ಮೇಘನಾ ರಾಜ್ 
ಸಿನಿಮಾ ಸುದ್ದಿ

ಮರಾಠಿ ಸಾಹಿತ್ಯ-ಸಿನೆಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಸ್ಫೂರ್ತಿ

ಇತ್ತೀಚಿನ ಮರಾಠಿ ಬ್ಲಾಕ್ ಬಸ್ಟರ್ ಸಿನೆಮಾ 'ಸೈರಾತ್' ನ ಯಶಸ್ಸಿನಿಂದ ಸ್ಫೂರ್ತಿಗೊಂಡು ಅದನ್ನು ಕನ್ನಡವೂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಿಗೆ ರಿಮೇಕ್ ಮಾಡಲು

ಬೆಂಗಳೂರು: ಇತ್ತೀಚಿನ ಮರಾಠಿ ಬ್ಲಾಕ್ ಬಸ್ಟರ್ ಸಿನೆಮಾ 'ಸೈರಾತ್' ನ ಯಶಸ್ಸಿನಿಂದ ಸ್ಫೂರ್ತಿಗೊಂಡು ಅದನ್ನು ಕನ್ನಡವೂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಿಗೆ ರಿಮೇಕ್ ಮಾಡಲು ರಾಕ್ಲೈನ್ ವೆಂಕಟೇಶ್ ಹಕ್ಕುಗಳನ್ನು ಖರೀದಿಸಿದ್ದರು. ಮತ್ತೊಂದು ತಂಡ ಸುಹಾಸ್ ಶಿರ್ವಾಲ್ಕರ್ ಅವರ ಕಾದಂಬರಿ ಆಧಾರಿತ ೨೦೧೩ರ 'ದುನಿಯಾದ್ರಿ' ಸಿನೆಮಾದಿಂದ ಸ್ಫೂರ್ತಿ ಪಡೆದು ಕನ್ನಡ ಚಿತ್ರಕ್ಕೆ ಸಜ್ಜಾಗಿದ್ದಾರೆ.

ಇದು ಮಸಾಲಾ ಸಿನೆಮಾ ಎನ್ನಲಾಗಿದ್ದು ಆದರೂ ಸೂಕ್ಷ್ಮತೆಯನ್ನು ಮೆರೆಯಲಾಗಿದೆ ಎನ್ನುತ್ತವೆ ಮೂಲಗಳು. ಬಲ್ಲ ಮೂಲಗಳ ಪ್ರಕಾರ ಮೈನಾ ಖ್ಯಾತಿಯ ಚೇತನ್, ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್, ಮೇಘನಾ ರಾಜ್ ಹಾಗೂ ಸುಶ್ಮಿತಾ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಉತ್ತರದ ನಿರ್ಮಾಪಕರು ಇದನ್ನು ನಿರ್ಮಿಸುತ್ತಿದ್ದು ಕನ್ನಡದ ಪ್ರೇಕ್ಷಕರಿಗೆ ಈ ಸಿನೆಮಾ ನೀಡಲು ಚಿತ್ರ ಕಥೆ ಬರೆಯಲು ಕೆಲವು ಬರಹಗಾರರನ್ನು ಆಯ್ಕೆ ಮಾಡಿದ್ದಾರಂತೆ. ಮೂಲಗಳ ಪ್ರಕಾರ ಚೊಚ್ಚಲ ನಿರ್ದೇಶಕ ಕುಮಾರೇಶ್ವರ್ ಈ ಸಿನೆಮಾ ನಿರ್ದೇಶಿಸಲಿದ್ದಾರೆ.

ಅರ್ಜುನ್ ಸರ್ಜಾ ನಿರ್ದೇಶನದ 'ಪ್ರೇಮ ಬರಹ'ದಿಂದ ಚೇತನ್ ಈಗ ಹೊರಬಂದಿದ್ದು 'ಮೈನಾ' ನಂತರದ ಸಿನೆಮಾ ಇದಾಗಲಿದೆ. ರಾಜವರ್ಧನ್ ಅವರಿಗೂ ಇದು ಎರಡನೆ ಸಿನೆಮಾ. ಮೇಘನಾ 'ಭುಜಂಗ' ಮತ್ತು 'ಅಲ್ಲಮ' ಸಿನೆಮಾಗಳ ಬಿಡುಗಡೆಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT