'ಜಗ್ಗು ದಾದ' ಸಿನೆಮಾದಲ್ಲಿ ನಟ ದರ್ಶನ್ 
ಸಿನಿಮಾ ಸುದ್ದಿ

ಮೂರು ದಿನಗಳಲ್ಲಿ 'ಜಗ್ಗುದಾದ' ಗಳಿಸಿದ್ದು ರೂ.12.60 ಕೋಟಿ!

ಪ್ರೇಕ್ಷಕ ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿರುವ ದರ್ಶನ್ ಅಭಿನಯದ 'ಜಗ್ಗು ದಾದಾ' ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಮಾತ್ರ ಒಳ್ಳೆಯ ಪ್ರತಿಕ್ರಿಯೆ ಪಡೆದಿದೆ ಎನ್ನುತ್ತಾರೆ

ಬೆಂಗಳೂರು: ಪ್ರೇಕ್ಷಕ ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿರುವ ದರ್ಶನ್ ಅಭಿನಯದ 'ಜಗ್ಗು ದಾದಾ' ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಮಾತ್ರ ಒಳ್ಳೆಯ ಪ್ರತಿಕ್ರಿಯೆ ಪಡೆದಿದೆ ಎನ್ನುತ್ತಾರೆ ನಿರ್ಮಾಪಕ ಮತ್ತು ನಿರ್ದೇಶಕ ರಾಘವೇಂದ್ರ ಹೆಗಡೆ.

ರಾಘವೇಂದ್ರ ಹೆಗಡೆ ಹೇಳುವ ಪ್ರಕಾರ 'ಜಗ್ಗು ದಾದ'ನ ಶುಕ್ರವಾರ, ಶನಿವಾರ ಮತ್ತು ಭಾನುವಾರದ ಗಳಿಕೆ ೧೨.೬೦ ಕೋಟಿ ಇದ್ದು, ಚೊಚ್ಚಲ ನಿರ್ದೇಶಕ ಮೊದಲ ಸಿನೆಮಾದಲ್ಲಿ ದೊಡ್ಡದನ್ನು ಸಾಧಿಸಿರುವ ಹೆಮ್ಮೆ.

"ನನ್ನ ಚೊಚ್ಚಲ ನಿರ್ದೇಶನದ ಚಿತ್ರದಲ್ಲಿ ನಾನು ಕಲಿತಿದ್ದೇನೆಂದರೆ, ಸಿನೆಮಾದ ಹಣೆಬರಹ ಪ್ರೇಕ್ಷಕನ ಕೈನಲ್ಲಿದೆ. ಅವರಿಗೆ ಇಂದು ತುಂಬು ಹೃದಯದ ಧನ್ಯವಾದ ಹೇಳಿತ್ತೇನೆ. ನನ್ನ ಮೊದಲ ಸಿನೆಮಾದಲ್ಲಿ ಸಿಕ್ಕಿರುವ ಅನುಭವ ನನ್ನ ವೃತ್ತಿಜೀವನದಲ್ಲಿ ಇನ್ನೂ ಸಾಧಿಸಲು ಅನುವಾಗುತ್ತದೆ" ಎನ್ನುತ್ತಾರೆ ರಾಘವೇಂದ್ರ.

"ಕರ್ನಾಟಕದಲ್ಲಿ ಬಿಡುಗಡೆಯಾದ ಕಡೆಯಲ್ಲೆಲ್ಲಾ ಚಿತ್ರಮಂದಿರ ತುಂಬಿದೆ ಎಂಬ ಹಲಗೆ ನೋಡುವುದಕ್ಕೆ ಸಂತಸವಾಗುತ್ತದೆ. ದರ್ಶನ್ ಮತ್ತು ತಂಡದವರು ಇರದೇ ಹೋದರೆ ಇದು ಸಾಧ್ಯವಾಗುತ್ತಿರಲಿಲ್ಲ. 'ಜಗ್ಗು ದಾದ' ಯಶಸ್ಸಿಗೆ ಪ್ರಾಮಾಣಿಕತೆ ಮತ್ತು ಕಷ್ಟ ಪಟ್ಟು ದುಡಿದದ್ದೇ ಕಾರಣ ಎಂದು ರವಿ ಶಂಕರ್ ಹೇಳಿದ್ದಕ್ಕೆ ನನಗೆ ಖುಷಿಯಾಗುತ್ತಿದೆ. ನಾನು ಇನ್ನೂ ಹೆಚ್ಚಿನ ಕನ್ನಡ ಸಿನೆಮಾಗಳನ್ನು ಮಾಡಬೇಕೆಂದುಕೊಂಡಿದ್ದೇನೆ" ಎನ್ನುತ್ತಾರೆ ನಿರ್ದೇಶಕ.

ವಾರದ ದಿನಗಳಲ್ಲಿ ಇನ್ನು ಹೆಚ್ಚಿನ ಪ್ರೇಕ್ಷಕರನ್ನು ಮತ್ತು ಕುಟುಂಬಗಳನ್ನು 'ಜಗ್ಗು ದಾದ' ಚಿತ್ರಮಂದಿರಕ್ಕೆ ಸೆಳೆಯಲಿದೆ ಎಂದು ಭರವಸೆ ವ್ಯಕ್ತಪಡಿಸುವ ರಾಘವೇಂದ್ರ "ನಾವು ಎಲ್ಲ ದಾಖಲೆಗಳನ್ನು ಮುರಿಯುವ ಭರವಸೆಯಲ್ಲಿದ್ದೇವೆ" ಎನ್ನುತ್ತಾರೆ.

ಅನ್ಯ ಭಾಷೆಗಳಲ್ಲಿ ಈ ಸಿನೆಮಾದ ರಿಮೇಕ್ ಗಾಗಿ ಅವಕಾಶಗಳು ಬಂದಿವೆಯಂತೆ. ತೆಲುಗು ನಟ ಗೋಪಿಚಂದ್ ಈ ವಾರದಲ್ಲಿ ಸಿನೆಮಾ ನೋಡಲಿದ್ದಾರಂತೆ. "ಬೆಂಗಾಳಿಯ ನಿರ್ದೇಶಕ ರಿಮೇಕ್ ಮಾಡುವ ಉತ್ಸಾಹ ತೋರಿದ್ದಾರೆ" ಎನ್ನುತ್ತಾರೆ ನಿರ್ದೇಶಕ.

'ಜಗ್ಗು ದಾದ' ಸಿನೆಮಾದ ಕನ್ನಡಪ್ರಭ.ಕಾಂ ವಿಮರ್ಶೆಯನ್ನು ನೀವಿಲ್ಲಿ ಓದಬಹುದು..



Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT