಳನ್ನು ಸ್ವಚ್ಛಗೊಳಿಸಿ,  ಗೋಡೆಗಳ ಮೇಲೆ ಪೈಂಟ್ ಮಾಡಿಸಿ ಗಿಡಗಳನ್ನು ನೆಟ್ಟಿರುವುದಾಗಿ ಅವರು ತಿಳಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್, ಯಶವಂತಪುರ ಮತ್ತು ಬಸವೇಶ್ವರ ನಗರಗಳಲ್ಲಿ ಸ್ವಚ್ಛತೆ ಕಾರ್ಯಕ್ರಮ ಕೈಗೊಂಡಿರುವ ರನ್ ಆಂಟನಿ ತಂಡ, ಚಿತ್ರ ಬಿಡುಗಡೆಯಾದ ನಂತರ ಸ್ವಚ್ಚತೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT