ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ಒಂದೂ ಮುಕ್ಕಾಲು ಕೋಟಿಯಲ್ಲಿ 'ದೊಡ್ಮನೆ ಹುಡುಗ'ನ ಅಂತಿಮ ಹಾಡು

ಪುನೀತ್ ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ 'ದೊಡ್ಮನೆ ಹುಡುಗ' ಸಿನೆಮಾದ ಅಂತಿಮ ಹಾಡಿಗೆ ನಿರ್ದೇಶಕ ಸೂರಿ ಅದ್ದೂರಿತನವನ್ನು ತರಲು ಸಜ್ಜಾಗಿದ್ದಾರೆ. ಈ ಹಾಡಿನ ಚಿತ್ರೀಕರಣ

ಬೆಂಗಳೂರು: ಪುನೀತ್ ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ 'ದೊಡ್ಮನೆ ಹುಡುಗ' ಸಿನೆಮಾದ ಅಂತಿಮ ಹಾಡಿಗೆ ನಿರ್ದೇಶಕ ಸೂರಿ ಅದ್ದೂರಿತನವನ್ನು ತರಲು ಸಜ್ಜಾಗಿದ್ದಾರೆ. ಈ ಹಾಡಿನ ಚಿತ್ರೀಕರಣ ಜೂನ್ ೨೨ ರಿಂದ ಪ್ರಾರಂಭವಾಗಲಿದೆ.

"ಇದ್ಕೊಂಡ್ ಹೇಳುವೆ ಅನ್ನದ ತುತ್ತು/ ಕನ್ನಡ ತಾಯಿಗೆ ನನ್ನ ನಿಯತ್ತು/ ದೊಡ್ಡೋರು ಹೇಳವ್ರೆ ನಿಮಗೆ ಗೊತ್ತು/ ಅಭಿಮಾನಿಗಳೇ ನಮ್ಮನೆ ದೇವರು" ಎಂಬ ಸಾಹಿತ್ಯ ಉಳ್ಳ- ಯೋಗರಾಜ್ ಭಟ್ ರಚಿಸಿರುವ ಈ ಹಾಡಿನ ಚಿತ್ರೀಕರಣ ೧.೭೫ ಕೋಟಿ ಬಜೆಟ್ ನಲ್ಲಿ ೮ ದಿನಗಳ ಕಾಲದವರೆಗೆ ನಡೆಯಲಿದೆಯಂತೆ.

ಚಿತ್ರದುರ್ಗದಲ್ಲಿ ಚಿತ್ರೀಕರಣ ಪ್ರಾರಂಭವಾಗಿ, ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿಗಳಲ್ಲಿ ಮುಂದುವರೆದು ಕೊನೆಗೆ ಬೆಂಗಳೂರಿನ ಮಲ್ಲೇಶ್ವರಂ ಆಟದ ಮೈದಾನದಲ್ಲಿ ಚಿತ್ರೀಕರಣ ಅಂತಿಮಗೊಳ್ಳಲಿದೆಯಂತೆ. ಮಂಡ್ಯ ಮತ್ತು ಮೈಸುರಿನಲ್ಲಿಯೂ ಕೆಲವು ದೃಶ್ಯಗಳ ಚಿತ್ರೀಕರಣ ನಡೆಯಲಿದೆ.

ಈ ಹಾಡಿಗಾಗಿ ಚಿತ್ರತಂಡ ೧೪ ಕ್ಯಾಮರಾಗಳನ್ನು ಬಳಸುತ್ತಿದೆ. "ಪ್ರತಿ ಪ್ರದೇಶದಲ್ಲಿ ಸುಮಾರು ಐದರಿಂದ ಆರು ಸಾವಿರ ಜನ ನೆರೆಯಲಿದ್ದಾರೆ" ಎನ್ನುತ್ತಾರೆ ನಿರ್ದೇಶಕ ಸೂರಿ.

"ಈ ಹಾಡು ಅದ್ದೂರಿಯಗಿ ಮೂಡಿ ಬರಲು ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ಅಭಿಮಾನಿಗಳು ಸಹಕರಿಸಲಿದ್ದಾರೆ. ಚಿತ್ರೀಕರಣಗೊಳ್ಳಲಿರುವ ಎಲ್ಲ ಪ್ರದೇಶಗಳಿಗೆ ಅಭಿಮಾನಿಗಳು ವೈಯಕ್ತಿಕವಾಗಿ ಭೇಟಿ ನೀಡಿ ಈ ಹಾಡಿನ ಬಗ್ಗೆ ಸಾರ್ವಜನಿಕರಿಗೆ ತಿಳಿಸಲಿದ್ದಾರೆ. ಈ ಹಾಡಿನಲ್ಲಿ ಪಾಲ್ಗೊಳ್ಳುವವರಿಗೆ ನೀರು ಮತ್ತು ಊಟದ ವ್ಯವಸ್ಥೆ ಮಾಡಲಿದ್ದೇವೆ" ಎನ್ನುತ್ತಾರೆ ನಿರ್ದೇಶಕ.

"ವರನಟ ರಾಜಕುಮಾರ್ ಅವರ- ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು - ಜನಪ್ರಿಯ ಹಾಡಿನ ನಂತರದ ಸ್ಥಾನವನ್ನು ಈ ಹಾಡು ಪಡೆದುಕೊಳ್ಳಲಿದೆ ಎಂಬ ಭರವಸೆ ಇದೆ" ಎನ್ನುತ್ತಾರೆ ಸೂರಿ.

ಈ ಹಾಡನ್ನು ಪುನೀತ್ ರಾಜಕುಮಾರ್ ಅವರೇ ಹಾಡುತ್ತಿದ್ದು, ಹರ್ಷ ನೃತ್ಯ ನಿರ್ದೇಶನ ಮಾಡಲಿದ್ದಾರೆ. ಈ ಹಾಡಿನೊಂದಿಗೆ ಸಿನೆಮಾದ ಚಿತ್ರೀಕರಣ ಸಂಪೂರ್ಣಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT