ಮೇಘನಾ ರಾಜ್ 
ಸಿನಿಮಾ ಸುದ್ದಿ

ಮರಾಠಿ ಸಾಹಿತ್ಯ-ಸಿನೆಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಸ್ಫೂರ್ತಿ

ಇತ್ತೀಚಿನ ಮರಾಠಿ ಬ್ಲಾಕ್ ಬಸ್ಟರ್ ಸಿನೆಮಾ 'ಸೈರಾತ್' ನ ಯಶಸ್ಸಿನಿಂದ ಸ್ಫೂರ್ತಿಗೊಂಡು ಅದನ್ನು ಕನ್ನಡವೂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಿಗೆ ರಿಮೇಕ್ ಮಾಡಲು

ಬೆಂಗಳೂರು: ಇತ್ತೀಚಿನ ಮರಾಠಿ ಬ್ಲಾಕ್ ಬಸ್ಟರ್ ಸಿನೆಮಾ 'ಸೈರಾತ್' ನ ಯಶಸ್ಸಿನಿಂದ ಸ್ಫೂರ್ತಿಗೊಂಡು ಅದನ್ನು ಕನ್ನಡವೂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಿಗೆ ರಿಮೇಕ್ ಮಾಡಲು ರಾಕ್ಲೈನ್ ವೆಂಕಟೇಶ್ ಹಕ್ಕುಗಳನ್ನು ಖರೀದಿಸಿದ್ದರು. ಮತ್ತೊಂದು ತಂಡ ಸುಹಾಸ್ ಶಿರ್ವಾಲ್ಕರ್ ಅವರ ಕಾದಂಬರಿ ಆಧಾರಿತ ೨೦೧೩ರ 'ದುನಿಯಾದ್ರಿ' ಸಿನೆಮಾದಿಂದ ಸ್ಫೂರ್ತಿ ಪಡೆದು ಕನ್ನಡ ಚಿತ್ರಕ್ಕೆ ಸಜ್ಜಾಗಿದ್ದಾರೆ.

ಇದು ಮಸಾಲಾ ಸಿನೆಮಾ ಎನ್ನಲಾಗಿದ್ದು ಆದರೂ ಸೂಕ್ಷ್ಮತೆಯನ್ನು ಮೆರೆಯಲಾಗಿದೆ ಎನ್ನುತ್ತವೆ ಮೂಲಗಳು. ಬಲ್ಲ ಮೂಲಗಳ ಪ್ರಕಾರ ಮೈನಾ ಖ್ಯಾತಿಯ ಚೇತನ್, ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್, ಮೇಘನಾ ರಾಜ್ ಹಾಗೂ ಸುಶ್ಮಿತಾ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಉತ್ತರದ ನಿರ್ಮಾಪಕರು ಇದನ್ನು ನಿರ್ಮಿಸುತ್ತಿದ್ದು ಕನ್ನಡದ ಪ್ರೇಕ್ಷಕರಿಗೆ ಈ ಸಿನೆಮಾ ನೀಡಲು ಚಿತ್ರ ಕಥೆ ಬರೆಯಲು ಕೆಲವು ಬರಹಗಾರರನ್ನು ಆಯ್ಕೆ ಮಾಡಿದ್ದಾರಂತೆ. ಮೂಲಗಳ ಪ್ರಕಾರ ಚೊಚ್ಚಲ ನಿರ್ದೇಶಕ ಕುಮಾರೇಶ್ವರ್ ಈ ಸಿನೆಮಾ ನಿರ್ದೇಶಿಸಲಿದ್ದಾರೆ.

ಅರ್ಜುನ್ ಸರ್ಜಾ ನಿರ್ದೇಶನದ 'ಪ್ರೇಮ ಬರಹ'ದಿಂದ ಚೇತನ್ ಈಗ ಹೊರಬಂದಿದ್ದು 'ಮೈನಾ' ನಂತರದ ಸಿನೆಮಾ ಇದಾಗಲಿದೆ. ರಾಜವರ್ಧನ್ ಅವರಿಗೂ ಇದು ಎರಡನೆ ಸಿನೆಮಾ. ಮೇಘನಾ 'ಭುಜಂಗ' ಮತ್ತು 'ಅಲ್ಲಮ' ಸಿನೆಮಾಗಳ ಬಿಡುಗಡೆಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT