ಮೇಘನಾ ರಾಜ್ 
ಸಿನಿಮಾ ಸುದ್ದಿ

ಮರಾಠಿ ಸಾಹಿತ್ಯ-ಸಿನೆಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಸ್ಫೂರ್ತಿ

ಇತ್ತೀಚಿನ ಮರಾಠಿ ಬ್ಲಾಕ್ ಬಸ್ಟರ್ ಸಿನೆಮಾ 'ಸೈರಾತ್' ನ ಯಶಸ್ಸಿನಿಂದ ಸ್ಫೂರ್ತಿಗೊಂಡು ಅದನ್ನು ಕನ್ನಡವೂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಿಗೆ ರಿಮೇಕ್ ಮಾಡಲು

ಬೆಂಗಳೂರು: ಇತ್ತೀಚಿನ ಮರಾಠಿ ಬ್ಲಾಕ್ ಬಸ್ಟರ್ ಸಿನೆಮಾ 'ಸೈರಾತ್' ನ ಯಶಸ್ಸಿನಿಂದ ಸ್ಫೂರ್ತಿಗೊಂಡು ಅದನ್ನು ಕನ್ನಡವೂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಿಗೆ ರಿಮೇಕ್ ಮಾಡಲು ರಾಕ್ಲೈನ್ ವೆಂಕಟೇಶ್ ಹಕ್ಕುಗಳನ್ನು ಖರೀದಿಸಿದ್ದರು. ಮತ್ತೊಂದು ತಂಡ ಸುಹಾಸ್ ಶಿರ್ವಾಲ್ಕರ್ ಅವರ ಕಾದಂಬರಿ ಆಧಾರಿತ ೨೦೧೩ರ 'ದುನಿಯಾದ್ರಿ' ಸಿನೆಮಾದಿಂದ ಸ್ಫೂರ್ತಿ ಪಡೆದು ಕನ್ನಡ ಚಿತ್ರಕ್ಕೆ ಸಜ್ಜಾಗಿದ್ದಾರೆ.

ಇದು ಮಸಾಲಾ ಸಿನೆಮಾ ಎನ್ನಲಾಗಿದ್ದು ಆದರೂ ಸೂಕ್ಷ್ಮತೆಯನ್ನು ಮೆರೆಯಲಾಗಿದೆ ಎನ್ನುತ್ತವೆ ಮೂಲಗಳು. ಬಲ್ಲ ಮೂಲಗಳ ಪ್ರಕಾರ ಮೈನಾ ಖ್ಯಾತಿಯ ಚೇತನ್, ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್, ಮೇಘನಾ ರಾಜ್ ಹಾಗೂ ಸುಶ್ಮಿತಾ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಉತ್ತರದ ನಿರ್ಮಾಪಕರು ಇದನ್ನು ನಿರ್ಮಿಸುತ್ತಿದ್ದು ಕನ್ನಡದ ಪ್ರೇಕ್ಷಕರಿಗೆ ಈ ಸಿನೆಮಾ ನೀಡಲು ಚಿತ್ರ ಕಥೆ ಬರೆಯಲು ಕೆಲವು ಬರಹಗಾರರನ್ನು ಆಯ್ಕೆ ಮಾಡಿದ್ದಾರಂತೆ. ಮೂಲಗಳ ಪ್ರಕಾರ ಚೊಚ್ಚಲ ನಿರ್ದೇಶಕ ಕುಮಾರೇಶ್ವರ್ ಈ ಸಿನೆಮಾ ನಿರ್ದೇಶಿಸಲಿದ್ದಾರೆ.

ಅರ್ಜುನ್ ಸರ್ಜಾ ನಿರ್ದೇಶನದ 'ಪ್ರೇಮ ಬರಹ'ದಿಂದ ಚೇತನ್ ಈಗ ಹೊರಬಂದಿದ್ದು 'ಮೈನಾ' ನಂತರದ ಸಿನೆಮಾ ಇದಾಗಲಿದೆ. ರಾಜವರ್ಧನ್ ಅವರಿಗೂ ಇದು ಎರಡನೆ ಸಿನೆಮಾ. ಮೇಘನಾ 'ಭುಜಂಗ' ಮತ್ತು 'ಅಲ್ಲಮ' ಸಿನೆಮಾಗಳ ಬಿಡುಗಡೆಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT