'ಚಕ್ರವರ್ತಿ'ಗಾಗಿ ಗಂಭೀರನಾದ ಸೃಜನ್ 
ಸಿನಿಮಾ ಸುದ್ದಿ

'ಚಕ್ರವರ್ತಿ'ಗಾಗಿ ಗಂಭೀರನಾದ ಸೃಜನ್

ನಟ ಮತ್ತು ಕಿರುತೆರೆ ರಿಯಾಲಿಟಿ ಕಾರ್ಯಕ್ರಮ ನಿರೂಪಕ ಸೃಜನ್ ಲೋಕೇಶ್ ಹೆಸರು ಕೇಳಿದರೆ ತಟ್ಟನೆ ನೆನಪಾಗುವದು ಹಾಸ್ಯ. ಆದರೆ ಅವರು ತಮ್ಮ ಗೆಳೆಯ ನಟ ದರ್ಶನ್ ಜೊತೆಗೆ ನಟಿಸುತ್ತಿರುವ

ಬೆಂಗಳೂರು: ನಟ ಮತ್ತು ಕಿರುತೆರೆ ರಿಯಾಲಿಟಿ ಕಾರ್ಯಕ್ರಮ ನಿರೂಪಕ ಸೃಜನ್ ಲೋಕೇಶ್ ಹೆಸರು ಕೇಳಿದರೆ ತಟ್ಟನೆ ನೆನಪಾಗುವದು ಹಾಸ್ಯ. ಆದರೆ ಅವರು ತಮ್ಮ ಗೆಳೆಯ ನಟ ದರ್ಶನ್ ಜೊತೆಗೆ ನಟಿಸುತ್ತಿರುವ ಮುಂದಿನ ಚಿತ್ರ 'ಚಕ್ರವರ್ತಿ'ಯಲ್ಲಿ ಗಂಭೀರ ಪಾತ್ರ ನಿರ್ವಹಿಸಲಿದ್ದಾರೆ.

ಚಿಂತನ್ ನಿರ್ದೇಶನದ ಈ ಚಿತ್ರದಲ್ಲಿ 'ಎದೆಗಾರಿಕೆ'ಯ ನಂತರ ಮತ್ತೆ ಅಂತಹುದೊಂದು ಪಾತ್ರ ನಿರ್ವಹಿಸಲಿದ್ದಾರೆ.

"ನನ್ನ ಆದ್ಯತೆ ಎಂದಿಗೂ ಜನರನ್ನು ನಗಿಸುವುದು. ಅದರ ಜೊತೆಗೂ ಗಂಭೀರವಾದ ಪಾತ್ರಗಳು ಕೂಡ ನನಗೆ ಹೆಸರು ತಂದುಕೊಟ್ಟಿವೆ. ಅದಕ್ಕೆ ಉದಾಹರಣೆ 'ಎದೆಗಾರಿಕೆ'. ಅಂತಹ ಪಾತ್ರಗಳು ನಟನಲ್ಲಿನ ಬಹುಮುಖ ಸಾಮರ್ಥ್ಯವನ್ನು ಹೊರತರುತ್ತವೆ" ಎನ್ನುತ್ತಾರೆ ಸೃಜನ್.

ಮೈಸೂರಿನ ಸುತ್ತಮುತ್ತ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ನಟ ದರ್ಶನ್ ಮತ್ತು ನಟಿ ದೀಪಾ ಸನ್ನಿಧಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

"ನಾನು ಮತ್ತು ದರ್ಶನ್ ಒಟ್ಟಿಗೆ ನಟಿಸಿದ ಚಿತ್ರಗಳು ಗೆಲ್ಲಬೇಕೆಂಬ ಅಸೆ ನನಗೆ. ಅವರ ಜೊತೆಗೆ ಕೆಲವೇ ಸಿನೆಮಾಗಳಲ್ಲಿ ನಟಿಸಿದ್ದರು ಜಗ್ಗುದಾದಾದಲ್ಲಿ ನಮ್ಮಿಬ್ಬರ ಕೆಮಿಸ್ಟ್ರಿ ಕೆಲಸ ಮಾಡಿದೆ" ಎನ್ನುವ ಅವರು 'ಚಕ್ರವರ್ತಿ'ಯಲ್ಲೂ ಇವರಿಬ್ಬರು ಗೆಳೆಯರಂತೆ.

ಭೂಗತ ಲೋಕದ ಕಥಾ ಹಂದರ ಹೊಂದಿರುವ 'ಚಕ್ರವರ್ತಿ'ಯಲ್ಲಿ ನಟ ದರ್ಶನ್ ಅವರ ಸಹೋದರ ದಿನಕರ್ ಖಳನಾಯಕನ ಪಾತ್ರ ನಿರ್ವಹಿಸಿದ್ದರೆ, ನಟ ಆದಿತ್ಯ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT