ಮೇಘನಾ ರಾಜ್ 
ಸಿನಿಮಾ ಸುದ್ದಿ

ಮರಾಠಿ ಸಾಹಿತ್ಯ-ಸಿನೆಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಸ್ಫೂರ್ತಿ

ಇತ್ತೀಚಿನ ಮರಾಠಿ ಬ್ಲಾಕ್ ಬಸ್ಟರ್ ಸಿನೆಮಾ 'ಸೈರಾತ್' ನ ಯಶಸ್ಸಿನಿಂದ ಸ್ಫೂರ್ತಿಗೊಂಡು ಅದನ್ನು ಕನ್ನಡವೂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಿಗೆ ರಿಮೇಕ್ ಮಾಡಲು

ಬೆಂಗಳೂರು: ಇತ್ತೀಚಿನ ಮರಾಠಿ ಬ್ಲಾಕ್ ಬಸ್ಟರ್ ಸಿನೆಮಾ 'ಸೈರಾತ್' ನ ಯಶಸ್ಸಿನಿಂದ ಸ್ಫೂರ್ತಿಗೊಂಡು ಅದನ್ನು ಕನ್ನಡವೂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಿಗೆ ರಿಮೇಕ್ ಮಾಡಲು ರಾಕ್ಲೈನ್ ವೆಂಕಟೇಶ್ ಹಕ್ಕುಗಳನ್ನು ಖರೀದಿಸಿದ್ದರು. ಮತ್ತೊಂದು ತಂಡ ಸುಹಾಸ್ ಶಿರ್ವಾಲ್ಕರ್ ಅವರ ಕಾದಂಬರಿ ಆಧಾರಿತ ೨೦೧೩ರ 'ದುನಿಯಾದ್ರಿ' ಸಿನೆಮಾದಿಂದ ಸ್ಫೂರ್ತಿ ಪಡೆದು ಕನ್ನಡ ಚಿತ್ರಕ್ಕೆ ಸಜ್ಜಾಗಿದ್ದಾರೆ.

ಇದು ಮಸಾಲಾ ಸಿನೆಮಾ ಎನ್ನಲಾಗಿದ್ದು ಆದರೂ ಸೂಕ್ಷ್ಮತೆಯನ್ನು ಮೆರೆಯಲಾಗಿದೆ ಎನ್ನುತ್ತವೆ ಮೂಲಗಳು. ಬಲ್ಲ ಮೂಲಗಳ ಪ್ರಕಾರ ಮೈನಾ ಖ್ಯಾತಿಯ ಚೇತನ್, ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್, ಮೇಘನಾ ರಾಜ್ ಹಾಗೂ ಸುಶ್ಮಿತಾ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಉತ್ತರದ ನಿರ್ಮಾಪಕರು ಇದನ್ನು ನಿರ್ಮಿಸುತ್ತಿದ್ದು ಕನ್ನಡದ ಪ್ರೇಕ್ಷಕರಿಗೆ ಈ ಸಿನೆಮಾ ನೀಡಲು ಚಿತ್ರ ಕಥೆ ಬರೆಯಲು ಕೆಲವು ಬರಹಗಾರರನ್ನು ಆಯ್ಕೆ ಮಾಡಿದ್ದಾರಂತೆ. ಮೂಲಗಳ ಪ್ರಕಾರ ಚೊಚ್ಚಲ ನಿರ್ದೇಶಕ ಕುಮಾರೇಶ್ವರ್ ಈ ಸಿನೆಮಾ ನಿರ್ದೇಶಿಸಲಿದ್ದಾರೆ.

ಅರ್ಜುನ್ ಸರ್ಜಾ ನಿರ್ದೇಶನದ 'ಪ್ರೇಮ ಬರಹ'ದಿಂದ ಚೇತನ್ ಈಗ ಹೊರಬಂದಿದ್ದು 'ಮೈನಾ' ನಂತರದ ಸಿನೆಮಾ ಇದಾಗಲಿದೆ. ರಾಜವರ್ಧನ್ ಅವರಿಗೂ ಇದು ಎರಡನೆ ಸಿನೆಮಾ. ಮೇಘನಾ 'ಭುಜಂಗ' ಮತ್ತು 'ಅಲ್ಲಮ' ಸಿನೆಮಾಗಳ ಬಿಡುಗಡೆಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾವೇರಿಗೆ ಸಂಧಾನ ಸೂತ್ರ: ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ ಬರುವುದು ಡೌಟು? ಇದೇ ಕಾರಣ...!

ಪರೀಕ್ಷಾ ವ್ಯವಸ್ಥೆ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ; ಪ್ರಧಾನಿ ಮೋದಿ ಘೋಷಣೆ! Video

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ತುಮಕೂರು: ನಡುರಸ್ತೆಯಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ!

ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ-ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!